<p><strong>ಕುಶಾಲನಗರ</strong>: ಹಾರಂಗಿ ಜಲಾಶಯದಿಂದ ಮೂರು ಜಿಲ್ಲೆಗಳ ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಈ ಭಾಗದ ರೈತರ ಬದುಕು ಹಸನಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಇಲ್ಲಿನ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಮಾಜಿ ಮುಖ್ಯಂಮತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಏರ್ಪಡಿಸಿದ್ದ ಹಾರಂಗಿ ಜಲಾಶಯದ ಬಗ್ಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಳೆದ ಐದು ದಶಕಗಳ ಹಿಂದೆ ನಿರ್ಮಾಣವಾದ ಹಾರಂಗಿ ಅಣೆಕಟ್ಟೆಯಿಂದ ಐದು ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಿದೆ. ಜಮೀನು ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಿ ಪುನರ್ವಸತಿ ಕಲ್ಪಿಸಿದೆ ಎಂದರು. ಅಣೆಕಟ್ಟುಗಳ ಪ್ರಾಮುಖ್ಯತೆ ಹೆಚ್ಚಾಗಿದೆ. ಪ್ರವಾಹವನ್ನು ತಡೆಗಟ್ಟಲು, ಜೀವಗಳ ಮತ್ತು ಆಸ್ತಿ ಹಾನಿಗಳಿಗೆ ಕಡಿವಾಣ ಹಾಕಲು ಇದರಿಂದ ಅನುಕೂಲವಾಗಿದೆ. ನೀರನ್ನು ಸಂರಕ್ಷಿಸಲು ನದಿಗಳು, ತೊರೆಗಳು ಅಥವಾ ನದಿಮುಖಗಳ ಮೇಲೆ ನಿರ್ಮಿಸಲಾದ ರಚನೆಯಾಗಿದೆ. ಕೈಗಾರಿಕಾ ಮತ್ತು ನೀರಾವರಿ ಉದ್ದೇಶಗಳಿಗಾಗಿ ಜನರಿಗೆ ಸಾಕಷ್ಟು ನೀರನ್ನು ಪೂರೈಸಲು ಇದು ನೇರವಾಗಿ ಸಹಾಯ ಮಾಡುತ್ತದೆ. ಜೊತೆಗೆ ಜಲವಿದ್ಯುತ್ ಉತ್ಪಾದನೆಯನ್ನು ಒಳಗೊಂಡಿದೆ ಎಂದರು.</p>.<p>ಜಲಾಶಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಮಾಡಬೇಕು, ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು. ಎಂಜಿನಿಯರ್ ವಿದ್ಯಾರ್ಥಿಗಳಿಗೆ ಜಲಾಶಯ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ಅಣೆಕಟ್ಟೆಯ ಉಪಯೋಗಗಳ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ನೀರಾವರಿ ಅಧಿಕಾರಿಗಳು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಶಾಸಕರ ಸಹಕಾರದಿಂದ ₹2 ಕೋಟಿ ಅನುದಾನ ಮಂಜೂರುರಾಗಿದೆ. ಈ ಅನುದಾನದಲ್ಲಿ ಸಂಸ್ಥೆಯ ಸುತ್ತಲು ಕಾಂಪೌಂಡ್ ಹಾಗೂ ಪ್ರವೇಶ ದ್ವಾರದಲ್ಲಿ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.</p>.<p>ಕನ್ನಡಸಿರಿ ಬಳಗದ ಸಂಚಾಲಕ ಲೋಕೇಶ್ ಸಾಗರ ಮಾತನಾಡಿ, ಹಾರಂಗಿ ಜಲಾಶಯ ನಿರ್ಮಾಣವಾಗಲು ಕಾರಣಕರ್ತರಾದ ಮಾಜಿ ಮುಖ್ಯಂಮತ್ರಿ ವೀರೇಂದ್ರ ಪಾಟೀಲ್ ಅವರನ್ನು ಸ್ಮರಿಸಬೇಕಾಗಿದೆ. ಜಲಾಶಯದಿಂದ ಸಾವಿರಾರು ಹೆಕ್ಟೇರ್ ಒಣಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಸಾವಿರಾರು ರೈತರ ಬಾಳಿಗೆ ಬೆಳಕಾಗಿದೆ ಎಂದರು.</p>.<p>ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಸಿದ್ದರಾಜು, ಕಿರಣ್, ಇಡಿಸಿಎಲ್ ವಿದ್ಯುತ್ ಉತ್ಪಾದನಾ ಘಟಕದ ವ್ಯವಸ್ಥಾಪಕ <br /> ಶಿವಸುಬ್ರಮಣ್ಯಂ, ಕೊಡಗು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಕಾರ್ಯದರ್ಶಿ ಹಂಡ್ರಂಗಿ ನಾಗರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಹಾರಂಗಿ ಜಲಾಶಯದಿಂದ ಮೂರು ಜಿಲ್ಲೆಗಳ ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಈ ಭಾಗದ ರೈತರ ಬದುಕು ಹಸನಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಇಲ್ಲಿನ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಮಾಜಿ ಮುಖ್ಯಂಮತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಏರ್ಪಡಿಸಿದ್ದ ಹಾರಂಗಿ ಜಲಾಶಯದ ಬಗ್ಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಳೆದ ಐದು ದಶಕಗಳ ಹಿಂದೆ ನಿರ್ಮಾಣವಾದ ಹಾರಂಗಿ ಅಣೆಕಟ್ಟೆಯಿಂದ ಐದು ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಿದೆ. ಜಮೀನು ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಿ ಪುನರ್ವಸತಿ ಕಲ್ಪಿಸಿದೆ ಎಂದರು. ಅಣೆಕಟ್ಟುಗಳ ಪ್ರಾಮುಖ್ಯತೆ ಹೆಚ್ಚಾಗಿದೆ. ಪ್ರವಾಹವನ್ನು ತಡೆಗಟ್ಟಲು, ಜೀವಗಳ ಮತ್ತು ಆಸ್ತಿ ಹಾನಿಗಳಿಗೆ ಕಡಿವಾಣ ಹಾಕಲು ಇದರಿಂದ ಅನುಕೂಲವಾಗಿದೆ. ನೀರನ್ನು ಸಂರಕ್ಷಿಸಲು ನದಿಗಳು, ತೊರೆಗಳು ಅಥವಾ ನದಿಮುಖಗಳ ಮೇಲೆ ನಿರ್ಮಿಸಲಾದ ರಚನೆಯಾಗಿದೆ. ಕೈಗಾರಿಕಾ ಮತ್ತು ನೀರಾವರಿ ಉದ್ದೇಶಗಳಿಗಾಗಿ ಜನರಿಗೆ ಸಾಕಷ್ಟು ನೀರನ್ನು ಪೂರೈಸಲು ಇದು ನೇರವಾಗಿ ಸಹಾಯ ಮಾಡುತ್ತದೆ. ಜೊತೆಗೆ ಜಲವಿದ್ಯುತ್ ಉತ್ಪಾದನೆಯನ್ನು ಒಳಗೊಂಡಿದೆ ಎಂದರು.</p>.<p>ಜಲಾಶಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಮಾಡಬೇಕು, ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು. ಎಂಜಿನಿಯರ್ ವಿದ್ಯಾರ್ಥಿಗಳಿಗೆ ಜಲಾಶಯ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ಅಣೆಕಟ್ಟೆಯ ಉಪಯೋಗಗಳ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ನೀರಾವರಿ ಅಧಿಕಾರಿಗಳು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಶಾಸಕರ ಸಹಕಾರದಿಂದ ₹2 ಕೋಟಿ ಅನುದಾನ ಮಂಜೂರುರಾಗಿದೆ. ಈ ಅನುದಾನದಲ್ಲಿ ಸಂಸ್ಥೆಯ ಸುತ್ತಲು ಕಾಂಪೌಂಡ್ ಹಾಗೂ ಪ್ರವೇಶ ದ್ವಾರದಲ್ಲಿ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.</p>.<p>ಕನ್ನಡಸಿರಿ ಬಳಗದ ಸಂಚಾಲಕ ಲೋಕೇಶ್ ಸಾಗರ ಮಾತನಾಡಿ, ಹಾರಂಗಿ ಜಲಾಶಯ ನಿರ್ಮಾಣವಾಗಲು ಕಾರಣಕರ್ತರಾದ ಮಾಜಿ ಮುಖ್ಯಂಮತ್ರಿ ವೀರೇಂದ್ರ ಪಾಟೀಲ್ ಅವರನ್ನು ಸ್ಮರಿಸಬೇಕಾಗಿದೆ. ಜಲಾಶಯದಿಂದ ಸಾವಿರಾರು ಹೆಕ್ಟೇರ್ ಒಣಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಸಾವಿರಾರು ರೈತರ ಬಾಳಿಗೆ ಬೆಳಕಾಗಿದೆ ಎಂದರು.</p>.<p>ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಸಿದ್ದರಾಜು, ಕಿರಣ್, ಇಡಿಸಿಎಲ್ ವಿದ್ಯುತ್ ಉತ್ಪಾದನಾ ಘಟಕದ ವ್ಯವಸ್ಥಾಪಕ <br /> ಶಿವಸುಬ್ರಮಣ್ಯಂ, ಕೊಡಗು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಕಾರ್ಯದರ್ಶಿ ಹಂಡ್ರಂಗಿ ನಾಗರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>