<p><strong>ಗಂಗಾವತಿ:</strong> ‘371(ಜೆ) ಕಲಂ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ರಾಜ್ಯದ ಕೆಲ ಭಾಗಗಳಿಂದ ಕಲಂ ರದ್ದತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದನ್ನು ವಿರೋಧಿಸಿ ಆಗಸ್ಟ್ 1ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು 371 (ಜೆ) ಸಮರ್ಪಕ ಅನುಷ್ಠಾನ ಸಮಿತಿ ಸಂಚಾಲಕ ಇ. ಧನರಾಜ್ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಹಲವು ವರ್ಷಗಳಿಂದ ನಮ್ಮ ಭಾಗದ ಜನರಿಗೆ 371(ಜೆ) ಕಲಂನ ಸೌಲಭ್ಯ ಸಿಗುತ್ತಿಲ್ಲ. ನಗರದ ಸಿಬಿಎಸ್ ವೃತ್ತ ಸೇರಿ ವಿವಿಧ ವೃತ್ತಗಳಿಂದ ಸಾಹಿತಿಗಳು, ಚಿಂತಕರು, ಕನ್ನಡ ಪರ ಮತ್ತು ವಿದ್ಯಾರ್ಥಿ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಲಿದ್ದಾರೆ. ನಂತರ ಬಹಿರಂಗ ಸಭೆ ಜರುಗಲಿದೆ’ ಎಂದು ಹೇಳಿದರು.</p>.<p>ಚನ್ನಬಸವಸ್ವಾಮಿ, ಸಾಹಿತಿ ಅಜ್ಮೀರ್ ನಂದಾಪುರ, ಎ.ಕೆ. ಮಹೇಶ ವಿರುಪಾಕ್ಷಗೌಡ ಹೇರೂರು, ಪಂಪಣ್ಣ ನಾಯಕ ರಾಜೇಶರೆಡ್ಡಿ, ಪವನಕುಮಾರ ಗುಂಡೂರು, ಕೆ.ಅಂಬಣ್ಣ, ರಾಘವೇಂದ್ರ ತೋನಾ, ಕೃಷ್ಣ, ತಿಪ್ಪೆಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘371(ಜೆ) ಕಲಂ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ರಾಜ್ಯದ ಕೆಲ ಭಾಗಗಳಿಂದ ಕಲಂ ರದ್ದತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದನ್ನು ವಿರೋಧಿಸಿ ಆಗಸ್ಟ್ 1ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು 371 (ಜೆ) ಸಮರ್ಪಕ ಅನುಷ್ಠಾನ ಸಮಿತಿ ಸಂಚಾಲಕ ಇ. ಧನರಾಜ್ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಹಲವು ವರ್ಷಗಳಿಂದ ನಮ್ಮ ಭಾಗದ ಜನರಿಗೆ 371(ಜೆ) ಕಲಂನ ಸೌಲಭ್ಯ ಸಿಗುತ್ತಿಲ್ಲ. ನಗರದ ಸಿಬಿಎಸ್ ವೃತ್ತ ಸೇರಿ ವಿವಿಧ ವೃತ್ತಗಳಿಂದ ಸಾಹಿತಿಗಳು, ಚಿಂತಕರು, ಕನ್ನಡ ಪರ ಮತ್ತು ವಿದ್ಯಾರ್ಥಿ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಲಿದ್ದಾರೆ. ನಂತರ ಬಹಿರಂಗ ಸಭೆ ಜರುಗಲಿದೆ’ ಎಂದು ಹೇಳಿದರು.</p>.<p>ಚನ್ನಬಸವಸ್ವಾಮಿ, ಸಾಹಿತಿ ಅಜ್ಮೀರ್ ನಂದಾಪುರ, ಎ.ಕೆ. ಮಹೇಶ ವಿರುಪಾಕ್ಷಗೌಡ ಹೇರೂರು, ಪಂಪಣ್ಣ ನಾಯಕ ರಾಜೇಶರೆಡ್ಡಿ, ಪವನಕುಮಾರ ಗುಂಡೂರು, ಕೆ.ಅಂಬಣ್ಣ, ರಾಘವೇಂದ್ರ ತೋನಾ, ಕೃಷ್ಣ, ತಿಪ್ಪೆಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>