<p><strong>ಗೋಣಿಕೊಪ್ಪಲು:</strong> ಮನೆ ನಿವೇಶನಕ್ಕೆ ಆಗ್ರಹಿಸಿ 15 ದಿನಗಳಿಂದ ಪಾಲಿಬೆಟ್ಟ ಬಳಿಯ ಹೊಸೂರು ಗ್ರಾಮ ಪಂಚಾಯಿತಿ ಎದುರು ನಡೆಸುತ್ತಿದ್ದ ಬುಡಕಟ್ಟು ಕೃಷಿ ಕಾರ್ಮಿಕರ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಂಡಿತು.</p>.<p>ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆಯಂತೆ ಪೊನ್ನಂಪೇಟೆ ತಹಶೀಲ್ದಾರ್ ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೊಣಿಯಂಡ ಅಪ್ಪಣ್ಣ ಬುಡಕಟ್ಟು ಜನರ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.</p>.<p>ಬಳಿಕ ಹೊಸೂರು ಗ್ರಾ,ಮ ಪಂಚಾಯಿತಿ ವ್ಯಾಪ್ತಿಯ ಅಮ್ಮತ್ತಿ ಕಳ್ಳೀರ ಬಾಣೆಯಲ್ಲಿ ತಹಶೀಲ್ದಾರ್ ಅವರ ಹೆಸರಿನಲ್ಲಿರುವ 3 ಎಕರೆ ಸರ್ಕಾರಿ ಭೂಮಿಯನ್ನು ಐಟಿಡಿಪಿ ಇಲಾಖೆಗೆ ಹಸ್ತಾಂತರಿಸಿ ನಿವೇಶನವಾಗಿ ಪರಿವರ್ತಿಸಲಾಗುವುದು. ಇದರಲ್ಲಿ ನಿವೇಶನ ರಹಿತ ಬುಡಕಟ್ಟು ಕೃಷಿ ಕಾರ್ಮಿಕರಿಗೆ ನಿವೇಶ ನೀಡಲಾಗುವುದು ಎಂದು ತಿಳಿಸಿದರು.</p>.<p>ಇದರಿಂದ ಎರಡು ವಾರಗಳಿಂದ ಮನೆ ಬಿಟ್ಟು ಗ್ರಾಮ ಪಂಚಾಯಿತಿ ಎದುರು ಮಳೆ ಲೆಕ್ಕಿಸದೆ ನಡೆಸುತ್ತಿದ್ದ ಆಹೋರಾತ್ರಿ ಧರಣಿಯನ್ನು ಹಿಂದಕ್ಕೆ ಪಡೆದರು.</p>.<p>ಈ ಬಗ್ಗೆ ಮಾತನಾಡಿದ ಬುಡಕಟ್ಟು ಕೃಷಿಕ ಸಂಘದ ಮುಖಂಡ ಗಪ್ಪು, ‘20 ವರ್ಷಗಳಿಂದ ನಿವೇಶನಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಈಗ ಜಯ ಸಿಕ್ಕಂತಾಗಿದೆ. ಶಾಸಕರ ಸ್ಪಂದನೆಯಿಂದ ನಮ್ಮ ಹಗಲು ರಾತ್ರಿಯ ನಿರಶನ ಅಂತ್ಯಗೊಂಡಿದೆ. ಇದಕ್ಕಾಗಿ ತಾವು ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಮನೆ ನಿವೇಶನಕ್ಕೆ ಆಗ್ರಹಿಸಿ 15 ದಿನಗಳಿಂದ ಪಾಲಿಬೆಟ್ಟ ಬಳಿಯ ಹೊಸೂರು ಗ್ರಾಮ ಪಂಚಾಯಿತಿ ಎದುರು ನಡೆಸುತ್ತಿದ್ದ ಬುಡಕಟ್ಟು ಕೃಷಿ ಕಾರ್ಮಿಕರ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಂಡಿತು.</p>.<p>ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆಯಂತೆ ಪೊನ್ನಂಪೇಟೆ ತಹಶೀಲ್ದಾರ್ ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೊಣಿಯಂಡ ಅಪ್ಪಣ್ಣ ಬುಡಕಟ್ಟು ಜನರ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.</p>.<p>ಬಳಿಕ ಹೊಸೂರು ಗ್ರಾ,ಮ ಪಂಚಾಯಿತಿ ವ್ಯಾಪ್ತಿಯ ಅಮ್ಮತ್ತಿ ಕಳ್ಳೀರ ಬಾಣೆಯಲ್ಲಿ ತಹಶೀಲ್ದಾರ್ ಅವರ ಹೆಸರಿನಲ್ಲಿರುವ 3 ಎಕರೆ ಸರ್ಕಾರಿ ಭೂಮಿಯನ್ನು ಐಟಿಡಿಪಿ ಇಲಾಖೆಗೆ ಹಸ್ತಾಂತರಿಸಿ ನಿವೇಶನವಾಗಿ ಪರಿವರ್ತಿಸಲಾಗುವುದು. ಇದರಲ್ಲಿ ನಿವೇಶನ ರಹಿತ ಬುಡಕಟ್ಟು ಕೃಷಿ ಕಾರ್ಮಿಕರಿಗೆ ನಿವೇಶ ನೀಡಲಾಗುವುದು ಎಂದು ತಿಳಿಸಿದರು.</p>.<p>ಇದರಿಂದ ಎರಡು ವಾರಗಳಿಂದ ಮನೆ ಬಿಟ್ಟು ಗ್ರಾಮ ಪಂಚಾಯಿತಿ ಎದುರು ಮಳೆ ಲೆಕ್ಕಿಸದೆ ನಡೆಸುತ್ತಿದ್ದ ಆಹೋರಾತ್ರಿ ಧರಣಿಯನ್ನು ಹಿಂದಕ್ಕೆ ಪಡೆದರು.</p>.<p>ಈ ಬಗ್ಗೆ ಮಾತನಾಡಿದ ಬುಡಕಟ್ಟು ಕೃಷಿಕ ಸಂಘದ ಮುಖಂಡ ಗಪ್ಪು, ‘20 ವರ್ಷಗಳಿಂದ ನಿವೇಶನಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಈಗ ಜಯ ಸಿಕ್ಕಂತಾಗಿದೆ. ಶಾಸಕರ ಸ್ಪಂದನೆಯಿಂದ ನಮ್ಮ ಹಗಲು ರಾತ್ರಿಯ ನಿರಶನ ಅಂತ್ಯಗೊಂಡಿದೆ. ಇದಕ್ಕಾಗಿ ತಾವು ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>