<p>ಕೋಲಾರ: ‘ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಗುತ್ತಿಗೆದಾರರಿಗೆ ಯಾವುದೇ ಕಾಮಗಾರಿ ನೀಡದೆ ವಂಚನೆ ಮಾಡಲಾಗುತ್ತಿದೆ. ಅಧಿಕಾರಿಗಳು ಈ ಕೂಡಲೇ ಕಾನೂನು ರೀತಿಯಲ್ಲಿ ಈ ಸಮುದಾಯದ ಸ್ಥಳೀಯ ಗುತ್ತಿಗೆದಾರರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಾಬು ವಿ.ಮಾರ್ಜೆನಹಳ್ಳಿ ಒತ್ತಾಯಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನೀಡಲು ಮೀಸಲಾತಿ ಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಲಕ್ಷದಿಂದ ₹1 ಕೋಟಿಗೆ ಹೆಚ್ಚಿಸಿದ್ದಾರೆ. ಆದರೆ, ಇಲಾಖೆಗಳು ಈ ಮೀಸಲಾತಿಯನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ, ಅಧಿಕಾರಿಗಳು ಅಡ್ಡಗಾಲಾಗಿ ಪರಿಣಮಿಸಿದ್ದಾರೆ. ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ನಮ್ಮ ಪಾಲು ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಹಿಂದೆಯೂ ಈ ವಿಚಾರದಲ್ಲಿ ನಾವು ಹೋರಾಟ ನಡೆಸಿದ್ದೆವು. ವಿಧಾನಸೌಧ ಮುತ್ತಿಗೆ ಹಾಕಿದ್ದೆವು. ಆಗ ಮೀಸಲಾತಿ ಅನುಷ್ಠಾನಗೊಳಿಸುವಂತೆ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು’ ಎಂದರು.</p>.<p>‘ಜಿಲ್ಲೆಯಲ್ಲಿ 200ರಿಂದ 300 ಎಸ್ಸಿ, ಎಸ್ಟಿ ಗುತ್ತಿಗೆದಾರರು ಇದ್ದಾರೆ. ಆದರೆ, ಅಧಿಕಾರಿಗಳು ಅಡ್ಡಗಾಲು ಆಗಿರುವುದರಿಂದ ಪರವಾನಗಿ ಇದ್ದರೂ ಕೆಲಸ ಸಿಗುತ್ತಿಲ್ಲ. ಜಿಲ್ಲೆಗೆ ಬಂದ ಕಾಮಗಾರಿಗಳನ್ನು ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಕ್ಕೆ ಕೊಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಕೆಟಿಪಿಪಿ ಪ್ರಕಾರ ಸರ್ಕಾರದಿಂದ ಅನುಮೋದನೆಗೊಂಡ ಕಾಮಗಾರಿಗಳಿಗೆ ₹ 2 ಕೋಟಿ ವರೆಗೆ ಮಾತ್ರ ವಿನಾಯಿತಿ ಇದ್ದು, ಬಹಳ ತುರ್ತು ಹಾಗೂ ಅನಿವಾರ್ಯ ಸಮಯದಲ್ಲಿ ಮಾತ್ರ ನಿರ್ಮಿಸಲು ಅವಕಾಶವಿರುತ್ತದೆ. ಆದರೆ ವಿನಾಕಾರಣ ಈ ಸಂಸ್ಥೆಗಳಿಗೆ ಇತರೆ ಇಲಾಖೆಗಳಲ್ಲಿನ ಕಾಮಗಾರಿ ಅನುಷ್ಠಾನ ಮಾಡಲು ತಾಂತ್ರಿಕ ಇಲಾಖೆ ಇದ್ದರೂ ಸ್ಥಳೀಯ ಪ್ರತಿನಿಧಿಗಳು ಮೌಕಿಕ ಆದೇಶದ ಮೇರೆಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹ 9.8 ಕೋಟಿ ಮೊತ್ತದ ಕಾಮಗಾರಿಗಳನ್ನು ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಎಸ್ಸಿಪಿ ಹಾಗೂ ಟಿಎಸ್ಪಿ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಯನ್ನೂ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಲಭಿಸಿದ ಎಲ್ಲಾ ಕಾಮಗಾರಿಗಳೂ ಅವರಿಗೆ ಹೋಗಿವೆ. ಈ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ವಂಚನೆ ಮಾಡಲಾಗಿದೆ’ ಎಂದು ಆರೋಪಿಸಿದರು.</p>.<p>‘ಜಿಲ್ಲೆಯಲ್ಲಿ ಒಟ್ಟು ಸಾವಿರ ಗುತ್ತಿಗೆದಾರರು ಇದ್ದಾರೆ. ಅವರಿಗೆ ವಿವಿಧ ಇಲಾಖೆಗಳಿಂದ ಬರಬೇಕಿರುವ ₹ 98 ಕೋಟಿ ಶುಲ್ಕ ಬಾಕಿ ಇದೆ’ ಎಂದರು.</p>.<p>‘ಮುಂದಿನಗಳಲ್ಲಿ ಇಂತಹ ವಂಚನೆಗಳಿಗೆ ಕಡಿವಾಣ ಹಾಕಬೇಕು. ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಕೊಡಬೇಕು. ಇಲ್ಲದೆ ಹೋದರೆ ಸಂಘದಿಂದ ಉಗ್ರ ಹೋರಾಟವನ್ನು ಇಲಾಖೆ ಹಾಗೂ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ವೆಂಕಟರೆಡ್ಡಿ ಗೌಡಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ವಿ. ಹಾಗೂ ಕೃಷ್ಣಪ್ಪ ಇದ್ದರು.</p>.<p>Highlights - ಜಿಲ್ಲೆಯಲ್ಲಿ 200ರಿಂದ 300 ಎಸ್ಸಿ, ಎಸ್ಟಿ ಗುತ್ತಿಗೆದಾರರು ದೊಡ್ಡಮಟ್ಟದ ಹೋರಾಟದ ಎಚ್ಚರಿಕೆ ಕೆಆರ್ಐಡಿಎಲ್, ನಿರ್ಮಿತಿ ಕೇಂದ್ರಕ್ಕೆ ಎಲ್ಲಾ ಟೆಂಡರ್–ದೂರು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಗುತ್ತಿಗೆದಾರರಿಗೆ ಯಾವುದೇ ಕಾಮಗಾರಿ ನೀಡದೆ ವಂಚನೆ ಮಾಡಲಾಗುತ್ತಿದೆ. ಅಧಿಕಾರಿಗಳು ಈ ಕೂಡಲೇ ಕಾನೂನು ರೀತಿಯಲ್ಲಿ ಈ ಸಮುದಾಯದ ಸ್ಥಳೀಯ ಗುತ್ತಿಗೆದಾರರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಾಬು ವಿ.ಮಾರ್ಜೆನಹಳ್ಳಿ ಒತ್ತಾಯಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನೀಡಲು ಮೀಸಲಾತಿ ಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಲಕ್ಷದಿಂದ ₹1 ಕೋಟಿಗೆ ಹೆಚ್ಚಿಸಿದ್ದಾರೆ. ಆದರೆ, ಇಲಾಖೆಗಳು ಈ ಮೀಸಲಾತಿಯನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ, ಅಧಿಕಾರಿಗಳು ಅಡ್ಡಗಾಲಾಗಿ ಪರಿಣಮಿಸಿದ್ದಾರೆ. ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ನಮ್ಮ ಪಾಲು ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಹಿಂದೆಯೂ ಈ ವಿಚಾರದಲ್ಲಿ ನಾವು ಹೋರಾಟ ನಡೆಸಿದ್ದೆವು. ವಿಧಾನಸೌಧ ಮುತ್ತಿಗೆ ಹಾಕಿದ್ದೆವು. ಆಗ ಮೀಸಲಾತಿ ಅನುಷ್ಠಾನಗೊಳಿಸುವಂತೆ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು’ ಎಂದರು.</p>.<p>‘ಜಿಲ್ಲೆಯಲ್ಲಿ 200ರಿಂದ 300 ಎಸ್ಸಿ, ಎಸ್ಟಿ ಗುತ್ತಿಗೆದಾರರು ಇದ್ದಾರೆ. ಆದರೆ, ಅಧಿಕಾರಿಗಳು ಅಡ್ಡಗಾಲು ಆಗಿರುವುದರಿಂದ ಪರವಾನಗಿ ಇದ್ದರೂ ಕೆಲಸ ಸಿಗುತ್ತಿಲ್ಲ. ಜಿಲ್ಲೆಗೆ ಬಂದ ಕಾಮಗಾರಿಗಳನ್ನು ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಕ್ಕೆ ಕೊಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಕೆಟಿಪಿಪಿ ಪ್ರಕಾರ ಸರ್ಕಾರದಿಂದ ಅನುಮೋದನೆಗೊಂಡ ಕಾಮಗಾರಿಗಳಿಗೆ ₹ 2 ಕೋಟಿ ವರೆಗೆ ಮಾತ್ರ ವಿನಾಯಿತಿ ಇದ್ದು, ಬಹಳ ತುರ್ತು ಹಾಗೂ ಅನಿವಾರ್ಯ ಸಮಯದಲ್ಲಿ ಮಾತ್ರ ನಿರ್ಮಿಸಲು ಅವಕಾಶವಿರುತ್ತದೆ. ಆದರೆ ವಿನಾಕಾರಣ ಈ ಸಂಸ್ಥೆಗಳಿಗೆ ಇತರೆ ಇಲಾಖೆಗಳಲ್ಲಿನ ಕಾಮಗಾರಿ ಅನುಷ್ಠಾನ ಮಾಡಲು ತಾಂತ್ರಿಕ ಇಲಾಖೆ ಇದ್ದರೂ ಸ್ಥಳೀಯ ಪ್ರತಿನಿಧಿಗಳು ಮೌಕಿಕ ಆದೇಶದ ಮೇರೆಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹ 9.8 ಕೋಟಿ ಮೊತ್ತದ ಕಾಮಗಾರಿಗಳನ್ನು ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಎಸ್ಸಿಪಿ ಹಾಗೂ ಟಿಎಸ್ಪಿ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಯನ್ನೂ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಲಭಿಸಿದ ಎಲ್ಲಾ ಕಾಮಗಾರಿಗಳೂ ಅವರಿಗೆ ಹೋಗಿವೆ. ಈ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ವಂಚನೆ ಮಾಡಲಾಗಿದೆ’ ಎಂದು ಆರೋಪಿಸಿದರು.</p>.<p>‘ಜಿಲ್ಲೆಯಲ್ಲಿ ಒಟ್ಟು ಸಾವಿರ ಗುತ್ತಿಗೆದಾರರು ಇದ್ದಾರೆ. ಅವರಿಗೆ ವಿವಿಧ ಇಲಾಖೆಗಳಿಂದ ಬರಬೇಕಿರುವ ₹ 98 ಕೋಟಿ ಶುಲ್ಕ ಬಾಕಿ ಇದೆ’ ಎಂದರು.</p>.<p>‘ಮುಂದಿನಗಳಲ್ಲಿ ಇಂತಹ ವಂಚನೆಗಳಿಗೆ ಕಡಿವಾಣ ಹಾಕಬೇಕು. ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಕೊಡಬೇಕು. ಇಲ್ಲದೆ ಹೋದರೆ ಸಂಘದಿಂದ ಉಗ್ರ ಹೋರಾಟವನ್ನು ಇಲಾಖೆ ಹಾಗೂ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ವೆಂಕಟರೆಡ್ಡಿ ಗೌಡಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ವಿ. ಹಾಗೂ ಕೃಷ್ಣಪ್ಪ ಇದ್ದರು.</p>.<p>Highlights - ಜಿಲ್ಲೆಯಲ್ಲಿ 200ರಿಂದ 300 ಎಸ್ಸಿ, ಎಸ್ಟಿ ಗುತ್ತಿಗೆದಾರರು ದೊಡ್ಡಮಟ್ಟದ ಹೋರಾಟದ ಎಚ್ಚರಿಕೆ ಕೆಆರ್ಐಡಿಎಲ್, ನಿರ್ಮಿತಿ ಕೇಂದ್ರಕ್ಕೆ ಎಲ್ಲಾ ಟೆಂಡರ್–ದೂರು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>