<p><strong>ನಾಪೋಕ್ಲು</strong>: ಕಾವೇರಿ ನದಿ ತೀರದ ಪ್ರವಾಹ ಪೀಡಿತ ಪ್ರದೇಶ ಚೆರಿಯಪರಂಬುವಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕ ಎ.ಎಸ್ ಪೊನ್ನಣ್ಣ ಶನಿವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.</p>.<p>ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಜೀವನ ಸಾಗಿಸುವುದು ಕಷ್ಟಕರವಾಗಿದೆ. ರಸ್ತೆ ಸಂಪರ್ಕ ಕಡಿತಗೊಳ್ಳುತ್ತದೆ. ಜೊತೆಗೆ ರಸ್ತೆಯೂ ಹಾಳಾಗಿದೆ. ಸೂಕ್ತ ಪರಿಹಾರ ಒದಗಿಸುವಂತೆ ಕೋರಿದರು. ಚೆರಿಯಪರಂಬು ನದಿ ದಡದಲ್ಲಿ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಕಂದಾಯ ಇಲಾಖೆಯ ಆದೇಶದಂತೆ ಸ್ಥಳಾಂತರ ಗೊಂಡಿದ್ದೇವೆ. ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಪ್ರವಾಹ ಉಂಟಾದಾಗ ಮನೆಗಳಿಗೆ ನೀರು ನುಗ್ಗದಂತೆ ಮಾಡಲು ಕ್ರಮಕೈಗೊಳ್ಳಲಾಗುವುದು. ನದಿ ತಟವನ್ನು ಎತ್ತರಿಸಲು ₹1.30 ಕೋಟಿ ವೆಚ್ಚದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.</p>.<p>ಶೀಘ್ರದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು. ಎರಡು ಮೋರಿಗಳು ಬಂದ್ ಆಗಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಮಾಚೆಟ್ಟಿರ ಕುಸು ಕುಶಾಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಕಾವೇರಿ ನದಿ ತೀರದ ಪ್ರವಾಹ ಪೀಡಿತ ಪ್ರದೇಶ ಚೆರಿಯಪರಂಬುವಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕ ಎ.ಎಸ್ ಪೊನ್ನಣ್ಣ ಶನಿವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.</p>.<p>ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಜೀವನ ಸಾಗಿಸುವುದು ಕಷ್ಟಕರವಾಗಿದೆ. ರಸ್ತೆ ಸಂಪರ್ಕ ಕಡಿತಗೊಳ್ಳುತ್ತದೆ. ಜೊತೆಗೆ ರಸ್ತೆಯೂ ಹಾಳಾಗಿದೆ. ಸೂಕ್ತ ಪರಿಹಾರ ಒದಗಿಸುವಂತೆ ಕೋರಿದರು. ಚೆರಿಯಪರಂಬು ನದಿ ದಡದಲ್ಲಿ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಕಂದಾಯ ಇಲಾಖೆಯ ಆದೇಶದಂತೆ ಸ್ಥಳಾಂತರ ಗೊಂಡಿದ್ದೇವೆ. ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಪ್ರವಾಹ ಉಂಟಾದಾಗ ಮನೆಗಳಿಗೆ ನೀರು ನುಗ್ಗದಂತೆ ಮಾಡಲು ಕ್ರಮಕೈಗೊಳ್ಳಲಾಗುವುದು. ನದಿ ತಟವನ್ನು ಎತ್ತರಿಸಲು ₹1.30 ಕೋಟಿ ವೆಚ್ಚದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.</p>.<p>ಶೀಘ್ರದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು. ಎರಡು ಮೋರಿಗಳು ಬಂದ್ ಆಗಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಮಾಚೆಟ್ಟಿರ ಕುಸು ಕುಶಾಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>