ಜಿಲ್ಲೆಯನ್ನು ಬಾಧಿಸುತ್ತಿರುವ ಕಾಡಾನೆ, ಡೆಂಗಿ, ಪ್ರಾಕೃತಿಕ ವಿಕೋಪ, ಮಳೆ ಮೊದಲಾದ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ಗೌಡ, ಎ.ಎಸ್.ಪೊನ್ನಣ್ಣ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ನಾಮ ನಿರ್ದೇಶಿತ ಸದಸ್ಯರೂ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದೇ ಮೂಕಪ್ರೇಕ್ಷಕರಂತಿದ್ದ ಯದುವೀರ್ ಅರ್ಧದಲ್ಲೇ ಸಭೆಯಿಂದ ನಿರ್ಗಮಿಸಿದರು.