<p><strong>ಕೋಲಾರ:</strong> ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಯಲುವಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿನ ಮಲದ ಗುಂಡಿಯನ್ನು ಭಾನುವಾರ ಮಾಧ್ಯಮದವರಿಗೆ ಖುದ್ದಾಗಿ ವಿದ್ಯಾರ್ಥಿಗಳೇ ತೋರಿಸಿದರು.</p><p>ಪ್ರಾಂಶುಪಾಲರು ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಐದಾರು ಮಕ್ಕಳನ್ನು ಈ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಲಾಗಿತ್ತು.</p><p>‘ಸಹ ಶಿಕ್ಷಕರೊಬ್ಬರು ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿದ್ದಾರೆ. ಅದನ್ನು ತಡೆಯಲು ನಾನು ಹೋಗಿದ್ದೆ. ಮಲದ ಗುಂಡಿ ಬಳಿ ನಾನಿರುವ ಫೋಟೊವನ್ನು ಶಿಕ್ಷಕರೊಬ್ಬರು ಹಿಂಬದಿಯಿಂದ ತೆಗೆದಿದ್ದಾರೆ. ಈಗ ನನ್ನನ್ನೇ ಅಮಾನತು ಮಾಡಿದ್ದಾರೆ’ ಎಂದು ವಸತಿ ನಿಲಯದ ಪ್ರಾಂಶಪಾಲರಾದ ಭಾರತಮ್ಮ ತಿಳಿಸಿದರು.</p><p>ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಸುನಿಲ್ ಎಸ್. ಹೊಸಮನಿ, ವಸತಿ ಶಾಲೆಗೆ ಭೇಟಿ ನೀಡಿದರು. </p><p>ಮಕ್ಕಳೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ ಅಡುಗೆ ಕೋಣೆ, ಮಕ್ಕಳ ವಾಸ್ತವ್ಯ ಕೊಠಡಿ ಸೇರಿದಂತೆ ವಿವಿಧೆಡೆ ಪರಿಶೀಲಿಸಿದರು.</p><p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಆರ್.ಶ್ರೀನಿವಾಸ್, ದಲಿತ ಮುಖಂಡರು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು, ಹೋರಾಟಗಾರರು ವಸತಿ ನಿಲಯಕ್ಕೆ ಭೇಟಿ ನೀಡಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಯಲುವಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿನ ಮಲದ ಗುಂಡಿಯನ್ನು ಭಾನುವಾರ ಮಾಧ್ಯಮದವರಿಗೆ ಖುದ್ದಾಗಿ ವಿದ್ಯಾರ್ಥಿಗಳೇ ತೋರಿಸಿದರು.</p><p>ಪ್ರಾಂಶುಪಾಲರು ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಐದಾರು ಮಕ್ಕಳನ್ನು ಈ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಲಾಗಿತ್ತು.</p><p>‘ಸಹ ಶಿಕ್ಷಕರೊಬ್ಬರು ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿದ್ದಾರೆ. ಅದನ್ನು ತಡೆಯಲು ನಾನು ಹೋಗಿದ್ದೆ. ಮಲದ ಗುಂಡಿ ಬಳಿ ನಾನಿರುವ ಫೋಟೊವನ್ನು ಶಿಕ್ಷಕರೊಬ್ಬರು ಹಿಂಬದಿಯಿಂದ ತೆಗೆದಿದ್ದಾರೆ. ಈಗ ನನ್ನನ್ನೇ ಅಮಾನತು ಮಾಡಿದ್ದಾರೆ’ ಎಂದು ವಸತಿ ನಿಲಯದ ಪ್ರಾಂಶಪಾಲರಾದ ಭಾರತಮ್ಮ ತಿಳಿಸಿದರು.</p><p>ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಸುನಿಲ್ ಎಸ್. ಹೊಸಮನಿ, ವಸತಿ ಶಾಲೆಗೆ ಭೇಟಿ ನೀಡಿದರು. </p><p>ಮಕ್ಕಳೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ ಅಡುಗೆ ಕೋಣೆ, ಮಕ್ಕಳ ವಾಸ್ತವ್ಯ ಕೊಠಡಿ ಸೇರಿದಂತೆ ವಿವಿಧೆಡೆ ಪರಿಶೀಲಿಸಿದರು.</p><p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಆರ್.ಶ್ರೀನಿವಾಸ್, ದಲಿತ ಮುಖಂಡರು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು, ಹೋರಾಟಗಾರರು ವಸತಿ ನಿಲಯಕ್ಕೆ ಭೇಟಿ ನೀಡಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>