ಆಸ್ತಿ ಹಕ್ಕುಪತ್ರ ನೀಡಲು ಒತ್ತಾಯ
ಆಸ್ತಿ ಹಕ್ಕು ಪತ್ರಗಳು ಇಲ್ಲದ ಕಾರಣ ಸರ್ಕಾರದ ಸೌಲಭ್ಯಗಳು ಇಲ್ಲಿನ ರೈತರಿಗೆ ಸಿಗುತ್ತಿಲ್ಲ. ಪರಿಸರ ಸೂಕ್ಷ್ಮವಲಯ ಸಿ ಮತ್ತು ಡಿ ಭೂಮಿ ನೆಪದಲ್ಲಿ ಕೃಷಿಕರಿಗೆ ಅನ್ಯಾಯ ಮಾಡಬಾರದು. ಆಸ್ತಿಯ ಹಕ್ಕು ಪತ್ರ ನೀಡದ ಕಾರಣ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಕಂದಾಯ ಇಲಾಖೆ ನಿಯಮಗಳನ್ನು ಸರಳೀಕರಣಗೊಳಿಸಿ ಆಸ್ತಿ ಹಕ್ಕುಪತ್ರಗಳನ್ನು ನೀಡಬೇಕು ಎನ್ನುತ್ತಾರೆ ಮಲ್ಲಳ್ಳಿ ಗ್ರಾಮದ ನಿವಾಸಿ ಗಣೇಶ್