<p>ಕೋಲಾರ: ನಗರದಿಂದ ಮಲ–ಮೂತ್ರದೊಂದಿಗೆ ಹರಿಯುತ್ತಿರುವ ಕೊಳಚೆ ನೀರಿನ ಪೈಪ್ ದುರಸ್ತಿಗೆಂದು ರಾಷ್ಟ್ರೀಯ ಹೆದ್ದಾರಿ ರಾಯಲ್ ಎನ್ಫೀಲ್ಡ್ ಶೋ ರೂಂ ಬಳಿ ಗುಂಡಿ ತೋಡಿರುವುದರಿಂದ ಗಬ್ಬು ನಾರುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಮಲ–ಮೂತ್ರ ಕಟ್ಟಿಕೊಂಡಿರುವ ಜಾಗದಲ್ಲಿ ಗುಂಡಿ ತೋಡಿದ್ದು, ಮೂರು ದಿನಗಳಿಂದ ತೆರೆದೇ ಇದೆ. ನಗರಸಭೆ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನವಿಲ್ಲದೆ ಕಾಮಗಾರಿಯಲ್ಲಿ ತೊಡಗಿದ್ದಾರೆ.</p>.<p>‘ಜೆಸಿಬಿ ಬಳಸಿ ಸುಮಾರು 10 ಅಡಿ ಗುಂಡಿ ತೋಡಿದ್ದು, ಮೂರು ದಿನಗಳಿಂದ ಹಾಗೆಯೇ ಇದೆ. ಈ ಭಾಗದಲ್ಲಿ ತಿರುಗಾಡಲು ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದೆ. ಸುತ್ತಲಿನ ಅಂಗಡಿಗಳವರಗೆ ವಾಸನೆ ಹರಡಿದೆ’ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ನಗರಸಭೆ ಕಾರ್ಮಿಕರು ಯಾವುದೇ ಸುರಕ್ಷತಾ ಸಾಧನೆ ಇಲ್ಲದೆ ಕೆಲಸದಲ್ಲಿ ತೊಡಗಿದ್ದಾರೆ. ಅದು ಮಲಮೂತ್ರ ತುಂಬಿಕೊಂಡಿದ್ದು ಡೀಸೆಲ್ ಪಂಪ್ ಬಳಸಿ ಪೈಪ್ನಿಂದ ಕೈಯಲ್ಲೇ ಕೆಲಸ ಮಾಡುತ್ತಿದ್ದಾರೆ. ಇಂಥ ಕೆಲಸವನ್ನು ಸಕ್ಕಿಂಗ್ ಯಂತ್ರ ಬಳಸಿ ಮಾಡಬೇಕಿತ್ತು. ಆರೋಗ್ಯ ನಿರೀಕ್ಷಕರು ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಇಲ್ಲ. ಈ ರೀತಿ ಕೆಲಸ ಮಾಡಿಸುವುದು ಕಾನೂನು ಬಾಹಿರ. ನಗರಸಭೆ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯ ಪರಮಾವಧಿ ಇದು’ ಎಂದು ಆರೋಪಿಸಿದ್ದಾರೆ.</p>.<p>ಕಾಮಗಾರಿ ನಡೆಯುತ್ತಿರುವ ಸ್ಥಳದ ಬಳಿ ಫಲಕವಾಗಲಿ, ತಡೆಗೋಡೆ ಆಗಲಿ ಹಾಕಿಲ್ಲ. ಇದರಿಂದ ವಾಹನ ಸವಾರರು, ಪಾದಚಾರಿಗಳು ಆತಂಕದಿಂದಲೇ ತೆರಳಬೇಕಾದ ಪರಿಸ್ಥಿತಿ ನೆಲೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದಿಂದ ಮಲ–ಮೂತ್ರದೊಂದಿಗೆ ಹರಿಯುತ್ತಿರುವ ಕೊಳಚೆ ನೀರಿನ ಪೈಪ್ ದುರಸ್ತಿಗೆಂದು ರಾಷ್ಟ್ರೀಯ ಹೆದ್ದಾರಿ ರಾಯಲ್ ಎನ್ಫೀಲ್ಡ್ ಶೋ ರೂಂ ಬಳಿ ಗುಂಡಿ ತೋಡಿರುವುದರಿಂದ ಗಬ್ಬು ನಾರುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಮಲ–ಮೂತ್ರ ಕಟ್ಟಿಕೊಂಡಿರುವ ಜಾಗದಲ್ಲಿ ಗುಂಡಿ ತೋಡಿದ್ದು, ಮೂರು ದಿನಗಳಿಂದ ತೆರೆದೇ ಇದೆ. ನಗರಸಭೆ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನವಿಲ್ಲದೆ ಕಾಮಗಾರಿಯಲ್ಲಿ ತೊಡಗಿದ್ದಾರೆ.</p>.<p>‘ಜೆಸಿಬಿ ಬಳಸಿ ಸುಮಾರು 10 ಅಡಿ ಗುಂಡಿ ತೋಡಿದ್ದು, ಮೂರು ದಿನಗಳಿಂದ ಹಾಗೆಯೇ ಇದೆ. ಈ ಭಾಗದಲ್ಲಿ ತಿರುಗಾಡಲು ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದೆ. ಸುತ್ತಲಿನ ಅಂಗಡಿಗಳವರಗೆ ವಾಸನೆ ಹರಡಿದೆ’ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ನಗರಸಭೆ ಕಾರ್ಮಿಕರು ಯಾವುದೇ ಸುರಕ್ಷತಾ ಸಾಧನೆ ಇಲ್ಲದೆ ಕೆಲಸದಲ್ಲಿ ತೊಡಗಿದ್ದಾರೆ. ಅದು ಮಲಮೂತ್ರ ತುಂಬಿಕೊಂಡಿದ್ದು ಡೀಸೆಲ್ ಪಂಪ್ ಬಳಸಿ ಪೈಪ್ನಿಂದ ಕೈಯಲ್ಲೇ ಕೆಲಸ ಮಾಡುತ್ತಿದ್ದಾರೆ. ಇಂಥ ಕೆಲಸವನ್ನು ಸಕ್ಕಿಂಗ್ ಯಂತ್ರ ಬಳಸಿ ಮಾಡಬೇಕಿತ್ತು. ಆರೋಗ್ಯ ನಿರೀಕ್ಷಕರು ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಇಲ್ಲ. ಈ ರೀತಿ ಕೆಲಸ ಮಾಡಿಸುವುದು ಕಾನೂನು ಬಾಹಿರ. ನಗರಸಭೆ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯ ಪರಮಾವಧಿ ಇದು’ ಎಂದು ಆರೋಪಿಸಿದ್ದಾರೆ.</p>.<p>ಕಾಮಗಾರಿ ನಡೆಯುತ್ತಿರುವ ಸ್ಥಳದ ಬಳಿ ಫಲಕವಾಗಲಿ, ತಡೆಗೋಡೆ ಆಗಲಿ ಹಾಕಿಲ್ಲ. ಇದರಿಂದ ವಾಹನ ಸವಾರರು, ಪಾದಚಾರಿಗಳು ಆತಂಕದಿಂದಲೇ ತೆರಳಬೇಕಾದ ಪರಿಸ್ಥಿತಿ ನೆಲೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>