<p><strong>ವಿರಾಜಪೇಟೆ:</strong> ಅಕ್ರಮ ಸಕ್ರಮ ಸಮಿತಿಯ ವಿರಾಜಪೇಟೆ ತಾಲ್ಲೂಕಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಕೆ. ಅಬ್ದುಲ್ ಸಲಾಂ ಅವರನ್ನು ಶುಕ್ರವಾರ ಸಮೀಪದ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ಯುವಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.</p>.<p>ಪುರಸಭೆ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ, ‘ಕಡು ಬಡವರು ಸರ್ಕಾರಿ ಜಾಗದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿದ್ದರೂ, ಇಂದಿಗೂ ಅವರಿಗೆ ದಾಖಲೆಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಸಮಿತಿಯ ಮೂಲಕ ಈ ಕಾರ್ಯ ಸಾಧ್ಯವಾಗಲಿ. ಇದರಿಂದ ಬಡವರು ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳುವಂತಾಗಲಿ’ ಎಂದರು.</p>.<p>ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಜಿತ ಕಾರ್ಯಪ್ಪ ಮಾತನಾಡಿ, ‘ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಅನೇಕ ಕಡುಬಡವರು ತುಂಡು ಭೂಮಿಯ ಹಕ್ಕನ್ನು ಹೊಂದಿಲ್ಲದಿರುವುದು ವಿಷಾದನೀಯ. ಅಕ್ರಮ ಸಕ್ರಮ ಸಮಿತಿಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತಾಗಲಿ’ ಎಂದರು.</p>.<p>ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಟಿ. ಬಷೀರ್ ಮಾತನಾಡಿ, ‘ಗ್ರಾಮದ ರಸ್ತೆ ವಿಸ್ತರಣೆ ಮತ್ತು ಆರೋಗ್ಯ ಕೇಂದ್ರದ ಅವಶ್ಯಕತೆಯಿದ್ದು, ಈ ಬಗ್ಗೆ ಶಾಸಕರ ಗಮನ ಸೆಳೆದು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಿ’ ಎಂದು ಮನವಿ ಮಾಡಿದರು.</p>.<p>ಪುರಸಭೆ ಸದಸ್ಯ ಮತೀನ್, ಕಾಂಗ್ರೆಸ್ ಮುಖಂಡ ಜಿ.ಜಿ. ಮೋಹನ್, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಹಾಗೂ ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ ಮಾತನಾಡಿದರು.</p>.<p>ವೇದಿಕೆಯಲ್ಲಿ ಕಲ್ಲುಬಾಯ್ಸ್ ಸಂಘದ ಅಧ್ಯಕ್ಷ ರಹೀಂ, ಮುಖಂಡ ಜಾಫರ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಅಕ್ರಮ ಸಕ್ರಮ ಸಮಿತಿಯ ವಿರಾಜಪೇಟೆ ತಾಲ್ಲೂಕಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಕೆ. ಅಬ್ದುಲ್ ಸಲಾಂ ಅವರನ್ನು ಶುಕ್ರವಾರ ಸಮೀಪದ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ಯುವಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.</p>.<p>ಪುರಸಭೆ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ, ‘ಕಡು ಬಡವರು ಸರ್ಕಾರಿ ಜಾಗದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿದ್ದರೂ, ಇಂದಿಗೂ ಅವರಿಗೆ ದಾಖಲೆಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಸಮಿತಿಯ ಮೂಲಕ ಈ ಕಾರ್ಯ ಸಾಧ್ಯವಾಗಲಿ. ಇದರಿಂದ ಬಡವರು ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳುವಂತಾಗಲಿ’ ಎಂದರು.</p>.<p>ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಜಿತ ಕಾರ್ಯಪ್ಪ ಮಾತನಾಡಿ, ‘ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಅನೇಕ ಕಡುಬಡವರು ತುಂಡು ಭೂಮಿಯ ಹಕ್ಕನ್ನು ಹೊಂದಿಲ್ಲದಿರುವುದು ವಿಷಾದನೀಯ. ಅಕ್ರಮ ಸಕ್ರಮ ಸಮಿತಿಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತಾಗಲಿ’ ಎಂದರು.</p>.<p>ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಟಿ. ಬಷೀರ್ ಮಾತನಾಡಿ, ‘ಗ್ರಾಮದ ರಸ್ತೆ ವಿಸ್ತರಣೆ ಮತ್ತು ಆರೋಗ್ಯ ಕೇಂದ್ರದ ಅವಶ್ಯಕತೆಯಿದ್ದು, ಈ ಬಗ್ಗೆ ಶಾಸಕರ ಗಮನ ಸೆಳೆದು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಿ’ ಎಂದು ಮನವಿ ಮಾಡಿದರು.</p>.<p>ಪುರಸಭೆ ಸದಸ್ಯ ಮತೀನ್, ಕಾಂಗ್ರೆಸ್ ಮುಖಂಡ ಜಿ.ಜಿ. ಮೋಹನ್, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಹಾಗೂ ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ ಮಾತನಾಡಿದರು.</p>.<p>ವೇದಿಕೆಯಲ್ಲಿ ಕಲ್ಲುಬಾಯ್ಸ್ ಸಂಘದ ಅಧ್ಯಕ್ಷ ರಹೀಂ, ಮುಖಂಡ ಜಾಫರ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>