<p><strong>ಸುಂಟಿಕೊಪ್ಪ</strong>: ಕಣದಲ್ಲಿ ಒಣಗಿಸಲು ಹಾಕಿದ್ದ ಕಾಳುಮೆಣಸು (ಕರಿಮೆಣಸು) ಕಳವುಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.<br><br>ಇಲ್ಲಿನ ಮಧುರಮ್ಮ ಬಡಾವಣೆಯ ನಿವಾಸಿ ಎಲ್.ಮಹೇಶ್ (42) ಆರೋಪಿ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ.</p>.<p>ನಾಕೂರು ಶಿರಂಗಾಲ ಗ್ರಾಮದ ಭಾಗ್ಯಲಕ್ಷ್ಮಿ ಎಂಬವರಿಗೆ ಸೇರಿದ ಲಕ್ಷ್ಮಿ ತೋಟದಲ್ಲಿ ಏ.7 ರಂದು ತಡರಾತ್ರಿ ಮಹೇಶ್ ಹಾಗೂ ಸಂಗಡಿಗ ಕಣದಲ್ಲಿ ಒಣಗಿಸಿಟ್ಟಿದ್ದ 120 ಕೆ.ಜಿ ಕರಿಮೆಣಸನ್ನು ಕದ್ದು, ಮಾರುತಿ ಕಾರಿನಲ್ಲಿ ಸಾಗಿಸಿದ್ದರು. ಕರಿಮೆಣಸು ಮಹೇಶ್ ಅವರ ಮನೆಯಲ್ಲಿ ಪತ್ತೆಯಾಗಿದೆ.</p>.<p> ಭಾಗ್ಯ ಲಕ್ಷ್ಮಿ ನೀಡಿದ ದೂರಿನನ್ವಯ ಸುಂಟಿಕೊಪ್ಪ ಪೊಲೀಸರು ಗುರುವಾರ ಇಲ್ಲಿನ ಟಿಸಿಎಲ್ ತೋಟಕ್ಕೆ ತೆರಳುವ ರಸ್ತೆಯಲ್ಲಿ ಮಹೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ನೀಡಲಾಗಿದೆ.</p>.<p>ಸುಂಟಿಕೊಪ್ಪ ಪಿಎಸ್ಐ ಶ್ರೀಧರ್, ಕ್ರೈಂ ಪಿಎಸ್ಐ ನಾಗರಾಜು, ಸಿಬ್ಬಂದಿ ಸತೀಸ್, ಪ್ರವೀಣ, ಜಗದೀಶ್, ಲೀಲಾವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಕಣದಲ್ಲಿ ಒಣಗಿಸಲು ಹಾಕಿದ್ದ ಕಾಳುಮೆಣಸು (ಕರಿಮೆಣಸು) ಕಳವುಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.<br><br>ಇಲ್ಲಿನ ಮಧುರಮ್ಮ ಬಡಾವಣೆಯ ನಿವಾಸಿ ಎಲ್.ಮಹೇಶ್ (42) ಆರೋಪಿ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ.</p>.<p>ನಾಕೂರು ಶಿರಂಗಾಲ ಗ್ರಾಮದ ಭಾಗ್ಯಲಕ್ಷ್ಮಿ ಎಂಬವರಿಗೆ ಸೇರಿದ ಲಕ್ಷ್ಮಿ ತೋಟದಲ್ಲಿ ಏ.7 ರಂದು ತಡರಾತ್ರಿ ಮಹೇಶ್ ಹಾಗೂ ಸಂಗಡಿಗ ಕಣದಲ್ಲಿ ಒಣಗಿಸಿಟ್ಟಿದ್ದ 120 ಕೆ.ಜಿ ಕರಿಮೆಣಸನ್ನು ಕದ್ದು, ಮಾರುತಿ ಕಾರಿನಲ್ಲಿ ಸಾಗಿಸಿದ್ದರು. ಕರಿಮೆಣಸು ಮಹೇಶ್ ಅವರ ಮನೆಯಲ್ಲಿ ಪತ್ತೆಯಾಗಿದೆ.</p>.<p> ಭಾಗ್ಯ ಲಕ್ಷ್ಮಿ ನೀಡಿದ ದೂರಿನನ್ವಯ ಸುಂಟಿಕೊಪ್ಪ ಪೊಲೀಸರು ಗುರುವಾರ ಇಲ್ಲಿನ ಟಿಸಿಎಲ್ ತೋಟಕ್ಕೆ ತೆರಳುವ ರಸ್ತೆಯಲ್ಲಿ ಮಹೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ನೀಡಲಾಗಿದೆ.</p>.<p>ಸುಂಟಿಕೊಪ್ಪ ಪಿಎಸ್ಐ ಶ್ರೀಧರ್, ಕ್ರೈಂ ಪಿಎಸ್ಐ ನಾಗರಾಜು, ಸಿಬ್ಬಂದಿ ಸತೀಸ್, ಪ್ರವೀಣ, ಜಗದೀಶ್, ಲೀಲಾವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>