<p><strong>ಕುಶಾಲನಗರ</strong>: ಶಿಕ್ಷಕರು ಅರ್ಪಣಾ ಮನಸ್ಸಿನಿಂದ ತೊಡಗಿಸಿಕೊಂಡರೆ ಸರ್ಕಾರಿ ಶಾಲೆಯ ಅಭಿವೃದ್ಧಿ ಸಾಧ್ಯ ಎಂದು ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗಮ್ಮ ಹೇಳಿದರು.<br><br>ರಂಗಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಸ್ತು ಪ್ರದರ್ಶನ, ಮಕ್ಕಳ ಸ್ವರಚಿತ ಕವನರಚನೆ, ಓದುವ ಕಾರ್ಯಕ್ರಮದಲ್ಲಿ ‘ಮಕರಂದ’ ಮಕ್ಕಳ ಬರಹಗಳ ಕೃತಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>ಮಕ್ಕಳ ಬೆಳವಣಿಗೆಗೆ ಈ ರೀತಿಯ ವಿವಿಧ ಪಠ್ಯೇತರ ಚಟುವಟಿಕೆಗಳು ತುಂಬ ಅಗತ್ಯ ಎಂದರು. ಸ್ವತಃ ಮಕ್ಕಳೇ ಕವಿತೆ ರಚಿಸಿರುವುದು ಶ್ಲಾಘನೀಯ. ಎಲ್ಲ ಶಾಲೆಗಳು ಹಮ್ಮಿಕೊಳ್ಳುವಂತೆ ಆಗಬೇಕು ಎಂದರು.<br><br> ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಉದ್ಘಾಟಿಸಿದರು.<br><br> ಶಿಕ್ಷಕಿ ರಮ್ಯಾ ಮೂರ್ನಾಡು ಕೃತಿಯ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಸಾಹಿತಿ ಕೃಪಾದೇವರಾಜ್ ಮಾತನಾಡಿದರು.<br><br> ಸೋಮವಾರಪೇಟೆ ತಾಲ್ಲೂಕು ಶಿಕ್ಷಕ ಸಂಘದ ಅಧ್ಯಕ್ಷ ಬಸವರಾಜು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಸುಷ್ಮಾ, ವೈಶಾಲಿ, ಮುಖ್ಯಶಿಕ್ಷಕಿ ಲೀಲಾವತಿ, ಸಹ ಶಿಕ್ಷಕರಾದ ಸುನೀತಾ, ವೀಣಾ, ರಜನಿ, ಪವಿತ್ರಾ ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಶಿಕ್ಷಕರು ಅರ್ಪಣಾ ಮನಸ್ಸಿನಿಂದ ತೊಡಗಿಸಿಕೊಂಡರೆ ಸರ್ಕಾರಿ ಶಾಲೆಯ ಅಭಿವೃದ್ಧಿ ಸಾಧ್ಯ ಎಂದು ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗಮ್ಮ ಹೇಳಿದರು.<br><br>ರಂಗಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಸ್ತು ಪ್ರದರ್ಶನ, ಮಕ್ಕಳ ಸ್ವರಚಿತ ಕವನರಚನೆ, ಓದುವ ಕಾರ್ಯಕ್ರಮದಲ್ಲಿ ‘ಮಕರಂದ’ ಮಕ್ಕಳ ಬರಹಗಳ ಕೃತಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>ಮಕ್ಕಳ ಬೆಳವಣಿಗೆಗೆ ಈ ರೀತಿಯ ವಿವಿಧ ಪಠ್ಯೇತರ ಚಟುವಟಿಕೆಗಳು ತುಂಬ ಅಗತ್ಯ ಎಂದರು. ಸ್ವತಃ ಮಕ್ಕಳೇ ಕವಿತೆ ರಚಿಸಿರುವುದು ಶ್ಲಾಘನೀಯ. ಎಲ್ಲ ಶಾಲೆಗಳು ಹಮ್ಮಿಕೊಳ್ಳುವಂತೆ ಆಗಬೇಕು ಎಂದರು.<br><br> ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಉದ್ಘಾಟಿಸಿದರು.<br><br> ಶಿಕ್ಷಕಿ ರಮ್ಯಾ ಮೂರ್ನಾಡು ಕೃತಿಯ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಸಾಹಿತಿ ಕೃಪಾದೇವರಾಜ್ ಮಾತನಾಡಿದರು.<br><br> ಸೋಮವಾರಪೇಟೆ ತಾಲ್ಲೂಕು ಶಿಕ್ಷಕ ಸಂಘದ ಅಧ್ಯಕ್ಷ ಬಸವರಾಜು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಸುಷ್ಮಾ, ವೈಶಾಲಿ, ಮುಖ್ಯಶಿಕ್ಷಕಿ ಲೀಲಾವತಿ, ಸಹ ಶಿಕ್ಷಕರಾದ ಸುನೀತಾ, ವೀಣಾ, ರಜನಿ, ಪವಿತ್ರಾ ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>