ಮುಳಬಾಗಿಲು: ‘ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟ ಆಕಾಂಕ್ಷಿಗಳಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟಾಂಗ್ ನೀಡಿದರು.
ಮುಳಬಾಗಿಲು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ನೀಡುವರೆ ಎಂಬ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಖಾರವಾಗಿ ಉತ್ತರಿಸಿದರು.
ಮಾಲೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ನಡುವಿನ ಮಾರಾಮಾರಿ ಕುರಿತು ಪ್ರತಿಕ್ರಿಯಿಸಿ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ. ಮತ್ತೊಮ್ಮೆ ಅಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಲಾಗುವುದು ಎಂದರು.
ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ. ರಾಮ್ ಪ್ರಸಾದ್, ಸುಭಾಷ್ ಗೌಡ, ಜಂಟಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಡಿಕಲ್ ಮಂಜುನಾಥ್, ಲಕ್ಷ್ಮಿ ನಾರಾಯಣ, ಜಯದೇವ್, ರಾಮಲಿಂಗರೆಡ್ಡಿ, ಮಾರಪ್ಪ, ಅಮಾನುಲ್ಲಾ, ಜಬೀ ಉಲ್ಲಾ, ಸೀನಪ್ಪ ಇದ್ದರು.