<p>ಕೋಲಾರ: ‘ಲೋಕಸಭೆ ಚುನಾವಣೆ ಅಧಿಸೂಚನೆ ಘೋಷಣೆಯಾದ ನಂತರ ಜಿಲ್ಲೆಯಲ್ಲಿ 23 ಅಬಕಾರಿ ಪ್ರಕರಣಗಳು ದಾಖಲಾಗಿವೆ. ಸುಮಾರು ₹ 50 ಲಕ್ಷ ಮೌಲ್ಯದ ಮದ್ಯ, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 2 ಲಾರಿ ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅಬಕಾರಿ ಇಲಾಖೆಯ ಅಧಿಕಾರಿ ಬಸವರಾಜ್ ತಿಳಿಸಿದರು.</p>.<p>‘17.073 ಲೀಟರ್ ಬಿಯರ್, 107 ಕೇಸ್ ಮದ್ಯ ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಗಡಿ ಹಾಗೂ ವಿವಿಧ ಭಾಗಗಳಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.</p>.<p>‘ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿದಲ್ಲಿ ಪ್ರಕರಣ ದಾಖಲು ಮಾಡಿ ಬೀಗ ಹಾಕಲಾಗುವುದು. ವೈನ್ ಶಾಪ್ಗಳು ಚುನಾವಣೆಯ ಪ್ರಯುಕ್ತ ಟೋಕನ್ ಹಂಚುವುದು ಮುಂತಾದ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಪರವನಾಗಿ ರದ್ದು ಗೊಳಿಸಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ’ ಎಂದರು,</p>.<p>ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ 120 ರಷ್ಟು ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು. ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ತಿಳಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ನಗರದ ಬಸ್ ನಿಲ್ದಾಣ ಸುತ್ತಮುತ್ತ ವೈನ್ ಶಾಪ್ಗಳಲ್ಲಿ ನಿಗದಿತ ಸಮಯವನ್ನು ಉಲ್ಲಂಘಿಸಿ ಬೆಳ್ಳಂಬೆಳಿಗ್ಗೆ ಮದ್ಯ ಮಾರಾಟ ಮಾಡುತ್ತಿರುವ ದೂರುಗಳಿಗೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಲಾಗುವುದು ಎಂದರು.</p>.<p>ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಮಾರ್ಚ್ 25 ರಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ಲೋಕಸಭೆ ಚುನಾವಣೆ ಅಧಿಸೂಚನೆ ಘೋಷಣೆಯಾದ ನಂತರ ಜಿಲ್ಲೆಯಲ್ಲಿ 23 ಅಬಕಾರಿ ಪ್ರಕರಣಗಳು ದಾಖಲಾಗಿವೆ. ಸುಮಾರು ₹ 50 ಲಕ್ಷ ಮೌಲ್ಯದ ಮದ್ಯ, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 2 ಲಾರಿ ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅಬಕಾರಿ ಇಲಾಖೆಯ ಅಧಿಕಾರಿ ಬಸವರಾಜ್ ತಿಳಿಸಿದರು.</p>.<p>‘17.073 ಲೀಟರ್ ಬಿಯರ್, 107 ಕೇಸ್ ಮದ್ಯ ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಗಡಿ ಹಾಗೂ ವಿವಿಧ ಭಾಗಗಳಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.</p>.<p>‘ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿದಲ್ಲಿ ಪ್ರಕರಣ ದಾಖಲು ಮಾಡಿ ಬೀಗ ಹಾಕಲಾಗುವುದು. ವೈನ್ ಶಾಪ್ಗಳು ಚುನಾವಣೆಯ ಪ್ರಯುಕ್ತ ಟೋಕನ್ ಹಂಚುವುದು ಮುಂತಾದ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಪರವನಾಗಿ ರದ್ದು ಗೊಳಿಸಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ’ ಎಂದರು,</p>.<p>ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ 120 ರಷ್ಟು ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು. ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ತಿಳಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ನಗರದ ಬಸ್ ನಿಲ್ದಾಣ ಸುತ್ತಮುತ್ತ ವೈನ್ ಶಾಪ್ಗಳಲ್ಲಿ ನಿಗದಿತ ಸಮಯವನ್ನು ಉಲ್ಲಂಘಿಸಿ ಬೆಳ್ಳಂಬೆಳಿಗ್ಗೆ ಮದ್ಯ ಮಾರಾಟ ಮಾಡುತ್ತಿರುವ ದೂರುಗಳಿಗೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಲಾಗುವುದು ಎಂದರು.</p>.<p>ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಮಾರ್ಚ್ 25 ರಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>