<p><strong>ಕೋಲಾರ:</strong> ಸಾಹಿತಿ, ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಪರ್ಯಾಯ ರಾಜಕಾರಣಕ್ಕಾಗಿ ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುವ ಚಿಂತನೆಗೆ ಭಾನುವಾರ ಚಾಲನೆ ದೊರೆತಿದೆ.</p>.<p>ಈ ಉದ್ದೇಶಕ್ಕಾಗಿ ಬುಡ್ಡಿ ದೀಪ ಆಶ್ರಯದಲ್ಲಿ ಭಾನುವಾರ ನಗರದ ನಚಿಕೇತ ನಿಲಯ ಆವರಣದ ಬುದ್ಧ ಮಂದಿರದಲ್ಲಿ ‘ಪ್ರತಿರೋಧದ ದನಿಗಳು’ ಅಡಿ ಪೂರ್ವಭಾವಿ ಸಭೆ ನಡೆಯಿತು.</p>.<p>ಸಭೆಯಲ್ಲಿ ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಚಿಕ್ಕಬಳ್ಳಾಪುರದಿಂದ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ತಾತ್ಕಾಲಿಕವಾಗಿ ಸಮಿತಿಯೊಂದನ್ನು ರಚಿಸಲಾಯಿತು.</p>.<p>ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಮೀಸಲಿಟ್ಟಿರುವ ವಿಶೇಷ ಘಟಕದ ಹಣವನ್ನು ಸರ್ಕಾರ ವಿವಿಧ ಗ್ಯಾರಂಟಿ ಯೋಜನೆಗಳಿಗೆ ಪಲ್ಲಟಗೊಳಿಸಿರುವುದನ್ನು ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ಖಂಡಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ‘ಎಲ್ಲಾ ರಾಜಕೀಯ ಪಕ್ಷಗಳು ಈ ನೆಲದ ನೋವು ಮರೆತಿರುವ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಪಕ್ಷ ಹಾಗೂ ಪರ್ಯಾಯ ರಾಜಕಾರಣದ ಅಗತ್ಯವಿದೆ. ಈ ಸಂಬಂಧ ದೊಟ್ಟಮಟ್ಟದಲ್ಲಿ ಚರ್ಚೆ, ಸಂವಾದ, ಜಾಗೃತಿ ನಡೆಯಬೇಕಿದೆ’ ಎಂದು ಪ್ರತಿಪಾದಿಸಿದರು.</p>.<p>‘ಹಲವಾರು ವರ್ಷಗಳಿಂದ ಪರ್ಯಾಯ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವರೆಗೆ ನಮಗೆ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಾಗಿಲ್ಲ. ಆದರೆ, ಸಮುದಾಯದಲ್ಲಿ ರಾಜಕೀಯ ಪ್ರಜ್ಞೆ ಜಾಗೃತವಾಗಿದೆ. ಅದಕ್ಕೆ ಸಾಣೆ ಹಿಡಿಯಬೇಕು. ಈ ಮೂಲಕ ಪರ್ಯಾಯ ರಾಜಕೀಯ ಮಾರ್ಗ ಕಂಡುಕೊಳ್ಳಬೇಕಿದೆ’ ಎಂದು ಪ್ರೊ.ಹರಿರಾಂ ಹೇಳಿದರು.</p>.<p>‘ರಾಜಕೀಯ ಪಕ್ಷಗಳನ್ನು ಅಧಿಕಾರಕ್ಕೆ ತರಲು ನಾವು ಮತ ಬ್ಯಾಂಕ್ ಆಗಿದ್ದೇವೆ. ಆದರೆ, ನಮ್ಮ ಬದುಕು ರೂಪಿಸಿಕೊಳ್ಳುವ ಶಕ್ತಿ ಬೆಳೆಸಿಕೊಂಡಿಲ್ಲ. ನೀತಿ ರೂಪಿಸುವಲ್ಲಿ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನಾವೇ ಪರ್ಯಾಯ ಪಕ್ಷ ಕಟ್ಟುವ ಅಗತ್ಯವಿದೆ’ ಎಂದರು. </p>.<p>‘ರಾಜ್ಯದಲ್ಲಿ ಬಿಎಸ್ಪಿ ಶಕ್ತಿ ಕಳೆದುಕೊಂಡಿದೆ. ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಸ್ತಿತ್ವ ಕಳೆದುಕೊಳ್ಳುವ ಹಂತದಲ್ಲಿದ್ದಾರೆ. ಮೂರೂ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಕಾಣುತ್ತಿದ್ದೇವೆ, ಹಣದ ಶಕ್ತಿಯೊಂದೇ ಕೆಲಸ ಮಾಡುತ್ತಿದೆ. ಇದಕ್ಕೆ ಬ್ರೇಕ್ ಹಾಕಬೇಕಿದೆ’ ಎಂದು ಮುಖಂಡ ಸೋಸಲೆ ಸಿದ್ದರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಸಾಹಿತಿ, ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಪರ್ಯಾಯ ರಾಜಕಾರಣಕ್ಕಾಗಿ ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುವ ಚಿಂತನೆಗೆ ಭಾನುವಾರ ಚಾಲನೆ ದೊರೆತಿದೆ.</p>.<p>ಈ ಉದ್ದೇಶಕ್ಕಾಗಿ ಬುಡ್ಡಿ ದೀಪ ಆಶ್ರಯದಲ್ಲಿ ಭಾನುವಾರ ನಗರದ ನಚಿಕೇತ ನಿಲಯ ಆವರಣದ ಬುದ್ಧ ಮಂದಿರದಲ್ಲಿ ‘ಪ್ರತಿರೋಧದ ದನಿಗಳು’ ಅಡಿ ಪೂರ್ವಭಾವಿ ಸಭೆ ನಡೆಯಿತು.</p>.<p>ಸಭೆಯಲ್ಲಿ ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಚಿಕ್ಕಬಳ್ಳಾಪುರದಿಂದ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ತಾತ್ಕಾಲಿಕವಾಗಿ ಸಮಿತಿಯೊಂದನ್ನು ರಚಿಸಲಾಯಿತು.</p>.<p>ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಮೀಸಲಿಟ್ಟಿರುವ ವಿಶೇಷ ಘಟಕದ ಹಣವನ್ನು ಸರ್ಕಾರ ವಿವಿಧ ಗ್ಯಾರಂಟಿ ಯೋಜನೆಗಳಿಗೆ ಪಲ್ಲಟಗೊಳಿಸಿರುವುದನ್ನು ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ಖಂಡಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ‘ಎಲ್ಲಾ ರಾಜಕೀಯ ಪಕ್ಷಗಳು ಈ ನೆಲದ ನೋವು ಮರೆತಿರುವ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಪಕ್ಷ ಹಾಗೂ ಪರ್ಯಾಯ ರಾಜಕಾರಣದ ಅಗತ್ಯವಿದೆ. ಈ ಸಂಬಂಧ ದೊಟ್ಟಮಟ್ಟದಲ್ಲಿ ಚರ್ಚೆ, ಸಂವಾದ, ಜಾಗೃತಿ ನಡೆಯಬೇಕಿದೆ’ ಎಂದು ಪ್ರತಿಪಾದಿಸಿದರು.</p>.<p>‘ಹಲವಾರು ವರ್ಷಗಳಿಂದ ಪರ್ಯಾಯ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವರೆಗೆ ನಮಗೆ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಾಗಿಲ್ಲ. ಆದರೆ, ಸಮುದಾಯದಲ್ಲಿ ರಾಜಕೀಯ ಪ್ರಜ್ಞೆ ಜಾಗೃತವಾಗಿದೆ. ಅದಕ್ಕೆ ಸಾಣೆ ಹಿಡಿಯಬೇಕು. ಈ ಮೂಲಕ ಪರ್ಯಾಯ ರಾಜಕೀಯ ಮಾರ್ಗ ಕಂಡುಕೊಳ್ಳಬೇಕಿದೆ’ ಎಂದು ಪ್ರೊ.ಹರಿರಾಂ ಹೇಳಿದರು.</p>.<p>‘ರಾಜಕೀಯ ಪಕ್ಷಗಳನ್ನು ಅಧಿಕಾರಕ್ಕೆ ತರಲು ನಾವು ಮತ ಬ್ಯಾಂಕ್ ಆಗಿದ್ದೇವೆ. ಆದರೆ, ನಮ್ಮ ಬದುಕು ರೂಪಿಸಿಕೊಳ್ಳುವ ಶಕ್ತಿ ಬೆಳೆಸಿಕೊಂಡಿಲ್ಲ. ನೀತಿ ರೂಪಿಸುವಲ್ಲಿ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನಾವೇ ಪರ್ಯಾಯ ಪಕ್ಷ ಕಟ್ಟುವ ಅಗತ್ಯವಿದೆ’ ಎಂದರು. </p>.<p>‘ರಾಜ್ಯದಲ್ಲಿ ಬಿಎಸ್ಪಿ ಶಕ್ತಿ ಕಳೆದುಕೊಂಡಿದೆ. ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಸ್ತಿತ್ವ ಕಳೆದುಕೊಳ್ಳುವ ಹಂತದಲ್ಲಿದ್ದಾರೆ. ಮೂರೂ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಕಾಣುತ್ತಿದ್ದೇವೆ, ಹಣದ ಶಕ್ತಿಯೊಂದೇ ಕೆಲಸ ಮಾಡುತ್ತಿದೆ. ಇದಕ್ಕೆ ಬ್ರೇಕ್ ಹಾಕಬೇಕಿದೆ’ ಎಂದು ಮುಖಂಡ ಸೋಸಲೆ ಸಿದ್ದರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>