<p><strong>ಕೋಲಾರ</strong>: ‘ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ತಪ್ಪು ಮಾಡಿದ್ದಾನೆಯೋ ಇಲ್ಲವೋ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ. ರಾಜಕಾರಣದಲ್ಲಿದ್ದ ಮಾತ್ರಕ್ಕೆ ಅಪ್ಪ ಹೇಗೆ ಕೆಟ್ಟವರು ಆಗುತ್ತಾರೆ? ತನಿಖೆ ನಡೆದು ತೀರ್ಪು ಹೊರಬೀಳಲಿ. ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ’ ಎಂದು ಸಚಿವ ಮುನಿರತ್ನ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೈಲಿಗೆ ಹೋಗಿ ಏನೋ ಗೆದ್ದವರಂತೆ ವಿಮಾನ ನಿಲ್ದಾಣದಿಂದ ಮೆರವಣಿಗೆ ಬಂದವರು ಈಗ ಹೇಗಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಮಾಡಾಳ್ ಪ್ರಕರಣ ತನಿಖೆ ಹಂತದಲ್ಲಿದ್ದು, ನಾವು ಹೇಗೆ ಪ್ರತಿಕ್ರಿಯಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಿಂದ ಬಿಜೆಪಿಗೆ ಹಿನ್ನಡೆ ಆಗಲಿದೆಯೇ ಎಂಬುದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಂಸದ ಎಸ್.ಮುನಿಸ್ವಾಮಿ ನಿಂದಿಸಿದ್ದರ ಕುರಿತು, ‘ನನಗೆ ಈ ವಿಚಾರವೇ ಗೊತ್ತಿಲ್ಲ. ವಿಷಯ ತಿಳಿದುಕೊಳ್ಳುತ್ತೇನೆ’ ಎಂದರು.</p>.<p>ಸಚಿವರಾದ ನಾರಾಯಣಗೌಡ, ಸೋಮಣ್ಣ ಪಕ್ಷ ತೊರೆಯುವ ವಿಚಾರ ಕುರಿತು, ‘ಮಾಧ್ಯಮದವರು ಈ ವಿಚಾರವಾಗಿ ಮೂರು ದಿನ ಸುದ್ದಿ ಪ್ರಕಟಿಸುವುದನ್ನು ನಿಲ್ಲಿಸಿದರೆ ಅವರು ಎಲ್ಲೂ ಹೋಗುವುದಿಲ್ಲ. ಸೋಮಣ್ಣ ಸ್ವಂತ ಶಕ್ತಿ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ’ ಎಂದು ಹೇಳಿದರು.</p>.<p>‘ಚುನಾವಣಾ ಪ್ರಚಾರ ಸಮಿತಿಯಲ್ಲಿ ನನಗೂ ಸ್ಥಾನ ನೀಡಿಲ್ಲ. ನನ್ನ ಜೊತೆಯಲ್ಲಿ ಬಿಜೆಪಿ ಸೇರಿದ ಕೆಲವರಿಗೆ ಅವಕಾಶ ಸಿಕ್ಕಿದೆ. ಆದರೆ, ಚುನಾವಣೆಯೇ ಅಂತಿಮವಲ್ಲ; ಮುಂದಿನ ದಿನಗಳಲ್ಲಿ ಸ್ಥಾನಮಾನ ಸಿಗಲಿದ್ದು, ಪಕ್ಷ ಯಾರನ್ನೂ ಕೈಬಿಡಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ತಪ್ಪು ಮಾಡಿದ್ದಾನೆಯೋ ಇಲ್ಲವೋ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ. ರಾಜಕಾರಣದಲ್ಲಿದ್ದ ಮಾತ್ರಕ್ಕೆ ಅಪ್ಪ ಹೇಗೆ ಕೆಟ್ಟವರು ಆಗುತ್ತಾರೆ? ತನಿಖೆ ನಡೆದು ತೀರ್ಪು ಹೊರಬೀಳಲಿ. ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ’ ಎಂದು ಸಚಿವ ಮುನಿರತ್ನ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೈಲಿಗೆ ಹೋಗಿ ಏನೋ ಗೆದ್ದವರಂತೆ ವಿಮಾನ ನಿಲ್ದಾಣದಿಂದ ಮೆರವಣಿಗೆ ಬಂದವರು ಈಗ ಹೇಗಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಮಾಡಾಳ್ ಪ್ರಕರಣ ತನಿಖೆ ಹಂತದಲ್ಲಿದ್ದು, ನಾವು ಹೇಗೆ ಪ್ರತಿಕ್ರಿಯಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಿಂದ ಬಿಜೆಪಿಗೆ ಹಿನ್ನಡೆ ಆಗಲಿದೆಯೇ ಎಂಬುದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಂಸದ ಎಸ್.ಮುನಿಸ್ವಾಮಿ ನಿಂದಿಸಿದ್ದರ ಕುರಿತು, ‘ನನಗೆ ಈ ವಿಚಾರವೇ ಗೊತ್ತಿಲ್ಲ. ವಿಷಯ ತಿಳಿದುಕೊಳ್ಳುತ್ತೇನೆ’ ಎಂದರು.</p>.<p>ಸಚಿವರಾದ ನಾರಾಯಣಗೌಡ, ಸೋಮಣ್ಣ ಪಕ್ಷ ತೊರೆಯುವ ವಿಚಾರ ಕುರಿತು, ‘ಮಾಧ್ಯಮದವರು ಈ ವಿಚಾರವಾಗಿ ಮೂರು ದಿನ ಸುದ್ದಿ ಪ್ರಕಟಿಸುವುದನ್ನು ನಿಲ್ಲಿಸಿದರೆ ಅವರು ಎಲ್ಲೂ ಹೋಗುವುದಿಲ್ಲ. ಸೋಮಣ್ಣ ಸ್ವಂತ ಶಕ್ತಿ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ’ ಎಂದು ಹೇಳಿದರು.</p>.<p>‘ಚುನಾವಣಾ ಪ್ರಚಾರ ಸಮಿತಿಯಲ್ಲಿ ನನಗೂ ಸ್ಥಾನ ನೀಡಿಲ್ಲ. ನನ್ನ ಜೊತೆಯಲ್ಲಿ ಬಿಜೆಪಿ ಸೇರಿದ ಕೆಲವರಿಗೆ ಅವಕಾಶ ಸಿಕ್ಕಿದೆ. ಆದರೆ, ಚುನಾವಣೆಯೇ ಅಂತಿಮವಲ್ಲ; ಮುಂದಿನ ದಿನಗಳಲ್ಲಿ ಸ್ಥಾನಮಾನ ಸಿಗಲಿದ್ದು, ಪಕ್ಷ ಯಾರನ್ನೂ ಕೈಬಿಡಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>