<p><strong>ಮಡಿಕೇರಿ</strong>: ಇಲ್ಲಿನ ಮೈತ್ರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಉಚಿತ ಆರೋಗ್ಯ ತಪಾಸಣೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯವಿಜ್ಞಾನ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಭಾರತೀಯ ರೆಡ್ಕ್ರಾಸ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಇಲ್ಲಿ ನಡೆಯಿತು.</p>.<p>ರಾಷ್ಟ್ರೀಯ ವೈದ್ಯಕೀಯ ಆಯೋಗದ ಶಿಫಾರಸ್ಸಿನಂತೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ರೋಗರುಜಿನಗಳ ತಡೆಗಟ್ಟುವಿಕೆ ಕುರಿತು ಅರಿವು ಮೂಡಿಸಲು ಹಾಕಿಕೊಂಡಿದ್ದ ಕುಟುಂಬ ದತ್ತು ಕಾರ್ಯಕ್ರಮದಡಿ ಈ ಶಿಬಿರ ನಡೆದಿದ್ದು, ಇದರಲ್ಲಿ ಸಾಮಾನ್ಯ ವೈದ್ಯವಿಜ್ಞಾನ, ಶಸ್ತ್ರಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ, ಮಕ್ಕಳ ವಿಭಾಗ, ಚರ್ಮ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಮೂಳೆ ಮತ್ತು ಕೀಲು, ಸಮುದಾಯದ ವೈದ್ಯಕೀಯ ವಿಭಾಗದ ನುರಿತು ತಜ್ಞರು ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು.</p>.<p>ಭಾರತೀಯ ರೆಡ್ಕ್ರಾಸ್ನ ಸಭಾಪತಿ ಬಿ.ಕೆ.ರವೀಂದ್ರ ರೈ, ಕಾರ್ಯದರ್ಶಿ ಮುರಳೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ಸಮುದಾಯ ವೈದ್ಯವಿಜ್ಞಾನದ ಮುಖ್ಯಸ್ಥ ಡಾ.ರಾಮಚಂದ್ರಕಾಮತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಮೈತ್ರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಉಚಿತ ಆರೋಗ್ಯ ತಪಾಸಣೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯವಿಜ್ಞಾನ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಭಾರತೀಯ ರೆಡ್ಕ್ರಾಸ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಇಲ್ಲಿ ನಡೆಯಿತು.</p>.<p>ರಾಷ್ಟ್ರೀಯ ವೈದ್ಯಕೀಯ ಆಯೋಗದ ಶಿಫಾರಸ್ಸಿನಂತೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ರೋಗರುಜಿನಗಳ ತಡೆಗಟ್ಟುವಿಕೆ ಕುರಿತು ಅರಿವು ಮೂಡಿಸಲು ಹಾಕಿಕೊಂಡಿದ್ದ ಕುಟುಂಬ ದತ್ತು ಕಾರ್ಯಕ್ರಮದಡಿ ಈ ಶಿಬಿರ ನಡೆದಿದ್ದು, ಇದರಲ್ಲಿ ಸಾಮಾನ್ಯ ವೈದ್ಯವಿಜ್ಞಾನ, ಶಸ್ತ್ರಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ, ಮಕ್ಕಳ ವಿಭಾಗ, ಚರ್ಮ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಮೂಳೆ ಮತ್ತು ಕೀಲು, ಸಮುದಾಯದ ವೈದ್ಯಕೀಯ ವಿಭಾಗದ ನುರಿತು ತಜ್ಞರು ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು.</p>.<p>ಭಾರತೀಯ ರೆಡ್ಕ್ರಾಸ್ನ ಸಭಾಪತಿ ಬಿ.ಕೆ.ರವೀಂದ್ರ ರೈ, ಕಾರ್ಯದರ್ಶಿ ಮುರಳೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ಸಮುದಾಯ ವೈದ್ಯವಿಜ್ಞಾನದ ಮುಖ್ಯಸ್ಥ ಡಾ.ರಾಮಚಂದ್ರಕಾಮತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>