ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಪಕ್ಷೀಯರ ವಿರುದ್ಧ ಹರಿಹಾಯ್ದ ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌

Published 2 ಅಕ್ಟೋಬರ್ 2023, 14:31 IST
Last Updated 2 ಅಕ್ಟೋಬರ್ 2023, 14:31 IST
ಅಕ್ಷರ ಗಾತ್ರ

ಕೋಲಾರ: ‘ತಲೆಕೆಟ್ಟ ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ಸುಮ್ಮನೇ ತೀಟೆ ಮಾಡುವುದು, ಪಿನ್‌ ಚುಚ್ಚುವ ಕೆಲಸವೇ ಹೆಚ್ಚಾಗಿದೆ. ಪಕ್ಷದಲ್ಲಿ ಅಂಥವರನ್ನು ಸ್ವಲ್ಪ ದೂರ ಇಡಬೇಕು’ ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌, ಸ್ವಪಕ್ಷದ ಶಾಸಕರ ವಿರುದ್ಧವೇ ಹರಿಹಾಯ್ದಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ಕೆಲವರು ಜಾತಿ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ತಮ್ಮ ಜಾತಿಯವರಿಗೆ ಮುಖ್ಯಮಂತ್ರಿ ಹುದ್ದೆ ಬೇಕು ಎನ್ನುತ್ತಿದ್ದಾರೆ. ಆ ಜಾತಿಯವರು ಅದೇ ಜಾತಿಯ ಒಬ್ಬ ಡಾಕ್ಟರ್‌, ನರ್ಸ್‌, ಪೊಲೀಸ್ ಅಧಿಕಾರಿ, ಮತ್ತೊಂದು ಜಾತಿಯವರು ತಮ್ಮದೇ ಜಾತಿಯ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ’ ಎಂದು ಹೇಳಿದರು.

‘ನಾನು ನಿನ್ನೆ ಮುಖ್ಯಮಂತ್ರಿ ಬಳಿ ಹೋಗಿದ್ದೆ. ಬೆಂಗಳೂರಿನಲ್ಲಿ ಅಡ್ಡಾಡಬೇಡಿ, ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಿ ಎಂದು ಸೂಚಿಸಿದರು. ಅವರು ಸರಿಯಾಗಿಯೇ ಹೇಳಿದ್ದಾರೆ. ಅದನ್ನು ಬಿಟ್ಟು ಮಂತ್ರಿ ಬೇಕು, ಮುಖ್ಯಮಂತ್ರಿ ಹುದ್ದೆ ಬೇಕು ಎಂದು ಕೇಳುತ್ತಿದ್ದರೆ ಪ್ರಯೋಜನವಿಲ್ಲ. ನನಗೂ ಹಲವಾರು ಆಸೆಗಳಿವೆ. ಗೊತ್ತಿದ್ದರೆ ತೆಂಗಿನಮರ ಹತ್ತಬೇಕು. ಗೊತ್ತಿಲ್ಲದೇ ಹತ್ತಲು ಹೋದರೆ ಬಿದ್ದು ಕೈಕಾಲು ಮುರಿದುಕೊಳ್ಳುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT