<p><strong>ಮಡಿಕೇರಿ:</strong> ಇದುವರೆಗೂ ಆರೆಂಜ್ ಅಲರ್ಟ್ ನೀಡಲಾಗುತ್ತಿದ್ದ ಕೊಡಗು ಜಿಲ್ಲೆಗೆ ಈಗ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಅತಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ.</p><p>ಈ ಮಧ್ಯೆ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮಂಗಳವಾರ ಮುಂದುವರಿದಿದೆ.</p><p>ಐಗೂರು ಗ್ರಾಮದ ಬಳಿಯ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಭೇತ್ರಿಯಲ್ಲಿ ಕಾವೇರಿ ನದಿ ಭೋರ್ಗರೆಯುತ ಹರಿಯುತ್ತಿದೆ.</p><p>ಕುಶಾಲನಗರ ತಾಲ್ಲೂಕು ಸುಂಟಿಕೊಪ್ಪ ಹೋಬಳಿಯ ಉಲುಗುಲಿ ಗ್ರಾಮದ ನಿವಾಸಿ ಗಂಗಮ್ಮ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.</p><p>ಸೋಮವಾರಪೇಟೆ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ಪೊನ್ನಮ್ಮ ಚಿಯಣ್ಣ ಅವರ ಮನೆ ತೀವ್ರಗಾಳಿ ಹಾಗೂ ಮಳೆಯಿಂದ ಮನೆಯ ಚಾವಣಿ ಹಾನಿಯಾಗಿದೆ.</p><p>ಮಣ್ಣು ಕುಸಿದು ಹಾನಿಯಾಗಿದ್ದ ತಾಲ್ಲೂಕಿನ ಕೊಯನಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಪರಿಕರಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವು ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿಯ ಸಹಾಯದಿಂದ ಹೊರಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇದುವರೆಗೂ ಆರೆಂಜ್ ಅಲರ್ಟ್ ನೀಡಲಾಗುತ್ತಿದ್ದ ಕೊಡಗು ಜಿಲ್ಲೆಗೆ ಈಗ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಅತಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ.</p><p>ಈ ಮಧ್ಯೆ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮಂಗಳವಾರ ಮುಂದುವರಿದಿದೆ.</p><p>ಐಗೂರು ಗ್ರಾಮದ ಬಳಿಯ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಭೇತ್ರಿಯಲ್ಲಿ ಕಾವೇರಿ ನದಿ ಭೋರ್ಗರೆಯುತ ಹರಿಯುತ್ತಿದೆ.</p><p>ಕುಶಾಲನಗರ ತಾಲ್ಲೂಕು ಸುಂಟಿಕೊಪ್ಪ ಹೋಬಳಿಯ ಉಲುಗುಲಿ ಗ್ರಾಮದ ನಿವಾಸಿ ಗಂಗಮ್ಮ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.</p><p>ಸೋಮವಾರಪೇಟೆ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ಪೊನ್ನಮ್ಮ ಚಿಯಣ್ಣ ಅವರ ಮನೆ ತೀವ್ರಗಾಳಿ ಹಾಗೂ ಮಳೆಯಿಂದ ಮನೆಯ ಚಾವಣಿ ಹಾನಿಯಾಗಿದೆ.</p><p>ಮಣ್ಣು ಕುಸಿದು ಹಾನಿಯಾಗಿದ್ದ ತಾಲ್ಲೂಕಿನ ಕೊಯನಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಪರಿಕರಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವು ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿಯ ಸಹಾಯದಿಂದ ಹೊರಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>