<p><strong>ಮಂಗಳೂರು/ ಮೈಸೂರು:</strong> ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ವಿವಿಧೆಡೆ ಗುರುವಾರ ಮಳೆಯಾಗಿದೆ. ಕೆಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಇಡೀ ದಿನ ಶೀತ ಗಾಳಿ ಬೀಸಿದೆ.</p>.<p>ಉಡುಪಿ ಜಿಲ್ಲೆಯ ಕೋಡಿಯಲ್ಲಿ 8.5 ಸೆಂ.ಮೀ, ಪಾಂಡೇಶ್ವರದಲ್ಲಿ 5.7, ವಡ್ಡರ್ಸೆಯಲ್ಲಿ 5, ದಕ್ಷಿಣ ಕನ್ನಡ ಜಿಲ್ಲೆಯ ಸರಪಾಡಿಯಲ್ಲಿ 5 ಸೆಂ.ಮೀ. ಮಳೆಯಾಗಿದೆ. ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗಿನಲ್ಲಿ ಮಳೆ ಸುರಿದಿದೆ.</p>.<p>‘ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೊಡಗು ಸೇರಿದಂತೆ, ದಕ್ಷಿಣಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಚಾಮರಾಜನಗರ, ಶಿವಮೊಗ್ಗ, ಮಂಡ್ಯ, ಮೈಸೂರಿನ ಕೆಲವು ಭಾಗಗಳಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಮಡಿಕೇರಿ, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಕಾಫಿ ಕೊಯ್ಲು ನಡೆದಿದ್ದು, ಕಣದಲ್ಲಿ ಹರಡಿದ್ದ ಕಾಫಿಹಣ್ಣುಗಳು ಹಾಳಾಗಿವೆ. ಗಿಡದಲ್ಲೇ ಇರುವ ಹಣ್ಣುಗಳು ಉದುರುತ್ತಿವೆ. ಬೆಳೆಗಾರರು ಅಪಾರ ನಷ್ಟಕ್ಕೆ ತುತ್ತಾಗಿದ್ದಾರೆ.</p>.<p>50 ಕೆ.ಜಿ ಕಾಫಿಯ ಚೀಲವೊಂದಕ್ಕೆ ₹ 7,000ಕ್ಕೂ ಅಧಿಕ ದರವಿದೆ. ಈ ವರ್ಷದ ಅತಿ ಹೆಚ್ಚಿನ ದರವಿದು. ಆದರೆ, ಈಗ ಬೀಳುತ್ತಿರುವ ಮಳೆ ಬೆಳೆಗಾರರ ನಿರೀಕ್ಷೆ ಕಮರುವಂತೆ ಮಾಡಿದೆ.</p>.<p>‘ಅಡಿಕೆ ಕೊಯಿಲು ನಡೆಯುತ್ತಿದ್ದು, ಸುಲಿದ ಅಡಿಕೆಯನ್ನು ಬೇಯಿಸಲು ಮತ್ತು ಒಣಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರೀಕ್ಷಿಸಿದ ಬೆಲೆ ಸಿಗುವುದು ಕಷ್ಟ’ ಎಂದು ರೈತರು ಅಸಹಾಯಕತೆ ತೋಡಿಕೊಂಡಿದ್ದಾರೆ. </p>.<p> <strong>ದ.ಕ ಉಡುಪಿ ‘ಯೆಲ್ಲೊ ಅಲರ್ಟ್’</strong> </p><p>ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳು ಸೇರಿದಂತೆ ಕರಾವಳಿಯಲ್ಲಿ ಬುಧವಾರದಿಂದ ಮಳೆಯಾಗುತ್ತಿದೆ. ಈ ಎರಡು ಜಿಲ್ಲೆಗಳಿಗೆ ಇದೇ 5ರಂದು ಸಹ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು/ ಮೈಸೂರು:</strong> ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ವಿವಿಧೆಡೆ ಗುರುವಾರ ಮಳೆಯಾಗಿದೆ. ಕೆಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಇಡೀ ದಿನ ಶೀತ ಗಾಳಿ ಬೀಸಿದೆ.</p>.<p>ಉಡುಪಿ ಜಿಲ್ಲೆಯ ಕೋಡಿಯಲ್ಲಿ 8.5 ಸೆಂ.ಮೀ, ಪಾಂಡೇಶ್ವರದಲ್ಲಿ 5.7, ವಡ್ಡರ್ಸೆಯಲ್ಲಿ 5, ದಕ್ಷಿಣ ಕನ್ನಡ ಜಿಲ್ಲೆಯ ಸರಪಾಡಿಯಲ್ಲಿ 5 ಸೆಂ.ಮೀ. ಮಳೆಯಾಗಿದೆ. ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗಿನಲ್ಲಿ ಮಳೆ ಸುರಿದಿದೆ.</p>.<p>‘ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೊಡಗು ಸೇರಿದಂತೆ, ದಕ್ಷಿಣಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಚಾಮರಾಜನಗರ, ಶಿವಮೊಗ್ಗ, ಮಂಡ್ಯ, ಮೈಸೂರಿನ ಕೆಲವು ಭಾಗಗಳಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಮಡಿಕೇರಿ, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಕಾಫಿ ಕೊಯ್ಲು ನಡೆದಿದ್ದು, ಕಣದಲ್ಲಿ ಹರಡಿದ್ದ ಕಾಫಿಹಣ್ಣುಗಳು ಹಾಳಾಗಿವೆ. ಗಿಡದಲ್ಲೇ ಇರುವ ಹಣ್ಣುಗಳು ಉದುರುತ್ತಿವೆ. ಬೆಳೆಗಾರರು ಅಪಾರ ನಷ್ಟಕ್ಕೆ ತುತ್ತಾಗಿದ್ದಾರೆ.</p>.<p>50 ಕೆ.ಜಿ ಕಾಫಿಯ ಚೀಲವೊಂದಕ್ಕೆ ₹ 7,000ಕ್ಕೂ ಅಧಿಕ ದರವಿದೆ. ಈ ವರ್ಷದ ಅತಿ ಹೆಚ್ಚಿನ ದರವಿದು. ಆದರೆ, ಈಗ ಬೀಳುತ್ತಿರುವ ಮಳೆ ಬೆಳೆಗಾರರ ನಿರೀಕ್ಷೆ ಕಮರುವಂತೆ ಮಾಡಿದೆ.</p>.<p>‘ಅಡಿಕೆ ಕೊಯಿಲು ನಡೆಯುತ್ತಿದ್ದು, ಸುಲಿದ ಅಡಿಕೆಯನ್ನು ಬೇಯಿಸಲು ಮತ್ತು ಒಣಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರೀಕ್ಷಿಸಿದ ಬೆಲೆ ಸಿಗುವುದು ಕಷ್ಟ’ ಎಂದು ರೈತರು ಅಸಹಾಯಕತೆ ತೋಡಿಕೊಂಡಿದ್ದಾರೆ. </p>.<p> <strong>ದ.ಕ ಉಡುಪಿ ‘ಯೆಲ್ಲೊ ಅಲರ್ಟ್’</strong> </p><p>ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳು ಸೇರಿದಂತೆ ಕರಾವಳಿಯಲ್ಲಿ ಬುಧವಾರದಿಂದ ಮಳೆಯಾಗುತ್ತಿದೆ. ಈ ಎರಡು ಜಿಲ್ಲೆಗಳಿಗೆ ಇದೇ 5ರಂದು ಸಹ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>