ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಎಸ್.ಪಿ ಸೂಚನೆ ಚುನಾವಣೆ ಘೋಷಣೆಯಾದ ಕೂಡಲೇ ಬ್ಯಾನರ್ ತೆರವಿಗೆ ನಿರ್ದೇಶನ ಎಲ್ಲರೂ ಕಟ್ಟೆಚ್ಚರದಿಂದಿರಲು ಸಲಹೆ
ಜಾತಿ ಧರ್ಮದ ಮಧ್ಯೆ ವೈಮನಸ್ಸು ಮೂಡಿಸಬಾರದು; ಎಡಿಸಿ ವೀಣಾ ಹೆಚ್ಚುವರಿ ಜಿಲ್ಲಾಧಿಕಾರಿ
ಬಿ.ಎನ್.ವೀಣಾ ಮಾತನಾಡಿ ‘ರಾಜಕೀಯ ಪಕ್ಷವಾಗಲೀ ಅಭ್ಯರ್ಥಿಗಳಾಗಲೀ ಜಾತಿ ಸಮುದಾಯ ಧರ್ಮ ಹಾಗೂ ಭಾಷೆಯನ್ನು ಸೇರಿದಂತೆ ಪರಸ್ಪರ ವೈಮನಸ್ಸು ಮೂಡಿಸುವಂತಹ ಚಟುವಟಿಕೆಗಳಲ್ಲಿ ತೊಡಗಬಾರದು ಈ ಬಗ್ಗೆ ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಗಮನಹರಿಸಬೇಕು’ ಎಂದು ತಿಳಿಸಿದರು. ‘ದೇವಾಲಯ ಮಸೀದಿ ಚರ್ಚ್ಗಳಂತಹ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರ ಕಾರ್ಯಕ್ಕೆ ವೇದಿಕೆಯನ್ನಾಗಿ ಬಳಸಬಾರದು ಈ ಬಗ್ಗೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು’ ಎಂದು ತಿಳಿಸಿದರು. ‘ಮತದಾರರಿಗೆ ಆಮಿಷ ಒಡ್ಡಬಾರದು. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗಡೆ ಪ್ರಚಾರ ಮಾಡಬಾರದು. ಚುನಾವಣೆ ಘೋಷಣೆಯಾಗುವುದಕ್ಕೆ ಮುಂಚಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಬಹುದಾಗಿದೆ. ಚುನಾವಣಾ ಪ್ರಚಾರ ಕೈಗೊಳ್ಳುವ ಬಗ್ಗೆ ಸ್ಥಳ ಮತ್ತು ಸಮಯದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿ ಅನುಮತಿ ಪಡೆಯಬೇಕು. ಮೆರವಣಿಗೆಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯುವುದು ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಬಾರದು’ ಎಂದು ತಿಳಿಸಿದರು.