<p><strong>ಕೋಲಾರ:</strong> ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಗಾಂಡ್ಲಹಳ್ಳಿಯ ಎಸ್ಸಿ ಕಾಲೊನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಿರುವ ಮನೆಯನ್ನು ತೆರವುಗೊಳಿಸಿ ಓಡಾಡಲು ಅನುವು ಮಾಡಿ ಕೊಡಬೇಕೆಂದು ಮಂಗಳವಾರ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಮನವಿ ಮಾಡಿದರು.</p>.<p>‘ಶ್ರೀನಿವಾಸಪುರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ. ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ತೆರವು ಮಾಡದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಜಿಲ್ಲಾಧ್ಯಕ್ಷ ಎಂ.ನಾಗೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಮುನಿರಾಜು, ಕೋಲಾರ ತಾಲ್ಲೂಕು ಅಧ್ಯಕ್ಷ ಡಿ.ಮಂಜುನಾಥ್, ಉಪಾಧ್ಯಕ್ಷ ಎಸ್.ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ವಿ.ಶ್ರೀನಾಥ್, ಉಪಾಧ್ಯಕ್ಷ ಎಚ್.ಎಂ.ಅರುಣ್ ಹಾಗೂ ಗಾಂಧಿನಗರ ಮಾಹಿತಿ ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಗಾಂಡ್ಲಹಳ್ಳಿಯ ಎಸ್ಸಿ ಕಾಲೊನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಿರುವ ಮನೆಯನ್ನು ತೆರವುಗೊಳಿಸಿ ಓಡಾಡಲು ಅನುವು ಮಾಡಿ ಕೊಡಬೇಕೆಂದು ಮಂಗಳವಾರ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಮನವಿ ಮಾಡಿದರು.</p>.<p>‘ಶ್ರೀನಿವಾಸಪುರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ. ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ತೆರವು ಮಾಡದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಜಿಲ್ಲಾಧ್ಯಕ್ಷ ಎಂ.ನಾಗೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಮುನಿರಾಜು, ಕೋಲಾರ ತಾಲ್ಲೂಕು ಅಧ್ಯಕ್ಷ ಡಿ.ಮಂಜುನಾಥ್, ಉಪಾಧ್ಯಕ್ಷ ಎಸ್.ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ವಿ.ಶ್ರೀನಾಥ್, ಉಪಾಧ್ಯಕ್ಷ ಎಚ್.ಎಂ.ಅರುಣ್ ಹಾಗೂ ಗಾಂಧಿನಗರ ಮಾಹಿತಿ ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>