<p>ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದು ನಿರ್ವಹಿಸಲು ಸಂಘ, ಸಂಸ್ಥೆಗಳು ಸಿದ್ದರಿದ್ದರೆ ಅದಕ್ಕೆ ಅವಕಾಶ ಇದೆ ಎಂದು ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ ರೇಖಾ ತಿಳಿಸಿದರು.</p>.<p>ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಈಚೆಗೆ ನಡೆದ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೊಡಗಿನಲ್ಲಿ ನೂರಾರು ಪ್ರಾಚೀನ ಸ್ನಾರಕಗಳಿದ್ದು ಇವುಗಳ ಸಂರಕ್ಷಣೆ ನಿಟ್ಟಿನಲ್ಲಿ ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.</p>.<p>ವೀರಗಲ್ಲು, ಮಾಸ್ತಿಗಲ್ಲು ಸೇರಿದಂತೆ ಪ್ರಾಚೀನ ದೇವಾಲಯಗಳು, ಶಿಲೆಗಳು ಕಂಡುಬಂದಲ್ಲಿ ಅವುಗಳ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡುವಂತೆಯೂ ರೇಖಾ ವಿನಂತಿಸಿದರು.</p>.<p>ಪ್ರಾಚೀನ ಸ್ಮಾರಕಗಳು ನಮ್ಮ ದೇಶದ ಭವ್ಯ ಇತಿಹಾಸದ ಮಹತ್ವವನ್ನು ಸಾರಿಹೇಳುತ್ತವೆ. ಇಂತಹ ಸ್ಮಾರಕಗಳ ಸಂರಕ್ಷಣೆ ಭವಿಷ್ಯದ ದೖಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಗೆ ಸಾರ್ವಜನಿಕರೂ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.</p>.<p>ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಅಧ್ಯಕ್ಷ ಕಿಗ್ಗಾಲು ಹರೀಶ್, ಕಾರ್ಯದರ್ಶಿ ಕಿರಣ್ ಕುಂದರ್, ಸಹಾಯಕ ಗವರ್ನರ್ ದೇವಣಿರ ಕಿರಣ್, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್, ವಸಂತ್ ಕುಮಾರ್ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದು ನಿರ್ವಹಿಸಲು ಸಂಘ, ಸಂಸ್ಥೆಗಳು ಸಿದ್ದರಿದ್ದರೆ ಅದಕ್ಕೆ ಅವಕಾಶ ಇದೆ ಎಂದು ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ ರೇಖಾ ತಿಳಿಸಿದರು.</p>.<p>ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಈಚೆಗೆ ನಡೆದ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೊಡಗಿನಲ್ಲಿ ನೂರಾರು ಪ್ರಾಚೀನ ಸ್ನಾರಕಗಳಿದ್ದು ಇವುಗಳ ಸಂರಕ್ಷಣೆ ನಿಟ್ಟಿನಲ್ಲಿ ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.</p>.<p>ವೀರಗಲ್ಲು, ಮಾಸ್ತಿಗಲ್ಲು ಸೇರಿದಂತೆ ಪ್ರಾಚೀನ ದೇವಾಲಯಗಳು, ಶಿಲೆಗಳು ಕಂಡುಬಂದಲ್ಲಿ ಅವುಗಳ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡುವಂತೆಯೂ ರೇಖಾ ವಿನಂತಿಸಿದರು.</p>.<p>ಪ್ರಾಚೀನ ಸ್ಮಾರಕಗಳು ನಮ್ಮ ದೇಶದ ಭವ್ಯ ಇತಿಹಾಸದ ಮಹತ್ವವನ್ನು ಸಾರಿಹೇಳುತ್ತವೆ. ಇಂತಹ ಸ್ಮಾರಕಗಳ ಸಂರಕ್ಷಣೆ ಭವಿಷ್ಯದ ದೖಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಗೆ ಸಾರ್ವಜನಿಕರೂ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.</p>.<p>ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಅಧ್ಯಕ್ಷ ಕಿಗ್ಗಾಲು ಹರೀಶ್, ಕಾರ್ಯದರ್ಶಿ ಕಿರಣ್ ಕುಂದರ್, ಸಹಾಯಕ ಗವರ್ನರ್ ದೇವಣಿರ ಕಿರಣ್, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್, ವಸಂತ್ ಕುಮಾರ್ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>