<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಬುಧವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಮಂಗಳವಾರ ರಾತ್ರಿಯಿಡೀ ಗಾಳಿ ಸಹಿತ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ. ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ಪ್ರವಾಹದಲ್ಲಿ ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದ್ದು ಸಮುದ್ರದಂತೆ ಕಾಣಿಸುತ್ತಿವೆ.</p>.<p>ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ.<br />ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.</p>.<p>ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗಾಳಿಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಬುಧವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಮಂಗಳವಾರ ರಾತ್ರಿಯಿಡೀ ಗಾಳಿ ಸಹಿತ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ. ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ಪ್ರವಾಹದಲ್ಲಿ ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದ್ದು ಸಮುದ್ರದಂತೆ ಕಾಣಿಸುತ್ತಿವೆ.</p>.<p>ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ.<br />ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.</p>.<p>ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗಾಳಿಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>