<p><strong>ಬಂಗಾರಪೇಟೆ</strong>: ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ₹7.5 ಕೋಟಿ ಮಂಜೂರು ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು. </p>.<p>ಸೋಮವಾರ ನಗರ ಪ್ರದಕ್ಷಣೆ ಮಾಡಿದ ಅವರು, ‘ನಗರದಲ್ಲಿ ಹಲವು ಸಮಸ್ಯೆಗಳು ಕಂಡುಬಂದಿವೆ. ನಗರದ ಸೌಂದರ್ಯವಾಗಿ ಇಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ನಗರದಲ್ಲಿರುವ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಪರಿಶೀಲನೆ ಮಾಡಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ ತಂಡ ಬರಲಿದ್ದು, ಅವರು ಕ್ರಮ ಕೈಗೊಳ್ಳಲಿದ್ದಾರೆ. ಆ ಬಳಿಕ ಮುಖ್ಯ ರಸ್ತೆಗಳಾದ ಮಾದಯ್ಯ ರಸ್ತೆ, ಓಸ್ವಲ್ ಆಸ್ಪತ್ರೆ ರಸ್ತೆ, ಬಜಾರ್ ರಸ್ತೆ ಮತ್ತು ನಂದಿ ಮೆಡಿಕಲ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. </p>.<p>ಮುಂಜಾನೆ ನಗರ ಪ್ರದಕ್ಷಣೆ ವೇಳೆ ಅನೇಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ನಗರದ ಅಭಿವೃದ್ಧಿಯೇ ನನ್ನ ಮೂಲ ಉದ್ದೇಶ ಎಂದರು. </p>.<p>ಈ ವೇಳೆ ಪುರಸಭೆ ಅಧ್ಯಕ್ಷ ಬಿ. ಎಂ. ಗೋವಿಂದ, ಸದಸ್ಯರಾದ ಅರುಣಾಚಲಂ ಮಣಿ, ಎಸ್. ವೆಂಕಟೇಶ್, ಶೇಖರ್, ವೆಂಕಟೇಶ್, ಯುವರಾಜ್, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ₹7.5 ಕೋಟಿ ಮಂಜೂರು ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು. </p>.<p>ಸೋಮವಾರ ನಗರ ಪ್ರದಕ್ಷಣೆ ಮಾಡಿದ ಅವರು, ‘ನಗರದಲ್ಲಿ ಹಲವು ಸಮಸ್ಯೆಗಳು ಕಂಡುಬಂದಿವೆ. ನಗರದ ಸೌಂದರ್ಯವಾಗಿ ಇಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ನಗರದಲ್ಲಿರುವ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಪರಿಶೀಲನೆ ಮಾಡಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ ತಂಡ ಬರಲಿದ್ದು, ಅವರು ಕ್ರಮ ಕೈಗೊಳ್ಳಲಿದ್ದಾರೆ. ಆ ಬಳಿಕ ಮುಖ್ಯ ರಸ್ತೆಗಳಾದ ಮಾದಯ್ಯ ರಸ್ತೆ, ಓಸ್ವಲ್ ಆಸ್ಪತ್ರೆ ರಸ್ತೆ, ಬಜಾರ್ ರಸ್ತೆ ಮತ್ತು ನಂದಿ ಮೆಡಿಕಲ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. </p>.<p>ಮುಂಜಾನೆ ನಗರ ಪ್ರದಕ್ಷಣೆ ವೇಳೆ ಅನೇಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ನಗರದ ಅಭಿವೃದ್ಧಿಯೇ ನನ್ನ ಮೂಲ ಉದ್ದೇಶ ಎಂದರು. </p>.<p>ಈ ವೇಳೆ ಪುರಸಭೆ ಅಧ್ಯಕ್ಷ ಬಿ. ಎಂ. ಗೋವಿಂದ, ಸದಸ್ಯರಾದ ಅರುಣಾಚಲಂ ಮಣಿ, ಎಸ್. ವೆಂಕಟೇಶ್, ಶೇಖರ್, ವೆಂಕಟೇಶ್, ಯುವರಾಜ್, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>