<p><strong>ಮಡಿಕೇರಿ/ಮಂಗಳೂರು/ ಕಲಬುರಗಿ/ಕಾರವಾರ:</strong> ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿ ದಂತೆ ರಾಜ್ಯದ ಹಲವೆಡೆ ಶನಿವಾರವೂ ಬಿರುಸಿನ ಮಳೆ ಮುಂದುವರಿದಿದೆ.</p><p>ಕೊಡಗಿನ ಭಾಗಮಂಡಲ, ಸಂಪಾಜೆ, ನಾಪೋಕ್ಲು, ಶಾಂತಳ್ಳಿ, ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿದೆ. ಹಾರಂಗಿ ಜಲಾಶಯದ ಒಳ ಹರಿವು ಮತ್ತೆ ಏರಿಕೆಯಾಗಿದ್ದು, ಸದ್ಯ 3 ಸಾವಿರ ಕ್ಯುಸೆಕ್ ದಾಟಿದೆ.</p><p>ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 12 ಸೆಂ.ಮೀ<br>ನಷ್ಟು ಮಳೆ ಸುರಿದಿದೆ. ಸಂಪಾಜೆ ಹೋಬಳಿಯಲ್ಲಿ 9, ನಾಪೋಕ್ಲುವಿನಲ್ಲಿ 8, ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 7, ವಿರಾಜಪೇಟೆ ತಾಲ್ಲೂಕಿನ ಅಮ್ಮಿತ್ತಿಯಲ್ಲಿ 6, ಮಡಿಕೇರಿ, ವಿರಾಜಪೇಟೆ ಸುತ್ತಮುತ್ತ 5, ಪೊನ್ನಂಪೇಟೆ ತಾಲ್ಲೂಕಿನಲ್ಲಿ 4 ಸೆಂ.ಮೀ.ನಷ್ಟು ಮಳೆಯಾಗಿದೆ.</p><p>ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಿರುಸಿನ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ರಭಸದ ಮಳೆ ಸುರಿಯಿತು. ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಸಾಧಾರಣ ಮಳೆ ಸುರಿಯಿತು. ಮಳೆಯಿಂದ ನಗರದ ಕೆಲ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದವು.</p><p>ಭಾನುವಾರ, ಸೋಮವಾರ ಜಿಲ್ಲೆ ಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ತಗ್ಗು ಪ್ರದೇಶಗಳಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.</p><p>ಹುಬ್ಬಳ್ಳಿ– ಧಾರವಾಡದಲ್ಲಿ ಕೆಲ ಹೊತ್ತು ತುಂತುರು ಮಳೆಯಾಗಿದೆ.</p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಕೊಪ್ಪಳ, ಕಾರಟಗಿ, ಕುಷ್ಟಗಿ, ಯಲಬುರ್ಗಾ ಹಾಗೂ ತಾವರಗೇರಾದಲ್ಲಿ ಅರ್ಧ ತಾಸು ಉತ್ತಮ ಮಳೆ ಸುರಿದಿದೆ.</p><p>ಕಲಬುರಗಿ ನಗರದಲ್ಲಿಯೂ ಕೆಲ ಹೊತ್ತು ಬಿರುಸಿನ ಮಳೆ ಸುರಿಯಿತು. ಆಳಂದ ಪಟ್ಟಣ ಹಾಗೂ ಯಾದಗಿರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.</p>.<h2><strong>ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಮಳೆ</strong></h2><p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ, ಶನಿವಾರವೂ ಸುರಿಯಿತು. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.</p><p>ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಸುರಿದಿದ್ದು, ಸಂಜೆ ಬಳಿಕ ಬಿರುಸುಗೊಂಡಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯ ಮರವಂತೆ 16 ಸೆಂ.ಮೀ., ಕಿರಿಮಂಜೇಶ್ವರ 15, ವಡ್ಡರ್ಸೆ 13, ಹಂದಾಡಿ 13, ಹರದಳ್ಳಿ–ನಂದಳ್ಳಿ 13, ರೆಂಜಾಳ, ಚಿತ್ತೂರು, ಮಡಾಮಕ್ಕಿ, ಹಳ್ಳಿಹೊಳೆ, ಹೆಗ್ಗುಂಜೆ 12, ದಕ್ಷಿಣ ಕನ್ನಡ ಜಿಲ್ಲೆಯ ಚೆನೈತ್ತೋಡಿ 15, ಬಳೆಂಜ 13, ಕಲ್ಮಡ್ಕ, ಕುಕ್ಕಿಪಾಡಿ 12, ಕಾವಳಮೂಡೂರು, ಮರೋಡಿ, ಅಂಡಿಂಜೆ, ಶಿರ್ತಾಡಿಯಲ್ಲಿ 12, ಶಿರಾಡಿ, ರಾಯಿ, ತಲಪಾಡಿಯಲ್ಲಿ 11 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ/ಮಂಗಳೂರು/ ಕಲಬುರಗಿ/ಕಾರವಾರ:</strong> ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿ ದಂತೆ ರಾಜ್ಯದ ಹಲವೆಡೆ ಶನಿವಾರವೂ ಬಿರುಸಿನ ಮಳೆ ಮುಂದುವರಿದಿದೆ.</p><p>ಕೊಡಗಿನ ಭಾಗಮಂಡಲ, ಸಂಪಾಜೆ, ನಾಪೋಕ್ಲು, ಶಾಂತಳ್ಳಿ, ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿದೆ. ಹಾರಂಗಿ ಜಲಾಶಯದ ಒಳ ಹರಿವು ಮತ್ತೆ ಏರಿಕೆಯಾಗಿದ್ದು, ಸದ್ಯ 3 ಸಾವಿರ ಕ್ಯುಸೆಕ್ ದಾಟಿದೆ.</p><p>ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 12 ಸೆಂ.ಮೀ<br>ನಷ್ಟು ಮಳೆ ಸುರಿದಿದೆ. ಸಂಪಾಜೆ ಹೋಬಳಿಯಲ್ಲಿ 9, ನಾಪೋಕ್ಲುವಿನಲ್ಲಿ 8, ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 7, ವಿರಾಜಪೇಟೆ ತಾಲ್ಲೂಕಿನ ಅಮ್ಮಿತ್ತಿಯಲ್ಲಿ 6, ಮಡಿಕೇರಿ, ವಿರಾಜಪೇಟೆ ಸುತ್ತಮುತ್ತ 5, ಪೊನ್ನಂಪೇಟೆ ತಾಲ್ಲೂಕಿನಲ್ಲಿ 4 ಸೆಂ.ಮೀ.ನಷ್ಟು ಮಳೆಯಾಗಿದೆ.</p><p>ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಿರುಸಿನ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ರಭಸದ ಮಳೆ ಸುರಿಯಿತು. ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಸಾಧಾರಣ ಮಳೆ ಸುರಿಯಿತು. ಮಳೆಯಿಂದ ನಗರದ ಕೆಲ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದವು.</p><p>ಭಾನುವಾರ, ಸೋಮವಾರ ಜಿಲ್ಲೆ ಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ತಗ್ಗು ಪ್ರದೇಶಗಳಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.</p><p>ಹುಬ್ಬಳ್ಳಿ– ಧಾರವಾಡದಲ್ಲಿ ಕೆಲ ಹೊತ್ತು ತುಂತುರು ಮಳೆಯಾಗಿದೆ.</p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಕೊಪ್ಪಳ, ಕಾರಟಗಿ, ಕುಷ್ಟಗಿ, ಯಲಬುರ್ಗಾ ಹಾಗೂ ತಾವರಗೇರಾದಲ್ಲಿ ಅರ್ಧ ತಾಸು ಉತ್ತಮ ಮಳೆ ಸುರಿದಿದೆ.</p><p>ಕಲಬುರಗಿ ನಗರದಲ್ಲಿಯೂ ಕೆಲ ಹೊತ್ತು ಬಿರುಸಿನ ಮಳೆ ಸುರಿಯಿತು. ಆಳಂದ ಪಟ್ಟಣ ಹಾಗೂ ಯಾದಗಿರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.</p>.<h2><strong>ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಮಳೆ</strong></h2><p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ, ಶನಿವಾರವೂ ಸುರಿಯಿತು. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.</p><p>ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಸುರಿದಿದ್ದು, ಸಂಜೆ ಬಳಿಕ ಬಿರುಸುಗೊಂಡಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯ ಮರವಂತೆ 16 ಸೆಂ.ಮೀ., ಕಿರಿಮಂಜೇಶ್ವರ 15, ವಡ್ಡರ್ಸೆ 13, ಹಂದಾಡಿ 13, ಹರದಳ್ಳಿ–ನಂದಳ್ಳಿ 13, ರೆಂಜಾಳ, ಚಿತ್ತೂರು, ಮಡಾಮಕ್ಕಿ, ಹಳ್ಳಿಹೊಳೆ, ಹೆಗ್ಗುಂಜೆ 12, ದಕ್ಷಿಣ ಕನ್ನಡ ಜಿಲ್ಲೆಯ ಚೆನೈತ್ತೋಡಿ 15, ಬಳೆಂಜ 13, ಕಲ್ಮಡ್ಕ, ಕುಕ್ಕಿಪಾಡಿ 12, ಕಾವಳಮೂಡೂರು, ಮರೋಡಿ, ಅಂಡಿಂಜೆ, ಶಿರ್ತಾಡಿಯಲ್ಲಿ 12, ಶಿರಾಡಿ, ರಾಯಿ, ತಲಪಾಡಿಯಲ್ಲಿ 11 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>