<p><strong>ಕುಶಾಲನಗರ</strong>: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂಭ್ರಮ, ನಮ್ಮನಡೆ ಪರಿಸರದೆಡೆಗೆ, ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ <br>ನೀಡಲಾಯಿತು.</p>.<p>ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು<br> ಎಂದರು.</p>.<p>ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ <br> ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ. ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು.<br> ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ,ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.</p> <p>ಪ್ರತಿಜ್ಞೆ ಸ್ವೀಕಾರ: ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂಭ್ರಮ, ನಮ್ಮನಡೆ ಪರಿಸರದೆಡೆಗೆ, ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ <br>ನೀಡಲಾಯಿತು.</p>.<p>ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು<br> ಎಂದರು.</p>.<p>ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ <br> ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ. ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು.<br> ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ,ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.</p> <p>ಪ್ರತಿಜ್ಞೆ ಸ್ವೀಕಾರ: ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>