<p><strong>ಕುಶಾಲನಗರ:</strong> ‘ಪಟ್ಟಣದಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿರುವ ಪುರಸಭೆ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ₹2 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಅಧಿಕಾರಿಗಳೊಂದಿಗೆ ಶಾಸಕರು ಮಂಗಳವಾರ ಅರ್ಧಕ್ಕೆ ಸ್ಥಗಿತಗೊಂಡ ಪುರಸಭಾ ಕಟ್ಟಡದ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ಕಟ್ಟಡದ ಒಳಗೆ ಸಂಪೂರ್ಣ ಕತ್ತಲೆ ಆವರಿಸಿದೆ. ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಆಗಿದೆ. ಮುಂದಿನ ದಿನಗಳಲ್ಲಿ ನೈಸರ್ಗಿಕವಾಗಿ ಗಾಳಿ ಬೆಳಕಿನಿಂದ ಕೂಡಿರುವ ರೀತಿಯಲ್ಲಿ ನವೀಕರಣ ಮಾಡಿ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.</p>.<p><strong>ಅಪೂರ್ಣ ಕಟ್ಟಡ ಉದ್ಘಾಟನೆ:</strong> ಈ ಹಿಂದೆ ನೂತನ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾಗಿದ್ದ ₹5 ಕೋಟಿ ಅನುದಾನದಲ್ಲಿ ಪರಿಪೂರ್ಣ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಕೆಲಸ ಮುಗಿಯುವ ಮುನ್ನವೇ ಕಟ್ಟಡಕ್ಕೆ ನಾಮಫಲಕ ಹಾಕಿ ಉದ್ಘಾಟನೆ ಮಾಡಲಾಗಿದೆ. ನಾನು ರಾಜಕೀಯ ಮಾಡಲ್ಲ, ನನಗೆ ಅಭಿವೃದ್ಧಿ ಮುಖ್ಯ. ಬೋರ್ಡ್ ಹಾಕಿಸಿಕೊಳ್ಳುವುದು ಮುಖ್ಯವಲ್ಲ’ ಎಂದರು.</p>.<p><strong>ಅಹವಾಲು ಸ್ವೀಕಾರ:</strong> ಮುಳ್ಳುಸೋಗೆ ಶಾಸಕರ ಕಚೇರಿಯಲ್ಲಿ ಮಹಾಮಳೆಯಿಂದ ನೊಂದ ಜನರ ಸಮಸ್ಯೆಗಳನ್ನು ಶಾಸಕ ಡಾ.ಮಂತರ್ ಗೌಡ ಆಲಿಸಿದರು.</p>.<p>ತಾಲ್ಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಸಮಸ್ಯೆ ಆಲಿಸಿದ ಶಾಸಕರು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಮಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಸೆಸ್ಕ್ ಅಧಿಕಾರಿಗಳ ತರಾಟೆ: ತಾಲ್ಲೂಕಿನ ಸೆಸ್ಕ್ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಮಂತರ್ ಗೌಡ ಅಸಮಾಧಾನ ವ್ಯಕ್ತಪಡಿಸಿದರು. ‘ಮಳೆಗಾಲದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಿ ಹಾನಿಯಾಗಿರುವ ವಿದ್ಯುತ್ ಕಂಬಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾಪ ಕಳುಹಿಸಿಕೊಡಿ’ ಎಂದು ಸಲಹೆ ನೀಡಿದರು.</p>.<p>ಸುಂಟಿಕೊಪ್ಪ, ಮಾದಪುರ ಭಾಗದಲ್ಲಿ ಕೆಲಸ ಸರಿಯಾಗಿ ಆಗಿಲ್ಲ. ಎಲ್ಲಾ ಬಡಾವಣೆಗಳ ಟ್ರಾನ್ಸ್ಫಾರ್ಮರ್ ಬಗ್ಗೆ ಮಾಹಿತಿ ನೀಡಿ. ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯರಾದ ಶೇಕ್ ಖಲಿಮುಲ್ಲಾ, ಎಂ.ಕೆ. ದಿನೇಶ್, ನಾಮನಿರ್ದೇಶಿತ ಸದಸ್ಯ ಶಿವಶಂಕರ್, ಕಿರಣ್, ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಅಧಿಕಾರಿ ಸಂತೋಷ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸಹಾಯಕ ಎಂಜಿನಿಯರ್ ರಂಗರಾಮ್ , ಸೆಸ್ಕ್ ಸಹಾಯಕ ಎಂಜಿನಿಯರ್ ವಿನೋದ್, ಮುಖಂಡರಾದ ಚಂದ್ರಶೇಖರ್, ರಮೇಶ್, ಮಂಜುಳಾ, ಪದ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ‘ಪಟ್ಟಣದಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿರುವ ಪುರಸಭೆ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ₹2 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಅಧಿಕಾರಿಗಳೊಂದಿಗೆ ಶಾಸಕರು ಮಂಗಳವಾರ ಅರ್ಧಕ್ಕೆ ಸ್ಥಗಿತಗೊಂಡ ಪುರಸಭಾ ಕಟ್ಟಡದ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ಕಟ್ಟಡದ ಒಳಗೆ ಸಂಪೂರ್ಣ ಕತ್ತಲೆ ಆವರಿಸಿದೆ. ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಆಗಿದೆ. ಮುಂದಿನ ದಿನಗಳಲ್ಲಿ ನೈಸರ್ಗಿಕವಾಗಿ ಗಾಳಿ ಬೆಳಕಿನಿಂದ ಕೂಡಿರುವ ರೀತಿಯಲ್ಲಿ ನವೀಕರಣ ಮಾಡಿ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.</p>.<p><strong>ಅಪೂರ್ಣ ಕಟ್ಟಡ ಉದ್ಘಾಟನೆ:</strong> ಈ ಹಿಂದೆ ನೂತನ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾಗಿದ್ದ ₹5 ಕೋಟಿ ಅನುದಾನದಲ್ಲಿ ಪರಿಪೂರ್ಣ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಕೆಲಸ ಮುಗಿಯುವ ಮುನ್ನವೇ ಕಟ್ಟಡಕ್ಕೆ ನಾಮಫಲಕ ಹಾಕಿ ಉದ್ಘಾಟನೆ ಮಾಡಲಾಗಿದೆ. ನಾನು ರಾಜಕೀಯ ಮಾಡಲ್ಲ, ನನಗೆ ಅಭಿವೃದ್ಧಿ ಮುಖ್ಯ. ಬೋರ್ಡ್ ಹಾಕಿಸಿಕೊಳ್ಳುವುದು ಮುಖ್ಯವಲ್ಲ’ ಎಂದರು.</p>.<p><strong>ಅಹವಾಲು ಸ್ವೀಕಾರ:</strong> ಮುಳ್ಳುಸೋಗೆ ಶಾಸಕರ ಕಚೇರಿಯಲ್ಲಿ ಮಹಾಮಳೆಯಿಂದ ನೊಂದ ಜನರ ಸಮಸ್ಯೆಗಳನ್ನು ಶಾಸಕ ಡಾ.ಮಂತರ್ ಗೌಡ ಆಲಿಸಿದರು.</p>.<p>ತಾಲ್ಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಸಮಸ್ಯೆ ಆಲಿಸಿದ ಶಾಸಕರು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಮಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಸೆಸ್ಕ್ ಅಧಿಕಾರಿಗಳ ತರಾಟೆ: ತಾಲ್ಲೂಕಿನ ಸೆಸ್ಕ್ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಮಂತರ್ ಗೌಡ ಅಸಮಾಧಾನ ವ್ಯಕ್ತಪಡಿಸಿದರು. ‘ಮಳೆಗಾಲದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಿ ಹಾನಿಯಾಗಿರುವ ವಿದ್ಯುತ್ ಕಂಬಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾಪ ಕಳುಹಿಸಿಕೊಡಿ’ ಎಂದು ಸಲಹೆ ನೀಡಿದರು.</p>.<p>ಸುಂಟಿಕೊಪ್ಪ, ಮಾದಪುರ ಭಾಗದಲ್ಲಿ ಕೆಲಸ ಸರಿಯಾಗಿ ಆಗಿಲ್ಲ. ಎಲ್ಲಾ ಬಡಾವಣೆಗಳ ಟ್ರಾನ್ಸ್ಫಾರ್ಮರ್ ಬಗ್ಗೆ ಮಾಹಿತಿ ನೀಡಿ. ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯರಾದ ಶೇಕ್ ಖಲಿಮುಲ್ಲಾ, ಎಂ.ಕೆ. ದಿನೇಶ್, ನಾಮನಿರ್ದೇಶಿತ ಸದಸ್ಯ ಶಿವಶಂಕರ್, ಕಿರಣ್, ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಅಧಿಕಾರಿ ಸಂತೋಷ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸಹಾಯಕ ಎಂಜಿನಿಯರ್ ರಂಗರಾಮ್ , ಸೆಸ್ಕ್ ಸಹಾಯಕ ಎಂಜಿನಿಯರ್ ವಿನೋದ್, ಮುಖಂಡರಾದ ಚಂದ್ರಶೇಖರ್, ರಮೇಶ್, ಮಂಜುಳಾ, ಪದ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>