<p><strong>ವಿರಾಜಪೇಟೆ</strong>: ಪರಿಸರ ದಿನಾಚರಣೆ ಹಾಗೂ ಇನ್ನಿತರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಕಾಳಜಿವಹಿಸಿದಾಗ ಮಾತ್ರ ನೆಟ್ಟ ಗಿಡ ಬೆಳೆದು ಮರವಾಗಲು ಸಾಧ್ಯ ಎಂದು ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ ಹೇಳಿದರು.<br><br> ವಿರಾಜಪೇಟೆಯ ಶನೀಶ್ವರ ಭಕ್ತ ಜನ ಮಂಡಳಿಯ ಸಂಸ್ಥಾಪಕ ದಿವಂಗತ ವಿ.ಜಿ ಕೃಷ್ಣಸ್ವಾಮಿ ಅವರ 23 ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಮಂಡಳಿ ವ ಗೋಣಿಕೊಪ್ಪಲಿನ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಗಿಡ ನಾಟಿ, ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br><br> ಗಿಡ ನೆಡುವಾಗ ಇರುವಲ್ಲಿನ ಶ್ರದ್ಧೆ ಆ ಗಿಡ ಹಾಳಾಗದಂತೆ ಬೆಳೆದು ಕಾಪಾಡಿಕೊಳ್ಳುವಲ್ಲಿಯೂ ಇರಬೇಕು ಎಂದರು. <br> ಶಾಲೆಯ ಮುಖ್ಯಶಿಕ್ಷಕ ಕುಮಾರ್ ಎಚ್.ಕೆ ಅವರು ಮಾತನಾಡಿ ಮಕ್ಕಳು ಪರಿಸರದ ಬಗ್ಗೆ ಸದಾ ತೀವ್ರವಾದ ಕಾಳಜಿ ಬೆಳೆಸಿಕೊಳ್ಳಬೇಕು. ಕೊಡಗು ಜಿಲ್ಲೆಯ ಪರಿಸರ, ಇಲ್ಲಿನ ಗಾಳಿ ಎಲ್ಲವೂ ಶುದ್ಧವಾಗಿದ್ದು, ಇದನ್ನು ಉಳಿಸಿ ಬೆಳೆಸುವ ಕಡೆಗೆ ವಿದ್ಯಾರ್ಥಿಗಳು ಗಮನಕೊಡಬೇಕು ಎಂದರು.<br><br> ಶನೀಶ್ವರ ಭಕ್ತ ಜನ ಮಂಡಳಿಯ ಅಧ್ಯಕ್ಷ ಯುವರಾಜ ಕೃಷ್ಣ ಹಾಗೂ ಹಿರಿಯ ಪತ್ರಕರ್ತ ಟಿ.ಎಲ್.ಶ್ರೀನಿವಾಸ್ ಹಾಗೂ ಅವರು ಈ ಸಂದರ್ಭ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.<br><br>ವೇದಿಕೆಯಲ್ಲಿ ಗೋಣಿಕೊಪ್ಪಲಿನ ಉದ್ಯಮಿ ಜೋಸೆಫ್ ಅಂಥೋನಿ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶಾಂತಿ ಕೆ.ಆರ್, ವಿರಾಜಪೇಟೆ ಬಾಲಾಂಜನೇಯ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಬಾಬಾಶಂಕರ್ ಉಪಸ್ಥಿತರಿದ್ದರು.<br> ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಚಿತ್ರ ಕಲಾವಿದ ಸತೀಶ್ ಕಾರ್ಯನಿರ್ವಹಿಸಿದರು. ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಶನೀಶ್ವರ ಭಕ್ತ ಜನ ಮಂಡಳಿ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಪರಿಸರ ದಿನಾಚರಣೆ ಹಾಗೂ ಇನ್ನಿತರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಕಾಳಜಿವಹಿಸಿದಾಗ ಮಾತ್ರ ನೆಟ್ಟ ಗಿಡ ಬೆಳೆದು ಮರವಾಗಲು ಸಾಧ್ಯ ಎಂದು ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ ಹೇಳಿದರು.<br><br> ವಿರಾಜಪೇಟೆಯ ಶನೀಶ್ವರ ಭಕ್ತ ಜನ ಮಂಡಳಿಯ ಸಂಸ್ಥಾಪಕ ದಿವಂಗತ ವಿ.ಜಿ ಕೃಷ್ಣಸ್ವಾಮಿ ಅವರ 23 ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಮಂಡಳಿ ವ ಗೋಣಿಕೊಪ್ಪಲಿನ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಗಿಡ ನಾಟಿ, ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br><br> ಗಿಡ ನೆಡುವಾಗ ಇರುವಲ್ಲಿನ ಶ್ರದ್ಧೆ ಆ ಗಿಡ ಹಾಳಾಗದಂತೆ ಬೆಳೆದು ಕಾಪಾಡಿಕೊಳ್ಳುವಲ್ಲಿಯೂ ಇರಬೇಕು ಎಂದರು. <br> ಶಾಲೆಯ ಮುಖ್ಯಶಿಕ್ಷಕ ಕುಮಾರ್ ಎಚ್.ಕೆ ಅವರು ಮಾತನಾಡಿ ಮಕ್ಕಳು ಪರಿಸರದ ಬಗ್ಗೆ ಸದಾ ತೀವ್ರವಾದ ಕಾಳಜಿ ಬೆಳೆಸಿಕೊಳ್ಳಬೇಕು. ಕೊಡಗು ಜಿಲ್ಲೆಯ ಪರಿಸರ, ಇಲ್ಲಿನ ಗಾಳಿ ಎಲ್ಲವೂ ಶುದ್ಧವಾಗಿದ್ದು, ಇದನ್ನು ಉಳಿಸಿ ಬೆಳೆಸುವ ಕಡೆಗೆ ವಿದ್ಯಾರ್ಥಿಗಳು ಗಮನಕೊಡಬೇಕು ಎಂದರು.<br><br> ಶನೀಶ್ವರ ಭಕ್ತ ಜನ ಮಂಡಳಿಯ ಅಧ್ಯಕ್ಷ ಯುವರಾಜ ಕೃಷ್ಣ ಹಾಗೂ ಹಿರಿಯ ಪತ್ರಕರ್ತ ಟಿ.ಎಲ್.ಶ್ರೀನಿವಾಸ್ ಹಾಗೂ ಅವರು ಈ ಸಂದರ್ಭ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.<br><br>ವೇದಿಕೆಯಲ್ಲಿ ಗೋಣಿಕೊಪ್ಪಲಿನ ಉದ್ಯಮಿ ಜೋಸೆಫ್ ಅಂಥೋನಿ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶಾಂತಿ ಕೆ.ಆರ್, ವಿರಾಜಪೇಟೆ ಬಾಲಾಂಜನೇಯ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಬಾಬಾಶಂಕರ್ ಉಪಸ್ಥಿತರಿದ್ದರು.<br> ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಚಿತ್ರ ಕಲಾವಿದ ಸತೀಶ್ ಕಾರ್ಯನಿರ್ವಹಿಸಿದರು. ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಶನೀಶ್ವರ ಭಕ್ತ ಜನ ಮಂಡಳಿ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>