<p><strong>ಕುಶಾಲನಗರ</strong>: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾವೇರಿ ನದಿ ನೀರು ತಗ್ಗು ಪ್ರದೇಶಗಳಾದ ಸಾಯಿ ಬಡಾವಣೆಗೆ ನುಗ್ಗಿ ಮನೆಗಳು ಜಲಾವೃತಗೊಂಡಿರುವ ಜಾಗಗಳಿಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಪುರಸಭೆ, ಕಂದಾಯ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಾಯಿ ಬಡಾವಣೆ ಸಂತ್ರಸ್ತರು ಸಂಸದರ ಬಳಿ ತಮ್ಮ ಅಳಲು ತೋಡಿಕೊಂಡರು.</p>.<p>ಸಂಸದ ಒಡೆಯರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಮಳೆಯಿಂದ ಹಾನಿಗೊಳಗಾದವರಿಗೆ ಅಗತ್ಯ ಪರಿಹಾರ ಶೀಘ್ರದಲ್ಲೇ ದೊರಕಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಅಧಿಕಾರಿ ವರ್ಗದವರು ಸೂಕ್ತ ಕ್ರಮವಹಿಸಿದ್ದರೂ ಕೂಡ ಮಳೆ ಪ್ರಮಾಣ ತಗ್ಗದ ಹೊರತು ಪರಿಸ್ಥಿತಿ ನಿಯಂತ್ರಿಸುವುದು ಕಷ್ಟ. ಇಂತಹ ಪರಿಸ್ಥಿತಿ ಹೊಸ ಬಡಾವಣೆಗಳಲ್ಲಿ ಉಂಟಾಗದಿರುವ ರೀತಿಯಲ್ಲಿ ಪರಿಶೀಲಿಸಿ ಅಧಿಕಾರಿಗಳು ಹೊಸ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದರು.</p>.<p>ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಎಂಜಿನಿಯರ್ ರಂಗರಾಮ್, ಆರೋಗ್ಯ ನಿರೀಕ್ಷಕ ಉದಯ್, ಸದಸ್ಯರಾದ ದಿನೇಶ್, ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾವೇರಿ ನದಿ ನೀರು ತಗ್ಗು ಪ್ರದೇಶಗಳಾದ ಸಾಯಿ ಬಡಾವಣೆಗೆ ನುಗ್ಗಿ ಮನೆಗಳು ಜಲಾವೃತಗೊಂಡಿರುವ ಜಾಗಗಳಿಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಪುರಸಭೆ, ಕಂದಾಯ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಾಯಿ ಬಡಾವಣೆ ಸಂತ್ರಸ್ತರು ಸಂಸದರ ಬಳಿ ತಮ್ಮ ಅಳಲು ತೋಡಿಕೊಂಡರು.</p>.<p>ಸಂಸದ ಒಡೆಯರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಮಳೆಯಿಂದ ಹಾನಿಗೊಳಗಾದವರಿಗೆ ಅಗತ್ಯ ಪರಿಹಾರ ಶೀಘ್ರದಲ್ಲೇ ದೊರಕಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಅಧಿಕಾರಿ ವರ್ಗದವರು ಸೂಕ್ತ ಕ್ರಮವಹಿಸಿದ್ದರೂ ಕೂಡ ಮಳೆ ಪ್ರಮಾಣ ತಗ್ಗದ ಹೊರತು ಪರಿಸ್ಥಿತಿ ನಿಯಂತ್ರಿಸುವುದು ಕಷ್ಟ. ಇಂತಹ ಪರಿಸ್ಥಿತಿ ಹೊಸ ಬಡಾವಣೆಗಳಲ್ಲಿ ಉಂಟಾಗದಿರುವ ರೀತಿಯಲ್ಲಿ ಪರಿಶೀಲಿಸಿ ಅಧಿಕಾರಿಗಳು ಹೊಸ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದರು.</p>.<p>ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಎಂಜಿನಿಯರ್ ರಂಗರಾಮ್, ಆರೋಗ್ಯ ನಿರೀಕ್ಷಕ ಉದಯ್, ಸದಸ್ಯರಾದ ದಿನೇಶ್, ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>