ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು: ಕಟ್ಟಡ ನಿರ್ಮಾಣವಾಗಿ 5 ತಿಂಗಳು ಪೂರ್ಣ; ಆರಂಭವಾಗದ ಇಂದಿರಾ ಕ್ಯಾಂಟೀನ್

Published : 21 ಅಕ್ಟೋಬರ್ 2024, 7:18 IST
Last Updated : 21 ಅಕ್ಟೋಬರ್ 2024, 7:18 IST
ಫಾಲೋ ಮಾಡಿ
Comments
ಕ್ಯಾಂಟೀನ್ ಆವರಣದ ನೆರಳಿನಲ್ಲಿ ಮಲಗಿರುವ ವ್ಯಕ್ತಿ
ಕ್ಯಾಂಟೀನ್ ಆವರಣದ ನೆರಳಿನಲ್ಲಿ ಮಲಗಿರುವ ವ್ಯಕ್ತಿ
ಕ್ಯಾಂಟೀನ್ ಆವರಣದ ಊಟ ಮಾಡುವ ಕಟ್ಟೆಗಳಲ್ಲಿ ಬೆಳೆದಿರುವ ಗಿಡಗಂಟಿಗಳು 
ಕ್ಯಾಂಟೀನ್ ಆವರಣದ ಊಟ ಮಾಡುವ ಕಟ್ಟೆಗಳಲ್ಲಿ ಬೆಳೆದಿರುವ ಗಿಡಗಂಟಿಗಳು 
ನಗರದಲ್ಲಿ ಇಂದಿರಾ ಕ್ಯಾಂಟೀನ್‌ಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಆದರೆ ಉದ್ಘಾಟನೆಯಾಗಿಲ್ಲ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಗಮನ ಸೆಳೆಯಲಾಗಿದೆ. ಶೀಘ್ರವೇ ಆರಂಭವಾಗುವ ನಿರೀಕ್ಷೆ ಇದೆ 
ಎಂ.ಸಿ.ನೀಲಕಂಠೇ ಗೌಡ ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಸಂಪೂರ್ಣವಾಗಿದೆ. ಆದರೆ ಕ್ಯಾಂಟೀನಲ್ಲಿ ಆಹಾರವನ್ನು ವಿತರಿಸಲು ರಾಜ್ಯ ಮಟ್ಟದಲ್ಲಿ ಟೆಂಡರ್ ನಡೆಯಬೇಕಿದೆ. ಹೀಗಾಗಿ ಕ್ಯಾಂಟೀನ್ ಕಾರ್ಯಾರಂಭ ಮಾಡಿಲ್ಲ
ವಿ.ಶ್ರೀಧರ್ ನಗರಸಭೆ ಪೌರಾಯುಕ್ತ
ಶೀಘ್ರ ಉದ್ಘಾಟನೆಯಾಗಲಿ
ಇಂದಿರಾ ಕ್ಯಾಂಟೀನ್ ನಿರ್ಮಿಸಲಾದ ಕಟ್ಟಡದಲ್ಲಿ ಸೂಕ್ತ ಕಾಂಪೌಂಡ್ ವ್ಯವಸ್ಥೆ ಇಲ್ಲದ ಕಾರಣ ಕೆಲವರು ಕ್ಯಾಂಟೀನ್ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಕೆಲವರು ಮಧ್ಯಾಹ್ನ ಮಲಗುವ ಸೋಮಾರಿ ಕಟ್ಟೆಯಾಗಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.  ಕೂಡಲೇ ಕ್ಯಾಂಟೀನ್ ಆರಂಭಿಸಿ ಜನರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸಬೇಕು. ಈ ಮೂಲಕ ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT