ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕೊಪ್ಪಳ ತಾಲ್ಲೂಕು ಘಟಕದ ವತಿಯಿಂದಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಕಡ್ಡಾಯವಾಗಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಲಾಯಿತು
ಮೀಸಲಾತಿಗೆ ತಡೆ ನೀಡಿದ ಕ್ರಮಕ್ಕೆ ವಿರೋಧ
ಕೊಪ್ಪಳ: ನಮ್ಮ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೊಳಿಸಲು ಅಧಿವೇಶನದಲ್ಲಿ ಅಂಗೀಕಾರ ಮಾಡಿದ್ದು ಕೆಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಕ್ಕೆ ಈಗ ತಡೆ ಹಿಡಿದಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ್ರ ಬಣ) ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ರಾಜ್ಯದಲ್ಲಿನ ಉದ್ಯಮಿಗಳು ಸರ್ಕಾರದ ಎಲ್ಲ ಸವಲತ್ತುಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಂಡು ಬೆಂಗಳೂರಿನಂಥ ಮಹಾನಗರದಲ್ಲಿ ದೊಡ್ಡ ಕಂಪನಿಗಳನ್ನು ನಡೆಸುತ್ತ ಆದಾಯ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇವರು ಕನ್ನಡಿಗರಿಗೆ ಉದ್ಯೋಗ ಕೊಡುವುದಕ್ಕೆ ಹಿಂದೇಟು ಹಾಕುತ್ತಿರುವುದು ಸರಿಯೇ’ ಎಂದು ಪ್ರಶ್ನಿಸಿದ್ದಾರೆ.