<p><strong>ಕೆಜಿಎಫ್</strong>: ತಾಲ್ಲೂಕಿನ ಸ್ವಾಭಿಮಾನ ವೇದಿಕೆಯ ಮುಖ್ಯಸ್ಥ ಮೋಹನಕೃಷ್ಣ ಅವರ ಕೋಳಿಫಾರಂಗೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು 9 ಸಾವಿರ ಕೋಳಿ ಮರಿಗಳು ಮೃತಪಟ್ಟಿದ್ದು, ಸುಮಾರು ₹15 ಲಕ್ಷ ನಷ್ಟ ಸಂಭವಿಸಿದೆ.</p>.<p>ತಾಲ್ಲೂಕಿನ ನೆರ್ನಹಳ್ಳಿ ಗ್ರಾಮದ ಬಳಿ ಇರುವ ಅವರ ಕೋಳಿ ಫಾರಂನಲ್ಲಿ ರಾತ್ರಿ 11.40ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಫಾರಂನ ಹಿಂಭಾಗದಿಂದ ಬಂದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿ ಅನಾಹುತದಲ್ಲಿ ಸುಮಾರು 9 ಸಾವಿರ ಕೋಳಿ ಮರಿಗಳು ಮೃತಪಟ್ಟಿದ್ದು, ಹಲವು ಪರಿಕರಗಳು ಸುಟ್ಟು ಭಸ್ಮವಾಗಿದೆ.</p>.<p>ಘಟನೆ ನಡೆದ ಸಂದರ್ಭದಲ್ಲಿ ಉತ್ತರ ಭಾರತದ ಕಾರ್ಮಿಕರು ಫಾರಂನಲ್ಲಿದ್ದು, ಅವರು ಭೀತಿಗೊಂಡು ಓಡಿಹೋಗಿದ್ದಾರೆ. ನಂತರ ಗ್ರಾಮಸ್ಥರ ಜೊತೆಗೂಡಿ ಬೆಂಕಿ ಆರಿಸಲಾಯಿತು. ನಗರದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು.</p>.<p>ಘಟನೆಯಿಂದ ಕುಪಿತಗೊಂಡ ಮೋಹನಕೃಷ್ಣ ಅವರ ನೂರಾರು ಬೆಂಬಲಿಗರು ರಾತ್ರಿ ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ದುಷ್ಕರ್ಮಿಗಳಿಗೆ ಬುದ್ಧಿ ಕಲಿಸುವುದಾಗಿ ಎಚ್ಚರಿಕೆ ನೀಡಿದರು. ಅವರನ್ನು ಸಮಾಧಾನ ಮಾಡಿ ಕಳಿಸಲಾಯಿತು.</p>.<p>ರಾಮಸಾಗರ ಗ್ರಾಮ ಪಂಚಾಯಿತಿಯ ರಾಜಕೀಯ ವಿದ್ಯಾಮಾನಗಳಿಂದ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂಬ ಶಂಕೆ ಇದೆ. ಈ ಸಂಬಂಧವಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ, ಯಾರನ್ನು ನಿರ್ಧಿಷ್ಟವಾಗಿ ಹೆಸರಿಸಿಲ್ಲ ಎಂದು ಮುಖಂಡ ಮೋಹನಕೃಷ್ಣ ತಿಳಿಸಿದ್ದಾರೆ.</p>.<p>ಬೇತಮಂಗಲ ಸರ್ಕಲ್ ಇನ್ಸ್ಪೆಕ್ಟರ್ ರಂಗಶಾಮಯ್ಯ, ಸಬ್ ಇನ್ಸ್ಪೆಕ್ಟರ್ ಗುರುರಾಜ ಚಿಂತಕಾಲ, ಶ್ವಾನದಳ ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ತಾಲ್ಲೂಕಿನ ಸ್ವಾಭಿಮಾನ ವೇದಿಕೆಯ ಮುಖ್ಯಸ್ಥ ಮೋಹನಕೃಷ್ಣ ಅವರ ಕೋಳಿಫಾರಂಗೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು 9 ಸಾವಿರ ಕೋಳಿ ಮರಿಗಳು ಮೃತಪಟ್ಟಿದ್ದು, ಸುಮಾರು ₹15 ಲಕ್ಷ ನಷ್ಟ ಸಂಭವಿಸಿದೆ.</p>.<p>ತಾಲ್ಲೂಕಿನ ನೆರ್ನಹಳ್ಳಿ ಗ್ರಾಮದ ಬಳಿ ಇರುವ ಅವರ ಕೋಳಿ ಫಾರಂನಲ್ಲಿ ರಾತ್ರಿ 11.40ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಫಾರಂನ ಹಿಂಭಾಗದಿಂದ ಬಂದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿ ಅನಾಹುತದಲ್ಲಿ ಸುಮಾರು 9 ಸಾವಿರ ಕೋಳಿ ಮರಿಗಳು ಮೃತಪಟ್ಟಿದ್ದು, ಹಲವು ಪರಿಕರಗಳು ಸುಟ್ಟು ಭಸ್ಮವಾಗಿದೆ.</p>.<p>ಘಟನೆ ನಡೆದ ಸಂದರ್ಭದಲ್ಲಿ ಉತ್ತರ ಭಾರತದ ಕಾರ್ಮಿಕರು ಫಾರಂನಲ್ಲಿದ್ದು, ಅವರು ಭೀತಿಗೊಂಡು ಓಡಿಹೋಗಿದ್ದಾರೆ. ನಂತರ ಗ್ರಾಮಸ್ಥರ ಜೊತೆಗೂಡಿ ಬೆಂಕಿ ಆರಿಸಲಾಯಿತು. ನಗರದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು.</p>.<p>ಘಟನೆಯಿಂದ ಕುಪಿತಗೊಂಡ ಮೋಹನಕೃಷ್ಣ ಅವರ ನೂರಾರು ಬೆಂಬಲಿಗರು ರಾತ್ರಿ ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ದುಷ್ಕರ್ಮಿಗಳಿಗೆ ಬುದ್ಧಿ ಕಲಿಸುವುದಾಗಿ ಎಚ್ಚರಿಕೆ ನೀಡಿದರು. ಅವರನ್ನು ಸಮಾಧಾನ ಮಾಡಿ ಕಳಿಸಲಾಯಿತು.</p>.<p>ರಾಮಸಾಗರ ಗ್ರಾಮ ಪಂಚಾಯಿತಿಯ ರಾಜಕೀಯ ವಿದ್ಯಾಮಾನಗಳಿಂದ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂಬ ಶಂಕೆ ಇದೆ. ಈ ಸಂಬಂಧವಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ, ಯಾರನ್ನು ನಿರ್ಧಿಷ್ಟವಾಗಿ ಹೆಸರಿಸಿಲ್ಲ ಎಂದು ಮುಖಂಡ ಮೋಹನಕೃಷ್ಣ ತಿಳಿಸಿದ್ದಾರೆ.</p>.<p>ಬೇತಮಂಗಲ ಸರ್ಕಲ್ ಇನ್ಸ್ಪೆಕ್ಟರ್ ರಂಗಶಾಮಯ್ಯ, ಸಬ್ ಇನ್ಸ್ಪೆಕ್ಟರ್ ಗುರುರಾಜ ಚಿಂತಕಾಲ, ಶ್ವಾನದಳ ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>