<p>ಕೊಪ್ಪಳ: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದ ವಾರ ಕೊಲೆಗೀಡಾದ ಅನುಶ್ರೀ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಕಿನ್ನಾಳ ಗ್ರಾಮಸ್ಥರು ಆಗ್ರಹಿಸಿದ್ದು, ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರವನ್ನು ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ್ ಅವರಿಗೆ ಸಲ್ಲಿಸಿದರು.</p>.<p>‘ಕರಕುಶಲತೆಯಲ್ಲಿ ದೇಶದಲ್ಲೆ ಹೆಸರು ಮಾಡಿರುವ ಕಿನ್ನಾಳ ಗ್ರಾಮದಲ್ಲಿ ಬಾಲಕಿ ಹತ್ಯೆಯಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ. ಗ್ರಾಮದ ಜನರ ಮಾನಸಿಕ ನೆಮ್ಮದಿಯೂ ಹಾಳಾಗಿದೆ. ಆದ್ದರಿಂದ ಆದಷ್ಟು ಬೇಗನೆ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಕಿನ್ನಾಳ ಗ್ರಾಮಸ್ಥರಾದ ಬಾಷಾ ಹಿರೇಮನಿ, ಬಸವರಾಜ ಚಿಲವಾಡಗಿ ಅನಿಲ ಬೋರಟ್ಟಿ, ಮಂಜು ಉದ್ದಾರ, ಮಂಜುನಾಥ ಗೊಂಡಬಾಳ, ವೀರೇಶ ತಾವರಗೇರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದ ವಾರ ಕೊಲೆಗೀಡಾದ ಅನುಶ್ರೀ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಕಿನ್ನಾಳ ಗ್ರಾಮಸ್ಥರು ಆಗ್ರಹಿಸಿದ್ದು, ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರವನ್ನು ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ್ ಅವರಿಗೆ ಸಲ್ಲಿಸಿದರು.</p>.<p>‘ಕರಕುಶಲತೆಯಲ್ಲಿ ದೇಶದಲ್ಲೆ ಹೆಸರು ಮಾಡಿರುವ ಕಿನ್ನಾಳ ಗ್ರಾಮದಲ್ಲಿ ಬಾಲಕಿ ಹತ್ಯೆಯಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ. ಗ್ರಾಮದ ಜನರ ಮಾನಸಿಕ ನೆಮ್ಮದಿಯೂ ಹಾಳಾಗಿದೆ. ಆದ್ದರಿಂದ ಆದಷ್ಟು ಬೇಗನೆ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಕಿನ್ನಾಳ ಗ್ರಾಮಸ್ಥರಾದ ಬಾಷಾ ಹಿರೇಮನಿ, ಬಸವರಾಜ ಚಿಲವಾಡಗಿ ಅನಿಲ ಬೋರಟ್ಟಿ, ಮಂಜು ಉದ್ದಾರ, ಮಂಜುನಾಥ ಗೊಂಡಬಾಳ, ವೀರೇಶ ತಾವರಗೇರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>