<p><strong>ವಿರಾಜಪೇಟೆ</strong>: ಸುಶಿಕ್ಷಿತರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಿಪಿಐ ಬಿ.ಎಸ್. ಶಿವರುದ್ರ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜನ ಸೇವಾ ಟ್ರಸ್ಟ್ ಪಂಜರಪೇಟೆಯಲ್ಲಿ ಈಚೆಗೆ ಆಯೋಜಿಸಿದ್ದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದು ಸಮಾಜದಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಸರ್ಕಾರಗಳು ಉಚಿತವಾಗಿ ಶಿಕ್ಷಣ ನೀಡುತ್ತಿವೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು ಎಂದರು.</p>.<p>ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಂ.ಇ.ಶರೀಫ್ ಮಾತನಾಡಿ ಸಂಸ್ಥೆಯು 2017ರಿಂದ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಆರೋಗ್ಯ, ಸಾಮಾಜಿಕ, ಕ್ರೀಡಾಕ್ಷೇತ್ರಗಳಿಗೂ ಕೊಡುಗೆ ನೀಡುತ್ತಿದೆ ಎಂದರು. 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸಾಧಕ ವಿದ್ಯಾರ್ಥಿಗಳು, ಸಂತ ಅನ್ನಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಬರೀಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆಯ ಸದಸ್ಯರಾದ ಎಂ.ದೇಚಮ್ಮ ಕಾಳಪ್ಪ , ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಡಿ.ಪಿ. ರಾಜೇಶ್ ಮಾತನಾಡಿದರು. ವಕೀಲರಾದ ರೀಹಾನ, ಸಂಸ್ಥೆಯ ಉಪಾಧ್ಯಕ್ಷ ರಹೀಂ, ಸಮಾಜ ಸೇವಕ ಅಖಿಲ್, ರಜಾಕ್, ಉದ್ಯಮಿಗಳಾದ ಅಲ್ತಾಫ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಸುಶಿಕ್ಷಿತರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಿಪಿಐ ಬಿ.ಎಸ್. ಶಿವರುದ್ರ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜನ ಸೇವಾ ಟ್ರಸ್ಟ್ ಪಂಜರಪೇಟೆಯಲ್ಲಿ ಈಚೆಗೆ ಆಯೋಜಿಸಿದ್ದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದು ಸಮಾಜದಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಸರ್ಕಾರಗಳು ಉಚಿತವಾಗಿ ಶಿಕ್ಷಣ ನೀಡುತ್ತಿವೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು ಎಂದರು.</p>.<p>ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಂ.ಇ.ಶರೀಫ್ ಮಾತನಾಡಿ ಸಂಸ್ಥೆಯು 2017ರಿಂದ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಆರೋಗ್ಯ, ಸಾಮಾಜಿಕ, ಕ್ರೀಡಾಕ್ಷೇತ್ರಗಳಿಗೂ ಕೊಡುಗೆ ನೀಡುತ್ತಿದೆ ಎಂದರು. 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸಾಧಕ ವಿದ್ಯಾರ್ಥಿಗಳು, ಸಂತ ಅನ್ನಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಬರೀಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆಯ ಸದಸ್ಯರಾದ ಎಂ.ದೇಚಮ್ಮ ಕಾಳಪ್ಪ , ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಡಿ.ಪಿ. ರಾಜೇಶ್ ಮಾತನಾಡಿದರು. ವಕೀಲರಾದ ರೀಹಾನ, ಸಂಸ್ಥೆಯ ಉಪಾಧ್ಯಕ್ಷ ರಹೀಂ, ಸಮಾಜ ಸೇವಕ ಅಖಿಲ್, ರಜಾಕ್, ಉದ್ಯಮಿಗಳಾದ ಅಲ್ತಾಫ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>