<p><strong>ಮುಳಬಾಗಿಲು:</strong> ಡೆಂಗಿ, ಡಯೇರಿಯಾ, ಮತ್ತು ಚಿಕೂನ್ ಗುನ್ಯ ಹಾಗೂ ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಿಕೆ ಕುರಿತು ನಗರಸಭೆಯ ವತಿಯಿಂದ ಸೋಮವಾರ ಜಾಥಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು.</p>.<p>ನಗರಸಭೆ ಸಿಬ್ಬಂದಿ ಬ್ಯಾನರ್ ಹಾಗೂ ಜಾಗೃತಿ ಫಲಕಗಳನ್ನು ಹಿಡಿದು ಸಿಬ್ಬಂದಿ, ಸಾರ್ವಜನಿಕರಿಗೆ ಅರಿವು ಮೂಡಿಸಿದರು.</p>.<p>ಹುಲಿ, ಕರಡಿ ವೇಷಧಾರಿಗಳಾಗಿ ಸಾಂಸ್ಕ್ರತಿಕ ವೇಷಭೂಷಣಗಳನ್ನು ಹಾಕೊಕೊಂಡಿದ್ದ ಸಿಬ್ಬಂದಿ ಡೆಂಗಿ, ಡಯೇರಿಯಾ, ಮಲೇರಿಯಾ ಮತ್ತಿತರ ಕಾಯಿಲೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು.</p>.<p>ನಗರಸಭೆ ಆಯುಕ್ತ ವಿ.ಶ್ರೀಧರ್ ಮಾತನಾಡಿ, ಸ್ವಚ್ಚತೆ ಇಲ್ಲದೆ, ನೀರು ನಿಲ್ಲುವ ಸ್ಥಳಗಳಿಂದ ನಾನಾ ಬಗೆಯ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಸೊಳ್ಳೆಗಳಿಂದಾಗಿ ಡೆಂಗಿ, ಮಲೇರಿಯಾ ಮತ್ತಿತರ ಕಾಯಿಲೆಗಳು ಹರಡುತ್ತಿವೆ. ಹೀಗಾಗಿ ಕಾಯಿಲೆಗಳ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಎಲ್ಲರೂ ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.</p>.<p>ಹಿರಿಯ ಆರೋಗ್ಯ ನಿರೀಕ್ಷಕಿ ವಿ.ಪ್ರತಿಭಾ, ಪೌರ ಕಾರ್ಮಿಕರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಡೆಂಗಿ, ಡಯೇರಿಯಾ, ಮತ್ತು ಚಿಕೂನ್ ಗುನ್ಯ ಹಾಗೂ ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಿಕೆ ಕುರಿತು ನಗರಸಭೆಯ ವತಿಯಿಂದ ಸೋಮವಾರ ಜಾಥಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು.</p>.<p>ನಗರಸಭೆ ಸಿಬ್ಬಂದಿ ಬ್ಯಾನರ್ ಹಾಗೂ ಜಾಗೃತಿ ಫಲಕಗಳನ್ನು ಹಿಡಿದು ಸಿಬ್ಬಂದಿ, ಸಾರ್ವಜನಿಕರಿಗೆ ಅರಿವು ಮೂಡಿಸಿದರು.</p>.<p>ಹುಲಿ, ಕರಡಿ ವೇಷಧಾರಿಗಳಾಗಿ ಸಾಂಸ್ಕ್ರತಿಕ ವೇಷಭೂಷಣಗಳನ್ನು ಹಾಕೊಕೊಂಡಿದ್ದ ಸಿಬ್ಬಂದಿ ಡೆಂಗಿ, ಡಯೇರಿಯಾ, ಮಲೇರಿಯಾ ಮತ್ತಿತರ ಕಾಯಿಲೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು.</p>.<p>ನಗರಸಭೆ ಆಯುಕ್ತ ವಿ.ಶ್ರೀಧರ್ ಮಾತನಾಡಿ, ಸ್ವಚ್ಚತೆ ಇಲ್ಲದೆ, ನೀರು ನಿಲ್ಲುವ ಸ್ಥಳಗಳಿಂದ ನಾನಾ ಬಗೆಯ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಸೊಳ್ಳೆಗಳಿಂದಾಗಿ ಡೆಂಗಿ, ಮಲೇರಿಯಾ ಮತ್ತಿತರ ಕಾಯಿಲೆಗಳು ಹರಡುತ್ತಿವೆ. ಹೀಗಾಗಿ ಕಾಯಿಲೆಗಳ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಎಲ್ಲರೂ ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.</p>.<p>ಹಿರಿಯ ಆರೋಗ್ಯ ನಿರೀಕ್ಷಕಿ ವಿ.ಪ್ರತಿಭಾ, ಪೌರ ಕಾರ್ಮಿಕರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>