<p><strong>ಮಡಿಕೇರಿ</strong>: ‘ಹೆಲ್ಮೆಟ್ ಧರಿಸಿ ಜೀವ ಉಳಿಸಿ’, ‘ಸೀಟ್ ಬೆಲ್ಟ್ ಧರಿಸಿ ವಾಹನ ಚಲಿಸಿ’, ‘ಮದ್ಯಸೇವಿಸಿ ವಾಹನ ಚಲಾಯಿಸಬೇಡಿ’... ಹೀಗೆ ವಿವಿಧ ಸಂಚಾರ ನಿಯಮಗಳ ಕುರಿತು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.</p>.<p>ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಮಡಿಕೇರಿ ಸಂಚಾರ ಪೊಲೀಸ್ ಠಾಣೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಎಎಲ್ಜಿ ಕ್ರೆಸೆಂಟ್ ಶಾಲೆ ವತಿಯಿಂದ ಇಲ್ಲಿ ಬುಧವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಈ ದೃಶ್ಯಗಳು ಕಂಡು ಬಂದವು.</p>.<p>ಶಾಲೆಯ ಹಲವು ವಿದ್ಯಾರ್ಥಿಗಳು ಶಾಲೆಯಿಂದ ಹೊರಟು, ಹಳೆಯ ಖಾಸಗಿ ಬಸ್ನಿಲ್ದಾಣ ನಂತರ ಮತ್ತೆ ಶಾಲೆಯತ್ತ ಜಾಥಾ ನಡೆಸಿದರು. ಈ ವೇಳೆ ಸಂಚಾರ ನಿಯಮಗಳ ಕುರಿತು ಘೋಷಣೆಗಳನ್ನು ಕೂಗಿದರು. ಭಿತ್ತಿಬರಹಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಂಚಾರ ನಿಯಮಗಳ ಕುರಿತು ಕರಪತ್ರಗಳನ್ನು ಹಂಚಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಘಟಕದ ಆಯುಕ್ತ ಬೇಬಿ ಮ್ಯಾಥ್ಯು, ಬೊಳ್ಳಜಿರ ಅಯ್ಯಪ್ಪ, ದಮಯಂತಿ, ಡೈಸಿ, ಸಬ್ಇನ್ಸ್ಪೆಕ್ಟರ್ ಶ್ರೀಧರ, ಎಎಸ್ಐ ರಂಗೇಗೌಡ, ಸಂಚಾರ ಪೊಲೀಸ್ ಠಾಣೆಯ ನಂದ, ಮಂಜುನಾಥ, ಶಿಕ್ಷಣಾಧಿಕಾರಿ ಹರೀಶ್ ಇದ್ದರು.</p>.<p>ನಂತರ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಹೆಲ್ಮೆಟ್ ಧರಿಸಿ ಜೀವ ಉಳಿಸಿ’, ‘ಸೀಟ್ ಬೆಲ್ಟ್ ಧರಿಸಿ ವಾಹನ ಚಲಿಸಿ’, ‘ಮದ್ಯಸೇವಿಸಿ ವಾಹನ ಚಲಾಯಿಸಬೇಡಿ’... ಹೀಗೆ ವಿವಿಧ ಸಂಚಾರ ನಿಯಮಗಳ ಕುರಿತು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.</p>.<p>ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಮಡಿಕೇರಿ ಸಂಚಾರ ಪೊಲೀಸ್ ಠಾಣೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಎಎಲ್ಜಿ ಕ್ರೆಸೆಂಟ್ ಶಾಲೆ ವತಿಯಿಂದ ಇಲ್ಲಿ ಬುಧವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಈ ದೃಶ್ಯಗಳು ಕಂಡು ಬಂದವು.</p>.<p>ಶಾಲೆಯ ಹಲವು ವಿದ್ಯಾರ್ಥಿಗಳು ಶಾಲೆಯಿಂದ ಹೊರಟು, ಹಳೆಯ ಖಾಸಗಿ ಬಸ್ನಿಲ್ದಾಣ ನಂತರ ಮತ್ತೆ ಶಾಲೆಯತ್ತ ಜಾಥಾ ನಡೆಸಿದರು. ಈ ವೇಳೆ ಸಂಚಾರ ನಿಯಮಗಳ ಕುರಿತು ಘೋಷಣೆಗಳನ್ನು ಕೂಗಿದರು. ಭಿತ್ತಿಬರಹಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಂಚಾರ ನಿಯಮಗಳ ಕುರಿತು ಕರಪತ್ರಗಳನ್ನು ಹಂಚಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಘಟಕದ ಆಯುಕ್ತ ಬೇಬಿ ಮ್ಯಾಥ್ಯು, ಬೊಳ್ಳಜಿರ ಅಯ್ಯಪ್ಪ, ದಮಯಂತಿ, ಡೈಸಿ, ಸಬ್ಇನ್ಸ್ಪೆಕ್ಟರ್ ಶ್ರೀಧರ, ಎಎಸ್ಐ ರಂಗೇಗೌಡ, ಸಂಚಾರ ಪೊಲೀಸ್ ಠಾಣೆಯ ನಂದ, ಮಂಜುನಾಥ, ಶಿಕ್ಷಣಾಧಿಕಾರಿ ಹರೀಶ್ ಇದ್ದರು.</p>.<p>ನಂತರ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>