<p><strong>ಕೆಜಿಎಫ್</strong>: ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರನ್ನು ರಾಬರ್ಟಸನ್ಪೇಟೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.</p>.<p>ಆಂಡರಸನ್ಪೇಟೆಯ ಬಿಜೆಪಿ ಮುಖಂಡ ನವೀನ್ ಜೈನ್ ಮತ್ತು ರಾಬರ್ಟಸನ್ಪೇಟೆಯ ವರ್ತಕ ಚೇತನ್ ಭಾಟಿಯಾ ಎಂಬುವರನ್ನು ಬಂಧಿಸಲಾಗಿದೆ.</p>.<p>ತೆರಿಗೆ ಕಟ್ಟುವ ವಿಚಾರಕ್ಕೆ ಮುಸ್ಲಿಂ ಸಮುದಾಯವನ್ನು ಟೀಕಿಸಿದ್ದ ಕಾರ್ಟೂನ್ವೊಂದನ್ನು ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.</p>.<p>ಇದರಿಂದ ಸಿಟ್ಟಿಗೆದ್ದ ಮುಸ್ಲಿಂ ಸಮುದಾಯದ ನೂರಾರು ಮಂದಿ ಶುಕ್ರವಾರ ರಾತ್ರಿ ರಾಬರ್ಟಸನ್ಪೇಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಆರೋಪಿಗಳನ್ನು ಬಂಧಿಸಿ, ಅವರಿಂದ ಕ್ಷಮೆ ಕೇಳಿಸಬೇಕೆಂದು ಒತ್ತಾಯಿಸಿದರು.</p>.<p>ಪೊಲೀಸ್ ಠಾಣೆ ಮತ್ತು ಮುಂಭಾಗದ ರಸ್ತೆಯಲ್ಲಿ ಸೇರಿದ್ದ ಉದ್ರಿಕ್ತ ಗುಂಪಿನೊಂದಿಗೆ ಸ್ಥಳಕ್ಕೆ ಬಂದ ಡಿವೈಎಸ್ಪಿ ಪಾಂಡುರಂಗ ಮಾತುಕತೆ ನಡೆಸಿದರು. ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಿ, ಸಮುದಾಯದ ಮುಖಂಡರಿಗೆ ಮಾಹಿತಿ ನೀಡಿದರು.</p>.<p>ಮುಸ್ಲಿಂ ಸಮುದಾಯದ ಮುಖಂಡರು ಸಹ ಉದ್ರಿಕ್ತ ಗುಂಪನ್ನು ಸಮಾಧಾನಪಡಿಸಿದರು. ಈ ವಿಷಯವಾಗಿ ಯಾರೂ ಕಾನೂನು ಮೀರಿ ವರ್ತಿಸಬಾರದು. ಸಂಯಮ ಕಾಪಾಡಿಕೊಂಡು ಬರಬೇಕು. ಯಾವುದೇ ಕೋಮು ಪ್ರಚೋದನಕಾರಿ ಮತ್ತು ಅವಹೇಳನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರನ್ನು ರಾಬರ್ಟಸನ್ಪೇಟೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.</p>.<p>ಆಂಡರಸನ್ಪೇಟೆಯ ಬಿಜೆಪಿ ಮುಖಂಡ ನವೀನ್ ಜೈನ್ ಮತ್ತು ರಾಬರ್ಟಸನ್ಪೇಟೆಯ ವರ್ತಕ ಚೇತನ್ ಭಾಟಿಯಾ ಎಂಬುವರನ್ನು ಬಂಧಿಸಲಾಗಿದೆ.</p>.<p>ತೆರಿಗೆ ಕಟ್ಟುವ ವಿಚಾರಕ್ಕೆ ಮುಸ್ಲಿಂ ಸಮುದಾಯವನ್ನು ಟೀಕಿಸಿದ್ದ ಕಾರ್ಟೂನ್ವೊಂದನ್ನು ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.</p>.<p>ಇದರಿಂದ ಸಿಟ್ಟಿಗೆದ್ದ ಮುಸ್ಲಿಂ ಸಮುದಾಯದ ನೂರಾರು ಮಂದಿ ಶುಕ್ರವಾರ ರಾತ್ರಿ ರಾಬರ್ಟಸನ್ಪೇಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಆರೋಪಿಗಳನ್ನು ಬಂಧಿಸಿ, ಅವರಿಂದ ಕ್ಷಮೆ ಕೇಳಿಸಬೇಕೆಂದು ಒತ್ತಾಯಿಸಿದರು.</p>.<p>ಪೊಲೀಸ್ ಠಾಣೆ ಮತ್ತು ಮುಂಭಾಗದ ರಸ್ತೆಯಲ್ಲಿ ಸೇರಿದ್ದ ಉದ್ರಿಕ್ತ ಗುಂಪಿನೊಂದಿಗೆ ಸ್ಥಳಕ್ಕೆ ಬಂದ ಡಿವೈಎಸ್ಪಿ ಪಾಂಡುರಂಗ ಮಾತುಕತೆ ನಡೆಸಿದರು. ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಿ, ಸಮುದಾಯದ ಮುಖಂಡರಿಗೆ ಮಾಹಿತಿ ನೀಡಿದರು.</p>.<p>ಮುಸ್ಲಿಂ ಸಮುದಾಯದ ಮುಖಂಡರು ಸಹ ಉದ್ರಿಕ್ತ ಗುಂಪನ್ನು ಸಮಾಧಾನಪಡಿಸಿದರು. ಈ ವಿಷಯವಾಗಿ ಯಾರೂ ಕಾನೂನು ಮೀರಿ ವರ್ತಿಸಬಾರದು. ಸಂಯಮ ಕಾಪಾಡಿಕೊಂಡು ಬರಬೇಕು. ಯಾವುದೇ ಕೋಮು ಪ್ರಚೋದನಕಾರಿ ಮತ್ತು ಅವಹೇಳನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>