<p><strong>ಕೆಜಿಎಫ್</strong>: ರಾಜ್ಯದ ಹಲವೆಡೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಚೆಡ್ಡಿ ಗ್ಯಾಂಗ್ನ ನಾಲ್ವರನ್ನು ಜಿಲ್ಲೆಯ ಪೊಲೀಸರು ವಿಚಾರಣೆಗಾಗಿ ಗುರುವಾರ ಮಂಗಳೂರಿನಿಂದ ಕರೆತಂದಿದ್ದಾರೆ.</p>.<p>ಇಲ್ಲಿಯ ಸ್ವರ್ಣನಗರದ ಪ್ರಸನ್ನ ರೆಡ್ಡಿ ಎಂಬುವರ ಮನೆಯ ಕಬ್ಬಿಣದ ಸರಳನ್ನು ಯಂತ್ರದ ಮೂಲಕ ಕತ್ತರಿಸಿ ಒಳಗೆ ನುಗ್ಗಲು ಯತ್ನಿಸಿದ್ದರು. ಕುಟುಂಬ ಸದಸ್ಯರು ಎಚ್ಚರಗೊಂಡ ಕಾರಣ ಪಲಾಯನ ಮಾಡಿದ್ದರು. </p>.<p>ಸಕಲೇಶಪುರದ ಬಳಿ ಮಂಗಳೂರು ಪೊಲೀಸರು ಈ ಗ್ಯಾಂಗ್ ಸದಸ್ಯರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದರು. ಮಂಗಳೂರು ನ್ಯಾಯಾಲಯದ ಅನುಮತಿ ಪಡೆದು ಚೆಡ್ಡಿ ಗ್ಯಾಂಗ್ ಸದಸ್ಯರನ್ನು ನಗರಕ್ಕೆ ಕರೆತರಲಾಗಿದೆ.</p>.<p>ಆರೋಪಿಗಳಾದ ರಾಜು ಸಿಂಘಾನಿಯಾ (24), ಮಯೂರ ಕೃಷ್ಣ (30), ವಿಕ್ಕಿ ಪಾರ್ದಿ (21) ಮತ್ತು ಬಾಲಿಸಿಂಗ್ (22) ಅವರನ್ನು ಸಬ್ ಇನ್ಸ್ಪೆಕ್ಟರ್ ತ್ಯಾಗರಾಜ್ ಮತ್ತು ಸಿಬ್ಬಂದಿ ಅವರನ್ನು ರಾಬರ್ಟಸನ್ಪೇಟೆ ಪೊಲೀಸ್ ಠಾಣೆಗೆ ಕರೆತಂದಿದೆ.</p>.<p>ಮಧ್ಯಪ್ರದೇಶದ ಮೂಲದ ಆರೋಪಿಗಳನ್ನು ಮೂರು ದಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.</p>.<p>ಬಾಲಿಸಿಂಗ್ ಮೇಲೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜು ಸಿಂಘಾನಿಯಾ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಇದೆ. ಆರೋಪಿಗಳು ನಡೆಸಿರುವ ದೃಷ್ಕೃತ್ಯಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ರಾಜ್ಯದ ಹಲವೆಡೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಚೆಡ್ಡಿ ಗ್ಯಾಂಗ್ನ ನಾಲ್ವರನ್ನು ಜಿಲ್ಲೆಯ ಪೊಲೀಸರು ವಿಚಾರಣೆಗಾಗಿ ಗುರುವಾರ ಮಂಗಳೂರಿನಿಂದ ಕರೆತಂದಿದ್ದಾರೆ.</p>.<p>ಇಲ್ಲಿಯ ಸ್ವರ್ಣನಗರದ ಪ್ರಸನ್ನ ರೆಡ್ಡಿ ಎಂಬುವರ ಮನೆಯ ಕಬ್ಬಿಣದ ಸರಳನ್ನು ಯಂತ್ರದ ಮೂಲಕ ಕತ್ತರಿಸಿ ಒಳಗೆ ನುಗ್ಗಲು ಯತ್ನಿಸಿದ್ದರು. ಕುಟುಂಬ ಸದಸ್ಯರು ಎಚ್ಚರಗೊಂಡ ಕಾರಣ ಪಲಾಯನ ಮಾಡಿದ್ದರು. </p>.<p>ಸಕಲೇಶಪುರದ ಬಳಿ ಮಂಗಳೂರು ಪೊಲೀಸರು ಈ ಗ್ಯಾಂಗ್ ಸದಸ್ಯರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದರು. ಮಂಗಳೂರು ನ್ಯಾಯಾಲಯದ ಅನುಮತಿ ಪಡೆದು ಚೆಡ್ಡಿ ಗ್ಯಾಂಗ್ ಸದಸ್ಯರನ್ನು ನಗರಕ್ಕೆ ಕರೆತರಲಾಗಿದೆ.</p>.<p>ಆರೋಪಿಗಳಾದ ರಾಜು ಸಿಂಘಾನಿಯಾ (24), ಮಯೂರ ಕೃಷ್ಣ (30), ವಿಕ್ಕಿ ಪಾರ್ದಿ (21) ಮತ್ತು ಬಾಲಿಸಿಂಗ್ (22) ಅವರನ್ನು ಸಬ್ ಇನ್ಸ್ಪೆಕ್ಟರ್ ತ್ಯಾಗರಾಜ್ ಮತ್ತು ಸಿಬ್ಬಂದಿ ಅವರನ್ನು ರಾಬರ್ಟಸನ್ಪೇಟೆ ಪೊಲೀಸ್ ಠಾಣೆಗೆ ಕರೆತಂದಿದೆ.</p>.<p>ಮಧ್ಯಪ್ರದೇಶದ ಮೂಲದ ಆರೋಪಿಗಳನ್ನು ಮೂರು ದಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.</p>.<p>ಬಾಲಿಸಿಂಗ್ ಮೇಲೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜು ಸಿಂಘಾನಿಯಾ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಇದೆ. ಆರೋಪಿಗಳು ನಡೆಸಿರುವ ದೃಷ್ಕೃತ್ಯಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>