<p><strong>ಕೋಲಾರ</strong>: ‘ಮೈಸೂರು ಮುಡಾ ಪ್ರಕರಣದಲ್ಲಿ ಯಾರೂ ಸಾಚಾಗಳು ಇಲ್ಲ. ಹಿಂದಿನಿಂದಲೂ ಹಗರಣ ನಡೆದುಕೊಂಡು ಬಂದಿದೆ. ಹಾಗಂತ ನಾವೂ ಹಗರಣ ಮಾಡಬೇಕು ಎಂಬರ್ಥವಲ್ಲ’ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಡಾ ಹಗರಣ ತನಿಖೆ ಹಂತದಲ್ಲಿದೆ. ನಮ್ಮ ತನಿಖಾ ಸಂಸ್ಥೆಗಳನ್ನು ಬಿಟ್ಟು ಸಿಬಿಐಗೆ ಏಕೆ ವಹಿಸಬೇಕು? ನಮ್ಮ ತನಿಖಾ ಸಂಸ್ಥೆಗಳಿಗೆ ತನಿಖಾ ಮಾಡುವ ಸಾಮರ್ಥ್ಯ ಇಲ್ಲವೇ? ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಕುಂಠಿತಗೊಳಿಸಬೇಕು, ಹೆಸರು ಕೆಡಿಸಬೇಕು ಎಂಬುದು ಬಿಜೆಪಿ ಪಾದಯಾತ್ರೆಯ ಉದ್ದೇಶವಾಗಿದೆ’ ಎಂದರು.</p>.<p>‘ಮುಡಾದಲ್ಲಿ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಸೇರಿದಂತೆ ಯಾರು ಯಾರು ನಿವೇಶನ ಪಡೆದಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾರೇ ಹಗರಣ ಮಾಡಿದರೂ ತಪ್ಪು. ವಾಸ್ತವಾಂಶ ಏನೆಂಬುದು ಶೀಘ್ರದಲ್ಲೇ ತಿಳಿಯುತ್ತದೆ. ತನಿಖಾ ವರದಿ ಆಧಾರದ ಮೇಲೆ ಕಾನೂನು ಕ್ರಮ ಆಗುತ್ತದೆ’ ಎಂದು ತಿಳಿಸಿದರು.</p>.<p>‘ಪಾದಯಾತ್ರೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕು ಇದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಉತ್ತರ ಕೊಡಲು ಹೋದಾಗ ವಿರೋಧ ಪಕ್ಷದವರು ಗಲಾಟೆ ಮಾಡಿದರು. ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವಾಗ ಸದನದಲ್ಲಿ ಚರ್ಚೆ ಮಾಡುವುದು ಕಾನೂನು ಪ್ರಕಾರ ಸರಿ ಅಲ್ಲ. ಹೀಗಾಗಿ, ವಿಧಾನಸಭಾ ಸಭಾಧ್ಯಕ್ಷರು ಅವಕಾಶ ನಿರಾಕರಿಸಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ಅದರ ಬಗ್ಗೆ ಮಾತನಾಡುವುದು ತಪ್ಪಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಡಿಸಿಸಿ ಬ್ಯಾಂಕ್ಗೆ ಚುನಾವಣೆ ಆಗಬೇಕು. ಆಗಬಾರದೆಂದು ಯಾರು ಒತ್ತಡ ಹಾಕುತ್ತಿದ್ದರೋ ನನಗೂ ತಿಳಿದಿಲ್ಲ. ನ್ಯಾಯಾಲಯದ ಆದೇಶದಂತೆ ಚುನಾವಣೆ ನಡೆಯುತ್ತದೆ. ಕೆಲವು ಅಡೆತಡೆಗಳು ಇರಬಹುದು. ಎಲ್ಲವೂ ಸರಿಹೋಗುತ್ತದೆ. ಕೋಲಾರ, ಚಿಕ್ಕಬಳ್ಳಾಪುರವೆಂದು ಕೋಚಿಮುಲ್ ವಿಂಗಡಣೆ ಮಾಡುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಕೋಚಿಮುಲ್ ಚುನಾವಣೆಯೂ ಶೀಘ್ರದಲ್ಲಿ ನಡೆಯುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಮೈಸೂರು ಮುಡಾ ಪ್ರಕರಣದಲ್ಲಿ ಯಾರೂ ಸಾಚಾಗಳು ಇಲ್ಲ. ಹಿಂದಿನಿಂದಲೂ ಹಗರಣ ನಡೆದುಕೊಂಡು ಬಂದಿದೆ. ಹಾಗಂತ ನಾವೂ ಹಗರಣ ಮಾಡಬೇಕು ಎಂಬರ್ಥವಲ್ಲ’ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಡಾ ಹಗರಣ ತನಿಖೆ ಹಂತದಲ್ಲಿದೆ. ನಮ್ಮ ತನಿಖಾ ಸಂಸ್ಥೆಗಳನ್ನು ಬಿಟ್ಟು ಸಿಬಿಐಗೆ ಏಕೆ ವಹಿಸಬೇಕು? ನಮ್ಮ ತನಿಖಾ ಸಂಸ್ಥೆಗಳಿಗೆ ತನಿಖಾ ಮಾಡುವ ಸಾಮರ್ಥ್ಯ ಇಲ್ಲವೇ? ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಕುಂಠಿತಗೊಳಿಸಬೇಕು, ಹೆಸರು ಕೆಡಿಸಬೇಕು ಎಂಬುದು ಬಿಜೆಪಿ ಪಾದಯಾತ್ರೆಯ ಉದ್ದೇಶವಾಗಿದೆ’ ಎಂದರು.</p>.<p>‘ಮುಡಾದಲ್ಲಿ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಸೇರಿದಂತೆ ಯಾರು ಯಾರು ನಿವೇಶನ ಪಡೆದಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾರೇ ಹಗರಣ ಮಾಡಿದರೂ ತಪ್ಪು. ವಾಸ್ತವಾಂಶ ಏನೆಂಬುದು ಶೀಘ್ರದಲ್ಲೇ ತಿಳಿಯುತ್ತದೆ. ತನಿಖಾ ವರದಿ ಆಧಾರದ ಮೇಲೆ ಕಾನೂನು ಕ್ರಮ ಆಗುತ್ತದೆ’ ಎಂದು ತಿಳಿಸಿದರು.</p>.<p>‘ಪಾದಯಾತ್ರೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕು ಇದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಉತ್ತರ ಕೊಡಲು ಹೋದಾಗ ವಿರೋಧ ಪಕ್ಷದವರು ಗಲಾಟೆ ಮಾಡಿದರು. ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವಾಗ ಸದನದಲ್ಲಿ ಚರ್ಚೆ ಮಾಡುವುದು ಕಾನೂನು ಪ್ರಕಾರ ಸರಿ ಅಲ್ಲ. ಹೀಗಾಗಿ, ವಿಧಾನಸಭಾ ಸಭಾಧ್ಯಕ್ಷರು ಅವಕಾಶ ನಿರಾಕರಿಸಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ಅದರ ಬಗ್ಗೆ ಮಾತನಾಡುವುದು ತಪ್ಪಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಡಿಸಿಸಿ ಬ್ಯಾಂಕ್ಗೆ ಚುನಾವಣೆ ಆಗಬೇಕು. ಆಗಬಾರದೆಂದು ಯಾರು ಒತ್ತಡ ಹಾಕುತ್ತಿದ್ದರೋ ನನಗೂ ತಿಳಿದಿಲ್ಲ. ನ್ಯಾಯಾಲಯದ ಆದೇಶದಂತೆ ಚುನಾವಣೆ ನಡೆಯುತ್ತದೆ. ಕೆಲವು ಅಡೆತಡೆಗಳು ಇರಬಹುದು. ಎಲ್ಲವೂ ಸರಿಹೋಗುತ್ತದೆ. ಕೋಲಾರ, ಚಿಕ್ಕಬಳ್ಳಾಪುರವೆಂದು ಕೋಚಿಮುಲ್ ವಿಂಗಡಣೆ ಮಾಡುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಕೋಚಿಮುಲ್ ಚುನಾವಣೆಯೂ ಶೀಘ್ರದಲ್ಲಿ ನಡೆಯುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>