<p><strong>ಮಡಿಕೇರಿ:</strong> ಮುಂಬರುವ ಲೋಕಸಭಾ ಚುನಾವಣೆಯ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಕೊಡಗಿಗೆ ಬಂದು ರಸ್ತೆಬದಿಯಲ್ಲಿ ಎಳನೀರು ಕುಡಿದು, ಕಾರ್ಯಕರ್ತರೊಂದಿಗೆ ನಿಂತುಕೊಂಡು ಊಟ ಮಾಡಿದರು.</p><p>ಇದಕ್ಕೂ ಮುನ್ನ ಅವರು ಕುಶಾಲನಗರದ ಕೊಪ್ಪ ಸೇತುವೆ ಬಳಿ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಮಡಿಕೇರಿಯಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.</p><p>‘ರಾಜವಂಶಸ್ಥರು ಜನಸಾಮಾನ್ಯರ ಕೈಗೆ ಸಿಗುವುದಿಲ್ಲ’ ಎಂಬ ಆರೋಪ ಇದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಎಲ್ಲರಿಗೂ ಲಭ್ಯರಾಗಬೇಕಾಗುತ್ತದೆ’ ಎಂದು ಹೇಳಿದರು.</p><p>ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಪ್ರತಾಪಸಿಂಹ ಅವರು ಈಗಾಗಲೇ ಶುಭಾಶಯ ಕೋರಿದ್ದಾರೆ. ಅವರೂ ಬಂದು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ ಎಂಬ ನಿರೀಕ್ಷೆ ಇದೆ. ಅವರು 10 ವರ್ಷ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಇದಕ್ಕೂ ಮುನ್ನ ಅವರು ಇಲ್ಲಿ ನಡೆದ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯಲ್ಲಿ ಭಾಗಿಯಾಗಿ, ‘ಪ್ರಕೃತಿಗೆ ಪೂರಕವಾದ ಅಭಿವೃದ್ಧಿ ಯೋಜನೆಗಳನ್ನು ಕೊಡಗಿನಲ್ಲಿ ಜಾರಿಗೆ ತರುವೆ’ ಎಂದು ಭರವಸೆ ನೀಡಿದರು.</p><p>ಈ ವೇಳೆ ಕಾರ್ಯಕರ್ತರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮುಂಬರುವ ಲೋಕಸಭಾ ಚುನಾವಣೆಯ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಕೊಡಗಿಗೆ ಬಂದು ರಸ್ತೆಬದಿಯಲ್ಲಿ ಎಳನೀರು ಕುಡಿದು, ಕಾರ್ಯಕರ್ತರೊಂದಿಗೆ ನಿಂತುಕೊಂಡು ಊಟ ಮಾಡಿದರು.</p><p>ಇದಕ್ಕೂ ಮುನ್ನ ಅವರು ಕುಶಾಲನಗರದ ಕೊಪ್ಪ ಸೇತುವೆ ಬಳಿ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಮಡಿಕೇರಿಯಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.</p><p>‘ರಾಜವಂಶಸ್ಥರು ಜನಸಾಮಾನ್ಯರ ಕೈಗೆ ಸಿಗುವುದಿಲ್ಲ’ ಎಂಬ ಆರೋಪ ಇದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಎಲ್ಲರಿಗೂ ಲಭ್ಯರಾಗಬೇಕಾಗುತ್ತದೆ’ ಎಂದು ಹೇಳಿದರು.</p><p>ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಪ್ರತಾಪಸಿಂಹ ಅವರು ಈಗಾಗಲೇ ಶುಭಾಶಯ ಕೋರಿದ್ದಾರೆ. ಅವರೂ ಬಂದು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ ಎಂಬ ನಿರೀಕ್ಷೆ ಇದೆ. ಅವರು 10 ವರ್ಷ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಇದಕ್ಕೂ ಮುನ್ನ ಅವರು ಇಲ್ಲಿ ನಡೆದ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯಲ್ಲಿ ಭಾಗಿಯಾಗಿ, ‘ಪ್ರಕೃತಿಗೆ ಪೂರಕವಾದ ಅಭಿವೃದ್ಧಿ ಯೋಜನೆಗಳನ್ನು ಕೊಡಗಿನಲ್ಲಿ ಜಾರಿಗೆ ತರುವೆ’ ಎಂದು ಭರವಸೆ ನೀಡಿದರು.</p><p>ಈ ವೇಳೆ ಕಾರ್ಯಕರ್ತರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>