<p><strong>ಮಡಿಕೇರಿ</strong>: ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳು ₹ 50 ಸಾವಿರ ಲಂಚ ಕೇಳುತ್ತಿದ್ದು, 2 ವರ್ಷದಿಂದ ಸತಾಯಿಸುತ್ತಿದ್ದಾರೆ. ಮಗಳ ಮದುವೆ ಮಾಡಬೇಕಿದ್ದು, ಹಣಕಾಸಿಗೆ ತುಂಬಾ ತೊಂದರೆಯಾಗಿದೆ ಎಂದು ಮಹಿಳೆಯೊಬ್ಬರು ಲೋಕಾಯುಕ್ತ ಡಿವೈಎಸ್ಪಿ ಪವನ್ಕುಮಾರ್ ಮುಂದೆ ಕಣ್ಣೀರು ಸುರಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು.</p>.<p>ಪೊನ್ನಂಪೇಟೆಯಲ್ಲಿ 5 ಸೆಂಟ್ ಜಾಗ ಇದೆ. ಪೌತಿ ಖಾತೆ ಮಾಡಲು ಅಧಿಕಾರಿಗಳು ₹ 50 ಸಾವಿರ ಕೇಳುತ್ತಿದ್ದು, ಸತಾಯಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ ಎಂದು ಅವರು ಕಣ್ಣೀರು ಹಾಕುತ್ತಲೇ ತಮ್ಮ ಸಮಸ್ಯೆಯನ್ನು ಬಿಡಿಸಿಟ್ಟರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪವನ್ಕುಮಾರ್, ‘ಕಾಲಮಿತಿಯಲ್ಲಿ ಆದ್ಯತೆ ಮೇರೆಗೆ ಈ ಕಾರ್ಯ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿ, ಮನವಿ ಸ್ವೀಕರಿಸಿದರು.</p>.<p>ಅಹವಾಲು ಆಲಿಕೆ ಕಾರ್ಯಕ್ರಮದಲ್ಲಿ ಬಹುತೇಕ ಕಂದಾಯ ಇಲಾಖೆ ಬಗೆಗಿನ ಕುಂದುಕೊರತೆಗಳೇ ಕೇಳಿ ಬಂದವು. ಖಾತೆ ಮಾಡುವುದಕ್ಕೆ ಅಲೆಸುವುದು, ಭ್ರಷ್ಟಾಚಾರ ಮೊದಲಾದ ದೂರುಗಳು ಪ್ರಸ್ತಾವವಾದವು.</p>.<p>ಮಹಾಲಕ್ಷ್ಮಿ ಎಂಬುವವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೌರಾಯುಕ್ತ ವಿಜಯ್, ‘ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು’ ಎಂದು ಹೇಳಿದರು.</p>.<p>ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಪಿ.ಕೆ.ವಸಂತ ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬಂಧ ಕೆಲಸ ಮಾಡಿಸಿಕೊಡಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಪವನ್ಕುಮಾರ್ ಭರವಸೆ ನೀಡಿದರು.</p>.<p>ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು.</p>.<p>ಈ ವೇಳೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ‘ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂದರು.</p>.<p>ಕಚೇರಿಗಳಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳು ₹ 50 ಸಾವಿರ ಲಂಚ ಕೇಳುತ್ತಿದ್ದು, 2 ವರ್ಷದಿಂದ ಸತಾಯಿಸುತ್ತಿದ್ದಾರೆ. ಮಗಳ ಮದುವೆ ಮಾಡಬೇಕಿದ್ದು, ಹಣಕಾಸಿಗೆ ತುಂಬಾ ತೊಂದರೆಯಾಗಿದೆ ಎಂದು ಮಹಿಳೆಯೊಬ್ಬರು ಲೋಕಾಯುಕ್ತ ಡಿವೈಎಸ್ಪಿ ಪವನ್ಕುಮಾರ್ ಮುಂದೆ ಕಣ್ಣೀರು ಸುರಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು.</p>.<p>ಪೊನ್ನಂಪೇಟೆಯಲ್ಲಿ 5 ಸೆಂಟ್ ಜಾಗ ಇದೆ. ಪೌತಿ ಖಾತೆ ಮಾಡಲು ಅಧಿಕಾರಿಗಳು ₹ 50 ಸಾವಿರ ಕೇಳುತ್ತಿದ್ದು, ಸತಾಯಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ ಎಂದು ಅವರು ಕಣ್ಣೀರು ಹಾಕುತ್ತಲೇ ತಮ್ಮ ಸಮಸ್ಯೆಯನ್ನು ಬಿಡಿಸಿಟ್ಟರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪವನ್ಕುಮಾರ್, ‘ಕಾಲಮಿತಿಯಲ್ಲಿ ಆದ್ಯತೆ ಮೇರೆಗೆ ಈ ಕಾರ್ಯ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿ, ಮನವಿ ಸ್ವೀಕರಿಸಿದರು.</p>.<p>ಅಹವಾಲು ಆಲಿಕೆ ಕಾರ್ಯಕ್ರಮದಲ್ಲಿ ಬಹುತೇಕ ಕಂದಾಯ ಇಲಾಖೆ ಬಗೆಗಿನ ಕುಂದುಕೊರತೆಗಳೇ ಕೇಳಿ ಬಂದವು. ಖಾತೆ ಮಾಡುವುದಕ್ಕೆ ಅಲೆಸುವುದು, ಭ್ರಷ್ಟಾಚಾರ ಮೊದಲಾದ ದೂರುಗಳು ಪ್ರಸ್ತಾವವಾದವು.</p>.<p>ಮಹಾಲಕ್ಷ್ಮಿ ಎಂಬುವವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೌರಾಯುಕ್ತ ವಿಜಯ್, ‘ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು’ ಎಂದು ಹೇಳಿದರು.</p>.<p>ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಪಿ.ಕೆ.ವಸಂತ ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬಂಧ ಕೆಲಸ ಮಾಡಿಸಿಕೊಡಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಪವನ್ಕುಮಾರ್ ಭರವಸೆ ನೀಡಿದರು.</p>.<p>ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು.</p>.<p>ಈ ವೇಳೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ‘ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂದರು.</p>.<p>ಕಚೇರಿಗಳಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>