<p><strong>ಕೆಜಿಎಫ್</strong>: ಕೆಜಿಎಫ್ ನಗರ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಜಿ.ಗೋಪಾಲರೆಡ್ಡಿ ಅಧಿಕಾರ ಸ್ವೀಕಾರ ಸಮಾರಂಭ ಶುಕ್ರವಾರ ನಡೆಯಿತು.</p>.<p>ಈ ವೇಳೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಬಂಗಾರಪೇಟೆ ಮತ್ತು ಕೆಜಿಎಫ್ ನಗರವನ್ನು ಕಾರ್ಪೋರೇಷನ್ ಮಾಡುವ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಎರಡೂ ಕ್ಷೇತ್ರಗಳ ಶಾಸಕರು ಜಂಟಿಯಾಗಿ ಮಾಹಿತಿ ಬಿಡುಗಡೆ ಮಾಡಲಿದ್ದೇವೆ ಎಂದರು.</p>.<p>ಬೆಮಲ್ ಬಳಿ 292 ಎಕರೆ ಜಾಗದಲ್ಲಿ ಟೌನ್ಶಿಪ್ ಬರಲಿದೆ. ಜತೆಗೆ 600 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳು ಅಭಿವೃದ್ಧಿಯಾಗಲಿದೆ. ಈ ಹಿನ್ನಲೆಯಲ್ಲಿ ಟೌನ್ಶಿಪ್ ನಿರ್ಮಾಣ ಮತ್ತು ಅದರ ಉಸ್ತುವಾರಿ ಅಭಿವೃದ್ಧಿ ಪ್ರಾಧಿಕಾರದ ಮೇಲಿದೆ ಎಂದು ತಿಳಿಸಿದರು.</p>.<p>ಪ್ರಾಧಿಕಾರದ ಅಧ್ಯಕ್ಷತೆಗೆ ಬಂಗಾರಪೇಟೆಯ ಜಿ.ಗೋಪಾಲರೆಡ್ಡಿ ಮತ್ತು ಕೆಜಿಎಫ್ನ ಶ್ರೀನಿವಾಸ್ ಅವರ ಹೆಸರು ಚಾಲ್ತಿಯಲ್ಲಿತ್ತು. ಎರಡೂ ಕ್ಷೇತ್ರದ ಶಾಸಕರ ಒಮ್ಮತದಿಂದ ಅಧ್ಯಕ್ಷ ಸ್ಥಾನವನ್ನು ಮೊದಲ ಸಾಲಿನಲ್ಲಿ ಗೋಪಾಲರೆಡ್ಡಿ ಅವರಿಗೆ ಎರಡನೇ ಸಾಲಿನಲ್ಲಿ ಶ್ರೀನಿವಾಸ್ ಅವರಿಗೆ ನೀಡಲು ನಿರ್ಧಾರ ತೆಗೆದುಕೊಂಡು ಸಮಸ್ಯೆ ಇತ್ಯರ್ಥ ಪಡಿಸಲಾಯಿತು. ಎಲ್ಲಾ ವರ್ಗದ ಜನತೆಯ ವಿಶ್ವಾಸ ಗಳಿಸಿಕೊಂಡು ನೂತನ ಅಧ್ಯಕ್ಷರು ಕೆಲಸ ನಿರ್ವಹಿಸಬೇಕು ಎಂದರು.</p>.<p>ಪೊಟ್ಟೆಪಲ್ಲಿ ಗ್ರಾಮದ ಬಳಿ ನಿವೇಶನ ರಚನೆಗೆ ಜಾಗ ಸ್ವಾಧೀನ ಪಡಿಸಿಕೊಂಡು ಸುಮಾರು ವರ್ಷಗಳಾದರೂ, ಇದುವರೆವಿಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಕೂಡಲೇ ಬಡಾವಣೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬಂಗಾರಪೇಟೆ ಕ್ಷೇತ್ರದಲ್ಲಿ ಸಹ ಕೆಡಿಎಯಿಂದ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಬೇಕು. ಇದರಿಂದಾಗಿ ಬಡವರು, ಆರ್ಥಿಕವಾಗಿ ಸಬಲರಲ್ಲದವರು ಸ್ವಂತ ನಿವೇಶನ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ನಗರದ ಅಭಿವೃದ್ಧಿಗೆ ಸಾಲ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೋಲಾರಕ್ಕೆ ನೂರು ಕೋಟಿ ನೀಡಲಾಗಿದೆ. ಅದೇ ರೀತಿ ಕೆಜಿಎಫ್ನಲ್ಲಿ ಹೊಸದಾಗಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ₹25 ಕೋಟಿ ಸಾಲವಾಗಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಪಕ್ಷದಲ್ಲಿನ ಸೇವೆ ಗುರುತಿಸಿ ಅಧ್ಯಕ್ಷ ಸ್ಥಾನ ನೀಡಿದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನೂತನ ಅಧ್ಯಕ್ಷ ಗೋಪಾಲರೆಡ್ಡಿ ಧನ್ಯವಾದ ತಿಳಿಸಿ, ಎಲ್ಲರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿದರು.</p>.<p>ಪ್ರಾಧಿಕಾರದ ಆಯುಕ್ತ ಧರ್ಮೇಂದ್ರ, ಕೆಡಿಎ ಮಾಜಿ ಅಧ್ಯಕ್ಷ ಶಂಶುದ್ದೀನ್ ಬಾಬು, ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.</p><p><strong>ಕೆಜಿಎಫ್ ಕಾಂಗ್ರೆಸ್ ಮುಖಂಡರ ಗೈರು</strong> </p><p>ಪದಗ್ರಹಣ ಕಾರ್ಯಕ್ರಮಕ್ಕೆ ಕೆಜಿಎಫ್ ತಾಲ್ಲೂಕು ಕಾಂಗ್ರೆಸ್ ಮುಖಂಡರು ಗೈರಾಗಿದ್ದು ಅಧ್ಯಕ್ಷರ ಆಯ್ಕೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ತೋರಿಸಿಕೊಂಡರು. ಶಾಸಕಿ ರೂಪಕಲಾ ಕೂಡ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಸಮಾರಂಭ ತುರ್ತಾಗಿ ನಡೆದಿದ್ದರಿಂದ ಕೆಜಿಎಫ್ ಭಾಗದ ಕೆಲ ಮುಖಂಡರಿಗೆ ತಿಳಿಸಲು ಸಾಧ್ಯವಾಗಲಿಲ್ಲ. ಎರಡನೇ ಸಾಲಿನ ಅಧ್ಯಕ್ಷ ಶ್ರೀನಿವಾಸ್ ಅವರ ಮನೆಗೆ ತೆರಳಿ ಅವರನ್ನು ಆಹ್ವಾನಿಸಲಾಗಿತ್ತು ಆದರೂ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಕೆಜಿಎಫ್ ನಗರ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಜಿ.ಗೋಪಾಲರೆಡ್ಡಿ ಅಧಿಕಾರ ಸ್ವೀಕಾರ ಸಮಾರಂಭ ಶುಕ್ರವಾರ ನಡೆಯಿತು.</p>.<p>ಈ ವೇಳೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಬಂಗಾರಪೇಟೆ ಮತ್ತು ಕೆಜಿಎಫ್ ನಗರವನ್ನು ಕಾರ್ಪೋರೇಷನ್ ಮಾಡುವ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಎರಡೂ ಕ್ಷೇತ್ರಗಳ ಶಾಸಕರು ಜಂಟಿಯಾಗಿ ಮಾಹಿತಿ ಬಿಡುಗಡೆ ಮಾಡಲಿದ್ದೇವೆ ಎಂದರು.</p>.<p>ಬೆಮಲ್ ಬಳಿ 292 ಎಕರೆ ಜಾಗದಲ್ಲಿ ಟೌನ್ಶಿಪ್ ಬರಲಿದೆ. ಜತೆಗೆ 600 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳು ಅಭಿವೃದ್ಧಿಯಾಗಲಿದೆ. ಈ ಹಿನ್ನಲೆಯಲ್ಲಿ ಟೌನ್ಶಿಪ್ ನಿರ್ಮಾಣ ಮತ್ತು ಅದರ ಉಸ್ತುವಾರಿ ಅಭಿವೃದ್ಧಿ ಪ್ರಾಧಿಕಾರದ ಮೇಲಿದೆ ಎಂದು ತಿಳಿಸಿದರು.</p>.<p>ಪ್ರಾಧಿಕಾರದ ಅಧ್ಯಕ್ಷತೆಗೆ ಬಂಗಾರಪೇಟೆಯ ಜಿ.ಗೋಪಾಲರೆಡ್ಡಿ ಮತ್ತು ಕೆಜಿಎಫ್ನ ಶ್ರೀನಿವಾಸ್ ಅವರ ಹೆಸರು ಚಾಲ್ತಿಯಲ್ಲಿತ್ತು. ಎರಡೂ ಕ್ಷೇತ್ರದ ಶಾಸಕರ ಒಮ್ಮತದಿಂದ ಅಧ್ಯಕ್ಷ ಸ್ಥಾನವನ್ನು ಮೊದಲ ಸಾಲಿನಲ್ಲಿ ಗೋಪಾಲರೆಡ್ಡಿ ಅವರಿಗೆ ಎರಡನೇ ಸಾಲಿನಲ್ಲಿ ಶ್ರೀನಿವಾಸ್ ಅವರಿಗೆ ನೀಡಲು ನಿರ್ಧಾರ ತೆಗೆದುಕೊಂಡು ಸಮಸ್ಯೆ ಇತ್ಯರ್ಥ ಪಡಿಸಲಾಯಿತು. ಎಲ್ಲಾ ವರ್ಗದ ಜನತೆಯ ವಿಶ್ವಾಸ ಗಳಿಸಿಕೊಂಡು ನೂತನ ಅಧ್ಯಕ್ಷರು ಕೆಲಸ ನಿರ್ವಹಿಸಬೇಕು ಎಂದರು.</p>.<p>ಪೊಟ್ಟೆಪಲ್ಲಿ ಗ್ರಾಮದ ಬಳಿ ನಿವೇಶನ ರಚನೆಗೆ ಜಾಗ ಸ್ವಾಧೀನ ಪಡಿಸಿಕೊಂಡು ಸುಮಾರು ವರ್ಷಗಳಾದರೂ, ಇದುವರೆವಿಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಕೂಡಲೇ ಬಡಾವಣೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬಂಗಾರಪೇಟೆ ಕ್ಷೇತ್ರದಲ್ಲಿ ಸಹ ಕೆಡಿಎಯಿಂದ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಬೇಕು. ಇದರಿಂದಾಗಿ ಬಡವರು, ಆರ್ಥಿಕವಾಗಿ ಸಬಲರಲ್ಲದವರು ಸ್ವಂತ ನಿವೇಶನ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ನಗರದ ಅಭಿವೃದ್ಧಿಗೆ ಸಾಲ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೋಲಾರಕ್ಕೆ ನೂರು ಕೋಟಿ ನೀಡಲಾಗಿದೆ. ಅದೇ ರೀತಿ ಕೆಜಿಎಫ್ನಲ್ಲಿ ಹೊಸದಾಗಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ₹25 ಕೋಟಿ ಸಾಲವಾಗಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಪಕ್ಷದಲ್ಲಿನ ಸೇವೆ ಗುರುತಿಸಿ ಅಧ್ಯಕ್ಷ ಸ್ಥಾನ ನೀಡಿದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನೂತನ ಅಧ್ಯಕ್ಷ ಗೋಪಾಲರೆಡ್ಡಿ ಧನ್ಯವಾದ ತಿಳಿಸಿ, ಎಲ್ಲರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿದರು.</p>.<p>ಪ್ರಾಧಿಕಾರದ ಆಯುಕ್ತ ಧರ್ಮೇಂದ್ರ, ಕೆಡಿಎ ಮಾಜಿ ಅಧ್ಯಕ್ಷ ಶಂಶುದ್ದೀನ್ ಬಾಬು, ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.</p><p><strong>ಕೆಜಿಎಫ್ ಕಾಂಗ್ರೆಸ್ ಮುಖಂಡರ ಗೈರು</strong> </p><p>ಪದಗ್ರಹಣ ಕಾರ್ಯಕ್ರಮಕ್ಕೆ ಕೆಜಿಎಫ್ ತಾಲ್ಲೂಕು ಕಾಂಗ್ರೆಸ್ ಮುಖಂಡರು ಗೈರಾಗಿದ್ದು ಅಧ್ಯಕ್ಷರ ಆಯ್ಕೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ತೋರಿಸಿಕೊಂಡರು. ಶಾಸಕಿ ರೂಪಕಲಾ ಕೂಡ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಸಮಾರಂಭ ತುರ್ತಾಗಿ ನಡೆದಿದ್ದರಿಂದ ಕೆಜಿಎಫ್ ಭಾಗದ ಕೆಲ ಮುಖಂಡರಿಗೆ ತಿಳಿಸಲು ಸಾಧ್ಯವಾಗಲಿಲ್ಲ. ಎರಡನೇ ಸಾಲಿನ ಅಧ್ಯಕ್ಷ ಶ್ರೀನಿವಾಸ್ ಅವರ ಮನೆಗೆ ತೆರಳಿ ಅವರನ್ನು ಆಹ್ವಾನಿಸಲಾಗಿತ್ತು ಆದರೂ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>