<p><strong>ಮಡಿಕೇರಿ</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿರೋಧಿಸಿ ಬಿಜೆಪಿ ಮುಖಂಡರು ಇಲ್ಲಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಲೇ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಕೊಡೆ ಹಿಡಿದು ಕೊಂಡು ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಸಿದ್ದರಾಮಯ್ಯ ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ, ‘ಪೊಲೀಸರನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಹೋರಾಟವನ್ನು ಸರ್ಕಾರ ಹತ್ತಿಕ್ಕುತ್ತಿದೆ’ ಎಂದು ಆರೋಪಿಸಿದರು.</p>.<p>ನ್ಯಾಯಯುತವಾಗಿ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಅನೇಕ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಆದರೆ, ಇವರ ಪ್ರತಿಭಟನೆಗೆ ಹೆದರಿದ ಸರ್ಕಾರ ಅವರನ್ನು ರಾಮನಗರದ ಸಮೀಪ ಪೊಲೀಸರ ಮೂಲಕ ವಶಕ್ಕೆ ಪಡೆದು, ಪ್ರತಿಭಟನೆ ನಡೆಸದಂತೆ ತಡೆಯಿತು. ಇದು ಸರಿಯಲ್ಲ’ ಎಂದು ಖಂಡಿಸಿದರು.</p>.<p>ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹಲವು ಹಗರಣಗಳ ಆರೋಪ ಇದೆ. ಅವರು ಈ ಕುರಿತು ಮುಕ್ತ ತನಿಖೆ ನಡೆಸಲು ಸಮ್ಮಿತಿಸಬೇಕು. ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ತನಿಖಯ ಜವಾಬ್ದಾರಿ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ‘ಈಚೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕವು ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಆಗಲೂ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಈಗ ಹೊರ ಜಿಲ್ಲೆಗಳಲ್ಲೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದನ್ನು ಸರ್ಕಾರ ತಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ಕುಮಾರ್, ಪಕ್ಷದ ಜಿಲ್ಲಾ ಘಟಕದ ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾ ಅಧ್ಯಕ್ಷ ಅನಿತಾ ಪೂವಯ್ಯ, ಮೋರ್ಚಾದ ನಗರ ಘಟಕದ ಅಧ್ಯಕ್ಷೆ ವಿ.ಬಿ.ಸೌಮ್ಯಾ, ಮುಖಂಡ ಬೊಳ್ಳಜಿರ ಬಿ ಅಯ್ಯಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಬಿಜೆಪಿ ವಿರೋಧ ಪಕ್ಷವಾಗಿ ನ್ಯಾಯಯುತವಾಗಿ ಹೋರಾಟ ಮಾಡುತ್ತಿದೆ. ವಿಜಯೇಂದ್ರ ಅವರನ್ನು ಎದುರಿಸಲಾಗದೇ ಅವರನ್ನು ಪ್ರತಿಭಟನಾ ಸ್ಥಳಕ್ಕೆ ತಲುಪಲು ಸರ್ಕಾರ ಬಿಟ್ಟಿಲ್ಲ. ಇದು ಸರಿಯಲ್ಲ</p><p>-ರವಿ ಕಾಳಪ್ಪ ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ. </p>.<p><strong>ಜನವಿರೋಧಿ ಸುತ್ತೋಲೆಗಳನ್ನು ವಾಪಸ್ ಪಡೆಯಿರಿ; ಕೆ.ಜಿ.ಬೋಪಯ್ಯ</strong></p><p>ಮಡಿಕೇರಿ: ಕೊಡಗು ಜಿಲ್ಲೆಯ ಜನರಿಗೆ ತೊಂದರೆ ಕೊಡುವಂತಹ ಸುತ್ತೋಲೆಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ ಒತ್ತಾಯಿಸಿದರು. ವನ್ಯಜೀವಿ ಉತ್ಪನ್ನಗಳನ್ನು ವಾಪಸ್ ನೀಡುವ ಸುತ್ತೋಲೆ ಅಕ್ಷರಶಃ ಇಲ್ಲಿನ ಜನರ ವಿರೋಧಿಯಾಗಿದೆ. ಈಗ ಅದಕ್ಕೆ ನ್ಯಾಯಾಲಯದಿಂದ ಕಾಂಗ್ರೆಸ್ನವರೇ ತಡೆಯಾಜ್ಞೆ ತಂದಿದ್ದಾರೆ. ಸುತ್ತೋಲೆ ಹೊರಡಿಸುವವರೂ ಅವರೇ ತಡೆಯಾಜ್ಞೆ ತರುವವರೂ ಅವರೇ. ಮುಖ್ಯಮಂತ್ರಿಯ ಕಾನೂನು ಸಲಹೆಗಾರರು ಈ ಸುತ್ತೋಲೆಯನ್ನು ವಾಪಸ್ ಪಡೆಯಿರಿ ಎಂದು ಸಲಹೆ ನೀಡಬಹುದಿತ್ತಲ್ಲವೇ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. ಈಗ ಹೊಸದಾಗಿ ಅರಣ್ಯ ವ್ಯವಸ್ಥಾಪನಾ ಸಮಿತಿ ರಚಿಸಿ ದೇವರಕಾಡುಗಳನ್ನು ಮೀಸಲು ಅರಣ್ಯವಾಗಿ ಮಾಡುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ. ಕೂಡಲೇ ಇಲ್ಲಿನ ಇಬ್ಬರೂ ಶಾಸಕರು ಕೊಡಗಿನ ಜನರಿಗೆ ತೊಂದರೆ ಕೊಡುವಂತಹ ಇಂತಹ ಆದೇಶಗಳು ಸರ್ಕಾರದಿಂದ ಹೊರಬೀಳದಂತೆ ತಡೆಯಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯವರು ಹೆಚ್ಚವರಿ ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲ ವಾಲ್ಮೀಕಿ ನಿಗಮದಿಂದ ಭಾರಿ ಮೊತ್ತದ ಹಣವು ವರ್ಗಾವಣೆಯಾಗಿದೆ. ಹಣಕಾಸು ಇಲಾಖೆಯ ಉಸ್ತುವಾರಿಯನ್ನೂ ಮುಖ್ಯಮಂತ್ರಿಯೇ ವಹಿಸಿಕೊಂಡಿದ್ದಾರೆ. ಹಾಗಾಗಿ ಎರಡೂ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿರೋಧಿಸಿ ಬಿಜೆಪಿ ಮುಖಂಡರು ಇಲ್ಲಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಲೇ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಕೊಡೆ ಹಿಡಿದು ಕೊಂಡು ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಸಿದ್ದರಾಮಯ್ಯ ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ, ‘ಪೊಲೀಸರನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಹೋರಾಟವನ್ನು ಸರ್ಕಾರ ಹತ್ತಿಕ್ಕುತ್ತಿದೆ’ ಎಂದು ಆರೋಪಿಸಿದರು.</p>.<p>ನ್ಯಾಯಯುತವಾಗಿ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಅನೇಕ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಆದರೆ, ಇವರ ಪ್ರತಿಭಟನೆಗೆ ಹೆದರಿದ ಸರ್ಕಾರ ಅವರನ್ನು ರಾಮನಗರದ ಸಮೀಪ ಪೊಲೀಸರ ಮೂಲಕ ವಶಕ್ಕೆ ಪಡೆದು, ಪ್ರತಿಭಟನೆ ನಡೆಸದಂತೆ ತಡೆಯಿತು. ಇದು ಸರಿಯಲ್ಲ’ ಎಂದು ಖಂಡಿಸಿದರು.</p>.<p>ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹಲವು ಹಗರಣಗಳ ಆರೋಪ ಇದೆ. ಅವರು ಈ ಕುರಿತು ಮುಕ್ತ ತನಿಖೆ ನಡೆಸಲು ಸಮ್ಮಿತಿಸಬೇಕು. ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ತನಿಖಯ ಜವಾಬ್ದಾರಿ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ‘ಈಚೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕವು ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಆಗಲೂ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಈಗ ಹೊರ ಜಿಲ್ಲೆಗಳಲ್ಲೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದನ್ನು ಸರ್ಕಾರ ತಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ಕುಮಾರ್, ಪಕ್ಷದ ಜಿಲ್ಲಾ ಘಟಕದ ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾ ಅಧ್ಯಕ್ಷ ಅನಿತಾ ಪೂವಯ್ಯ, ಮೋರ್ಚಾದ ನಗರ ಘಟಕದ ಅಧ್ಯಕ್ಷೆ ವಿ.ಬಿ.ಸೌಮ್ಯಾ, ಮುಖಂಡ ಬೊಳ್ಳಜಿರ ಬಿ ಅಯ್ಯಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಬಿಜೆಪಿ ವಿರೋಧ ಪಕ್ಷವಾಗಿ ನ್ಯಾಯಯುತವಾಗಿ ಹೋರಾಟ ಮಾಡುತ್ತಿದೆ. ವಿಜಯೇಂದ್ರ ಅವರನ್ನು ಎದುರಿಸಲಾಗದೇ ಅವರನ್ನು ಪ್ರತಿಭಟನಾ ಸ್ಥಳಕ್ಕೆ ತಲುಪಲು ಸರ್ಕಾರ ಬಿಟ್ಟಿಲ್ಲ. ಇದು ಸರಿಯಲ್ಲ</p><p>-ರವಿ ಕಾಳಪ್ಪ ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ. </p>.<p><strong>ಜನವಿರೋಧಿ ಸುತ್ತೋಲೆಗಳನ್ನು ವಾಪಸ್ ಪಡೆಯಿರಿ; ಕೆ.ಜಿ.ಬೋಪಯ್ಯ</strong></p><p>ಮಡಿಕೇರಿ: ಕೊಡಗು ಜಿಲ್ಲೆಯ ಜನರಿಗೆ ತೊಂದರೆ ಕೊಡುವಂತಹ ಸುತ್ತೋಲೆಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ ಒತ್ತಾಯಿಸಿದರು. ವನ್ಯಜೀವಿ ಉತ್ಪನ್ನಗಳನ್ನು ವಾಪಸ್ ನೀಡುವ ಸುತ್ತೋಲೆ ಅಕ್ಷರಶಃ ಇಲ್ಲಿನ ಜನರ ವಿರೋಧಿಯಾಗಿದೆ. ಈಗ ಅದಕ್ಕೆ ನ್ಯಾಯಾಲಯದಿಂದ ಕಾಂಗ್ರೆಸ್ನವರೇ ತಡೆಯಾಜ್ಞೆ ತಂದಿದ್ದಾರೆ. ಸುತ್ತೋಲೆ ಹೊರಡಿಸುವವರೂ ಅವರೇ ತಡೆಯಾಜ್ಞೆ ತರುವವರೂ ಅವರೇ. ಮುಖ್ಯಮಂತ್ರಿಯ ಕಾನೂನು ಸಲಹೆಗಾರರು ಈ ಸುತ್ತೋಲೆಯನ್ನು ವಾಪಸ್ ಪಡೆಯಿರಿ ಎಂದು ಸಲಹೆ ನೀಡಬಹುದಿತ್ತಲ್ಲವೇ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. ಈಗ ಹೊಸದಾಗಿ ಅರಣ್ಯ ವ್ಯವಸ್ಥಾಪನಾ ಸಮಿತಿ ರಚಿಸಿ ದೇವರಕಾಡುಗಳನ್ನು ಮೀಸಲು ಅರಣ್ಯವಾಗಿ ಮಾಡುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ. ಕೂಡಲೇ ಇಲ್ಲಿನ ಇಬ್ಬರೂ ಶಾಸಕರು ಕೊಡಗಿನ ಜನರಿಗೆ ತೊಂದರೆ ಕೊಡುವಂತಹ ಇಂತಹ ಆದೇಶಗಳು ಸರ್ಕಾರದಿಂದ ಹೊರಬೀಳದಂತೆ ತಡೆಯಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯವರು ಹೆಚ್ಚವರಿ ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲ ವಾಲ್ಮೀಕಿ ನಿಗಮದಿಂದ ಭಾರಿ ಮೊತ್ತದ ಹಣವು ವರ್ಗಾವಣೆಯಾಗಿದೆ. ಹಣಕಾಸು ಇಲಾಖೆಯ ಉಸ್ತುವಾರಿಯನ್ನೂ ಮುಖ್ಯಮಂತ್ರಿಯೇ ವಹಿಸಿಕೊಂಡಿದ್ದಾರೆ. ಹಾಗಾಗಿ ಎರಡೂ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>