ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ: ಕೋಲಾರ ಕ್ಷೇತ್ರದ ಟಿಕೆಟ್‌ಗೆ ಹೆಚ್ಚಿದ ಪೈಪೋಟಿ

Published : 29 ಜನವರಿ 2024, 7:32 IST
Last Updated : 29 ಜನವರಿ 2024, 7:32 IST
ಫಾಲೋ ಮಾಡಿ
Comments
9ನೇ ಬಾರಿ ಸ್ಪರ್ಧಿಸುತ್ತಾರಾ ಮುನಿಯಪ್ಪ? ಸರ್ಕಾರಿ ಉದ್ಯೋಗಿಯಾಗಿರುವ ಚಿಕ್ಕಪೆದ್ದಣ್ಣ ಜಿಲ್ಲೆಯ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯಕ್ಕೆ ಇನ್ನೂ ಸಿಗದ ಮುಕ್ತಿ
‘ಟಿಕೆಟ್‌ ಕೋರಿ 13 ಅರ್ಜಿ’
ಕೋಲಾರ ಲೋಕಸಭೆ ಕ್ಷೇತ್ರದ‌ ಅಭ್ಯರ್ಥಿ ಆಯ್ಕೆ ಸಂಬಂಧ ಎಐಸಿಸಿ ಕೆಪಿಸಿಸಿ ಅಭಿಪ್ರಾಯ ಸಂಗ್ರಹಿಸುತ್ತಿವೆ. ಈಗಾಗಲೇ 13 ಮಂದಿ ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೆ.ಎಚ್‌.ಮುನಿಯಪ್ಪ ಚಿಕ್ಕಪೆದ್ದಣ್ಣ ಮದನ್‌ ಪಟೇಲ್‌ ಡಾ.ಮುದ್ದು ಗಂಗಾಧರ್‌ ಸೇರಿದಂತೆ ಹಲವರು ಟಿಕೆಟ್‌ ಆಕಾಂಕ್ಷಿಗಳು ಇದ್ದಾರೆ. ಹೈಕಮಾಂಡ್‌ ಸೂಚಿಸುವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಗೆಲ್ಲಿಸಿಕೊಡುತ್ತೇವೆ ಸಿ.ಲಕ್ಷ್ಮಿನಾರಾಯಣ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೋಲಾರ
ಟಿಕೆಟ್‌ ಕೈತಪ್ಪಿಸಿಕೊಂಡಿದ್ದವರು ಆಕಾಂಕ್ಷಿ!
2023ರ ವಿಧಾನಸಭೆ ಚುನಾವಣೆಯಲ್ಲಿ ಕಡೆಯ ಕ್ಷಣದಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಿಕೊಂಡಿದ್ದ ಡಾ.ಬಿ.ಸಿ.ಮುದ್ದು ಗಂಗಾಧರ್‌ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ಟಿ.ಚನ್ನಯ್ಯರ ಮೊಮ್ಮಗ. ‘23 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದು ಟಿಕೆಟ್‌ ಆಕಾಂಕ್ಷಿ ಆಗಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಮುಳುಬಾಗಿಲು ಕ್ಷೇತ್ರದ ‘ಬಿ’ ಫಾರಂ ನನಗೇ ಸಿಕ್ಕಿತ್ತು. ಕೊನೆ ಗಳಿಗೆಯಲ್ಲಿ ಹೈಕಮಾಂಡ್‌ ಹಾಗೂ ಡಿ.ಕೆ.ಶಿವಕುಮಾರ್‌ ಮನವಿ ಮೇರೆಗೆ ಹಿಂದೆ ಸರಿದೆ. ಲೋಕಸಭೆ ಟಿಕೆಟ್‌ನ ಭರವಸೆ ನೀಡಿದ್ದಾರೆ’ ಎಂದು ಮುದ್ದು ಗಂಗಾಧರ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT