<p><strong>ಕೋಲಾರ:</strong> ‘ಬಿಜೆಪಿಯವರು ಪುಡಾಂಗುಗಳು. ಸುಳ್ಳು ಹೇಳುವುದರಲ್ಲಿ, ಮೋಸ ಮಾಡುವುದರಲ್ಲಿ ಹಾಗೂ ಯಾಮಾರಿಸುವುದರಲ್ಲಿ ನಿಸ್ಸೀಮರು. ಜೆಡಿಎಸ್ನವರು ವೈಯಕ್ತಿಕ ವಿಚಾರದಲ್ಲಿ ಮುಳುಗಿದ್ದಾರೆ. ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಸಚಿವ ಡಾ.ಎಂ.ಸಿ.ಸುಧಾಕರ್ ಅವರು ತಮ್ಮ ಪುತ್ರನ ಶಿಕ್ಷಣ ವಿಚಾರವಾಗಿ ಕೆಲಸದ ಮೇಲೆ ಅಮೆರಿಕಕ್ಕೆ ಹೋಗಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬೇಗನೇ ವಾಪಸ್ ಬರುವಂತೆ ನಾನೇ ಕೇಳಿಕೊಂಡಿದ್ದೇನೆ. ಆದರೆ, ಅವರ ಪ್ರವಾಸ ವಿಚಾರ ಇಟ್ಟುಕೊಂಡು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p> ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು, ಎಷ್ಟು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿತ್ತು ಎಂಬುದನ್ನು ಹೇಳಲು ನಾನು ಹೋಗುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ತಗ್ಗಿವೆ. ಅಪ್ರಚಾರದಲ್ಲಿ ಬಿಜೆಪಿಯದ್ದು ಎತ್ತಿದ ಕೈ’ ಎಂದು ಹರಿಹಾಯ್ದರು. </p><p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಿತ್ತು. ಆಕೆ ರಾತ್ರಿ 9 ಗಂಟೆ ಸಮಯದಲ್ಲಿ ಅಲ್ಲಿಗೆ ಏಕೆ ಹೋಗಿದ್ದರು ಎಂಬುದಾಗಿ ಅಂದಿನ ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇಂಥ ಬಿಜೆಪಿಯವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು. </p><p>‘ಕಾಂಗ್ರೆಸ್ನ ಜನಪ್ರಿಯ ಐದು ಗ್ಯಾರಂಟಿ ಯೋಜನೆಗಳನ್ನೇ ಕೆಟ್ಟ ಯೋಜನೆ ಎಂದು ಹೇಳಿದ ಬಿಜೆಪಿಯರು ಸಮಾಜ ವಿರೋಧಿಗಳು. ಬಿಜೆಪಿ ಹಾಗೂ ಜೆಡಿಎಸ್ನವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ’ ಎಂದರು</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಬಿಜೆಪಿಯವರು ಪುಡಾಂಗುಗಳು. ಸುಳ್ಳು ಹೇಳುವುದರಲ್ಲಿ, ಮೋಸ ಮಾಡುವುದರಲ್ಲಿ ಹಾಗೂ ಯಾಮಾರಿಸುವುದರಲ್ಲಿ ನಿಸ್ಸೀಮರು. ಜೆಡಿಎಸ್ನವರು ವೈಯಕ್ತಿಕ ವಿಚಾರದಲ್ಲಿ ಮುಳುಗಿದ್ದಾರೆ. ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಸಚಿವ ಡಾ.ಎಂ.ಸಿ.ಸುಧಾಕರ್ ಅವರು ತಮ್ಮ ಪುತ್ರನ ಶಿಕ್ಷಣ ವಿಚಾರವಾಗಿ ಕೆಲಸದ ಮೇಲೆ ಅಮೆರಿಕಕ್ಕೆ ಹೋಗಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬೇಗನೇ ವಾಪಸ್ ಬರುವಂತೆ ನಾನೇ ಕೇಳಿಕೊಂಡಿದ್ದೇನೆ. ಆದರೆ, ಅವರ ಪ್ರವಾಸ ವಿಚಾರ ಇಟ್ಟುಕೊಂಡು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p> ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು, ಎಷ್ಟು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿತ್ತು ಎಂಬುದನ್ನು ಹೇಳಲು ನಾನು ಹೋಗುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ತಗ್ಗಿವೆ. ಅಪ್ರಚಾರದಲ್ಲಿ ಬಿಜೆಪಿಯದ್ದು ಎತ್ತಿದ ಕೈ’ ಎಂದು ಹರಿಹಾಯ್ದರು. </p><p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಿತ್ತು. ಆಕೆ ರಾತ್ರಿ 9 ಗಂಟೆ ಸಮಯದಲ್ಲಿ ಅಲ್ಲಿಗೆ ಏಕೆ ಹೋಗಿದ್ದರು ಎಂಬುದಾಗಿ ಅಂದಿನ ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇಂಥ ಬಿಜೆಪಿಯವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು. </p><p>‘ಕಾಂಗ್ರೆಸ್ನ ಜನಪ್ರಿಯ ಐದು ಗ್ಯಾರಂಟಿ ಯೋಜನೆಗಳನ್ನೇ ಕೆಟ್ಟ ಯೋಜನೆ ಎಂದು ಹೇಳಿದ ಬಿಜೆಪಿಯರು ಸಮಾಜ ವಿರೋಧಿಗಳು. ಬಿಜೆಪಿ ಹಾಗೂ ಜೆಡಿಎಸ್ನವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ’ ಎಂದರು</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>