<p><strong>ಬೇತಮಂಗಲ</strong>: ಎನ್.ಜಿ.ಹುಲ್ಕೂರು ಗ್ರಾಮದ ಕೆರೆಯಲ್ಲಿ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಮಣ್ಣು ತೆಗೆಯಬಾರದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗುತ್ತಿಗೆದಾರರು ಮಣ್ಣು ತೆಗೆಯುವುದರಿಂದ ಕೆರೆಯಲ್ಲಿ ಗುಣಿ ಬೀಳುತ್ತದೆ. ಜತೆಗೆ ರೈತರಿಗೆ ಬೇಕಾದಾಗ ಮಣ್ಣು ಸಿಗುವುದಿಲ್ಲ. ರೈತರು ತಮ್ಮ ತೋಟಗಳಿಗೆ ಮನ್ಣು ತೆಗೆಯಬೇಕಾದರೆ ಗ್ರಾಮ ಪಂಚಾಯಿತಿ, ಮಣ್ಣು ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಹೇಳುತ್ತಾರೆ. ಆದರೆ, ಗುತ್ತಿಗೆದಾರರು ಯಾರ ಅನುಮತಿಯೂ ಪಡೆಯದೆ ರಾಜಾರೋಷವಾಗಿ ಮಣ್ಣು ತೆಗೆಯುತ್ತಿದ್ದಾರೆ. ಇದನ್ನು ಯಾವ ಅಧಿಕಾರಿಗಳು ಪ್ರಶ್ನಿಸಿಲ್ಲ ಎಂದು ಆರೋಪಿಸಿದರು.</p>.<p>ಕೂಡಲೇ ಕೆರೆಯಲ್ಲಿ ಮಣ್ಣು ತೆಗೆಯದಂತೆ ತಡೆಯಬೇಕೆಂದು ಈಗಾಗಲೇ ಗ್ರಾಮ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ದೂರು ನೀಡಲಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಣ್ಣು ತೆಗೆಯದಂತೆ ತಡೆಯಬೇಕೆಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಎನ್.ಜಿ.ಹುಲ್ಕೂರು ಗ್ರಾಮದ ಕೆರೆಯಲ್ಲಿ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಮಣ್ಣು ತೆಗೆಯಬಾರದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗುತ್ತಿಗೆದಾರರು ಮಣ್ಣು ತೆಗೆಯುವುದರಿಂದ ಕೆರೆಯಲ್ಲಿ ಗುಣಿ ಬೀಳುತ್ತದೆ. ಜತೆಗೆ ರೈತರಿಗೆ ಬೇಕಾದಾಗ ಮಣ್ಣು ಸಿಗುವುದಿಲ್ಲ. ರೈತರು ತಮ್ಮ ತೋಟಗಳಿಗೆ ಮನ್ಣು ತೆಗೆಯಬೇಕಾದರೆ ಗ್ರಾಮ ಪಂಚಾಯಿತಿ, ಮಣ್ಣು ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಹೇಳುತ್ತಾರೆ. ಆದರೆ, ಗುತ್ತಿಗೆದಾರರು ಯಾರ ಅನುಮತಿಯೂ ಪಡೆಯದೆ ರಾಜಾರೋಷವಾಗಿ ಮಣ್ಣು ತೆಗೆಯುತ್ತಿದ್ದಾರೆ. ಇದನ್ನು ಯಾವ ಅಧಿಕಾರಿಗಳು ಪ್ರಶ್ನಿಸಿಲ್ಲ ಎಂದು ಆರೋಪಿಸಿದರು.</p>.<p>ಕೂಡಲೇ ಕೆರೆಯಲ್ಲಿ ಮಣ್ಣು ತೆಗೆಯದಂತೆ ತಡೆಯಬೇಕೆಂದು ಈಗಾಗಲೇ ಗ್ರಾಮ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ದೂರು ನೀಡಲಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಣ್ಣು ತೆಗೆಯದಂತೆ ತಡೆಯಬೇಕೆಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>