<p><strong>ಕೋಲಾರ:</strong> ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಜಂಗಾಲಹಳ್ಳಿಯ ಜಿ.ಎಸ್. ಭವಾನಿ (26) ಮೃತ ಮಹಿಳೆ. ಅವರನ್ನು ಹೆರಿಗೆಗಾಗಿ ಸೋಮವಾರ ಬೆಳಿಗ್ಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ರಾತ್ರಿ ವೇಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ನರ್ಸ್ ಇಂಜೆಕ್ಷನ್ ನೀಡಿದ್ದಾರೆ. ಆದಾಗಿ ಕೆಲವೇ ನಿಮಿಷಗಳಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ. ಅಲ್ಲದೇ, ಮಗುವಿನ ತಲೆಗೂ ಗಾಯವಾಗಿದೆ.</p><p>ಈ ಸಂಬಂಧ ಪತಿ ಆರ್. ಗೋಪಾಲ್ ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ಸಾವಿಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದಾರೆ.</p><p>‘ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಪತ್ನಿ ಮೃತಪಟ್ಟಿದ್ದಾಳೆ. ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಸಮಸ್ಯೆ ಬಿಗಡಾಯಿಸಿತು’ ಎಂದು ಗೋಪಾಲ್ ಕಣ್ಣೀರಿಟ್ಟರು. </p><p>‘ವೈದ್ಯರು ಸಿಸೇರಿಯನ್ ಹೆರಿಗೆ ಮಾಡಿ ಮಗು ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮಗುವಿನ ತಲೆಗೆ ಏಟು ಬಿದ್ದು ಗಾಯವಾಗಿದೆ. ಸರಿಯಾಗಿ ಸಿಸೇರಿಯನ್ ಕೂಡ ಮಾಡಿಲ್ಲ’ ಎಂದು ದೂರಿದರು.</p><p>‘ಮಗು ಸರಿಯಾಗಿ ಕಣ್ಣು ಬಿಡುವ ಮುನ್ನವೇ ತಾಯಿ ಕಳೆದುಕೊಂಡಿದೆ’ ಎಂದು ಮಹಿಳೆಯ ಅತ್ತೆ ರತ್ನಮ್ಮ ಗೋಳಿಟ್ಟರು. </p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಹಾಗೂ ಎಸ್ಎನ್ಆರ್ ಜಿಲ್ಲಾಸ್ಪತ್ರೆಯ ಡಾ.ಎಸ್.ಎನ್. ವಿಜಯಕುಮಾರ್, ‘ಆಸ್ಪತ್ರೆಯಲ್ಲಿ ಯಾರೂ ನಿರ್ಲಕ್ಷ್ಯ ವಹಿಸಿಲ್ಲ. ವಾರದಿಂದ 45 ಮಂದಿಗೆ ಹೆರಿಗೆಯಾಗಿದ್ದು, ಯಾರಿಗೂ ಯಾವುದೇ ಸಮಸ್ಯೆ ಆಗಿಲ್ಲ. ಈ ಮಹಿಳೆಯ ಸಾವಿಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ’ ಎಂದರು. </p><p>ಗೋಪಾಲ್ ಹಾಗೂ ಭವಾನಿ ಅವರದ್ದು ಪ್ರೇಮ ವಿವಾಹ. 10 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದರು. ಮಹಿಳೆಯ ಅಂತ್ಯಕ್ರಿಯೆ ಜಂಗಾಲಹಳ್ಳಿಯಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಜಂಗಾಲಹಳ್ಳಿಯ ಜಿ.ಎಸ್. ಭವಾನಿ (26) ಮೃತ ಮಹಿಳೆ. ಅವರನ್ನು ಹೆರಿಗೆಗಾಗಿ ಸೋಮವಾರ ಬೆಳಿಗ್ಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ರಾತ್ರಿ ವೇಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ನರ್ಸ್ ಇಂಜೆಕ್ಷನ್ ನೀಡಿದ್ದಾರೆ. ಆದಾಗಿ ಕೆಲವೇ ನಿಮಿಷಗಳಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ. ಅಲ್ಲದೇ, ಮಗುವಿನ ತಲೆಗೂ ಗಾಯವಾಗಿದೆ.</p><p>ಈ ಸಂಬಂಧ ಪತಿ ಆರ್. ಗೋಪಾಲ್ ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ಸಾವಿಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದಾರೆ.</p><p>‘ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಪತ್ನಿ ಮೃತಪಟ್ಟಿದ್ದಾಳೆ. ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಸಮಸ್ಯೆ ಬಿಗಡಾಯಿಸಿತು’ ಎಂದು ಗೋಪಾಲ್ ಕಣ್ಣೀರಿಟ್ಟರು. </p><p>‘ವೈದ್ಯರು ಸಿಸೇರಿಯನ್ ಹೆರಿಗೆ ಮಾಡಿ ಮಗು ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮಗುವಿನ ತಲೆಗೆ ಏಟು ಬಿದ್ದು ಗಾಯವಾಗಿದೆ. ಸರಿಯಾಗಿ ಸಿಸೇರಿಯನ್ ಕೂಡ ಮಾಡಿಲ್ಲ’ ಎಂದು ದೂರಿದರು.</p><p>‘ಮಗು ಸರಿಯಾಗಿ ಕಣ್ಣು ಬಿಡುವ ಮುನ್ನವೇ ತಾಯಿ ಕಳೆದುಕೊಂಡಿದೆ’ ಎಂದು ಮಹಿಳೆಯ ಅತ್ತೆ ರತ್ನಮ್ಮ ಗೋಳಿಟ್ಟರು. </p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಹಾಗೂ ಎಸ್ಎನ್ಆರ್ ಜಿಲ್ಲಾಸ್ಪತ್ರೆಯ ಡಾ.ಎಸ್.ಎನ್. ವಿಜಯಕುಮಾರ್, ‘ಆಸ್ಪತ್ರೆಯಲ್ಲಿ ಯಾರೂ ನಿರ್ಲಕ್ಷ್ಯ ವಹಿಸಿಲ್ಲ. ವಾರದಿಂದ 45 ಮಂದಿಗೆ ಹೆರಿಗೆಯಾಗಿದ್ದು, ಯಾರಿಗೂ ಯಾವುದೇ ಸಮಸ್ಯೆ ಆಗಿಲ್ಲ. ಈ ಮಹಿಳೆಯ ಸಾವಿಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ’ ಎಂದರು. </p><p>ಗೋಪಾಲ್ ಹಾಗೂ ಭವಾನಿ ಅವರದ್ದು ಪ್ರೇಮ ವಿವಾಹ. 10 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದರು. ಮಹಿಳೆಯ ಅಂತ್ಯಕ್ರಿಯೆ ಜಂಗಾಲಹಳ್ಳಿಯಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>