<p><strong>ಕುಷ್ಟಗಿ</strong>: ತಾಲ್ಲೂಕಿನ ನಿಡಶೇಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಸಮಸ್ಯೆ, ಪುಂಡರ ಹಾವಳಿ ಮತ್ತು ಶಿಕ್ಷಕಿಯರ ಅಸಮರ್ಪಕ ಸೇವೆ ಸೇರಿದಂತೆ ಇತರೆ ಸಮಸ್ಯೆಗಳು ಗಮನಕ್ಕೆ ಬಂದರೂ ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಶಾಲೆಗೆ ಸಂಬಂಧಿಸಿದ ವಿಷಯಗಳ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದಿದ್ದು, ‘ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ. ಶಾಲೆ ಕೊಠಡಿ ನಿರ್ಮಾಣದ ಕಾಮಗಾರಿ ಎರಡು ವರ್ಷಗಳಿಂದಲೂ ಸ್ಥಗಿತಗೊಂಡಿದ್ದು, ಅಪೂರ್ಣ ಕೊಠಡಿಗಳಲ್ಲಿ ಕಿಡಿಗೇಡಿಗಳು ಅನೈತಿಕ ಚಟವಟಿಕೆ ನಡೆಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಶಾಲೆಯ ವಿಜ್ಞಾನ, ಗಣಿತ ಬೋಧಿಸಬೇಕಾದ ಶಿಕ್ಷಕಿ ಶಿವಲೀಲಾ ಹಂದಿಗನೂರು ಎಂಬುವವರು ಸರಿಯಾಗಿ ಪಾಠ ಮಾಡುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ತಿಳಿಹೇಳಿದರೂ ಅದೇ ಪ್ರವೃತ್ತಿ ಮುಂದುವರಿಸಿದ್ದಾರೆ. ಅಲ್ಲದೆ ಶಾಲೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಶಿಶುಪಾಲನಾ ರಜೆ ಪಡೆದಿರುವುದರಿಂದ ಈ ವಿಷಯಗಳಲ್ಲಿ ಮಕ್ಕಳಿಗೆ ಪಾಠ ಮಾಡುವವರೇ ಇಲ್ಲದಂತಾಗಿದೆ. 14 ವರ್ಷಗಳಿಂದ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಈ ಶಿಕ್ಷಕಿಯನ್ನು ವರ್ಗ ಮಾಡಿ ಬೇರೆ ಶಿಕ್ಷಕರನ್ನು ನಿಯೋಜಿಸಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಕೇವಲ ಎರಡು ಕಿ.ಮೀ ಸನಿಹದಲ್ಲಿದ್ದರೂ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಲ್ಲ. ಈಗಲಾದರೂ ಶಾಲೆಗೆ ಖುದ್ದಾಗಿ ಭೇಟಿ ನೀಡಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಕುರಿತು ಮಾಹಿತಿಗಾಗಿ ಹಲವು ಬಾರಿ ಸಂಪರ್ಕಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ದೂರವಾಣಿ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ತಾಲ್ಲೂಕಿನ ನಿಡಶೇಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಸಮಸ್ಯೆ, ಪುಂಡರ ಹಾವಳಿ ಮತ್ತು ಶಿಕ್ಷಕಿಯರ ಅಸಮರ್ಪಕ ಸೇವೆ ಸೇರಿದಂತೆ ಇತರೆ ಸಮಸ್ಯೆಗಳು ಗಮನಕ್ಕೆ ಬಂದರೂ ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಶಾಲೆಗೆ ಸಂಬಂಧಿಸಿದ ವಿಷಯಗಳ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದಿದ್ದು, ‘ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ. ಶಾಲೆ ಕೊಠಡಿ ನಿರ್ಮಾಣದ ಕಾಮಗಾರಿ ಎರಡು ವರ್ಷಗಳಿಂದಲೂ ಸ್ಥಗಿತಗೊಂಡಿದ್ದು, ಅಪೂರ್ಣ ಕೊಠಡಿಗಳಲ್ಲಿ ಕಿಡಿಗೇಡಿಗಳು ಅನೈತಿಕ ಚಟವಟಿಕೆ ನಡೆಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಶಾಲೆಯ ವಿಜ್ಞಾನ, ಗಣಿತ ಬೋಧಿಸಬೇಕಾದ ಶಿಕ್ಷಕಿ ಶಿವಲೀಲಾ ಹಂದಿಗನೂರು ಎಂಬುವವರು ಸರಿಯಾಗಿ ಪಾಠ ಮಾಡುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ತಿಳಿಹೇಳಿದರೂ ಅದೇ ಪ್ರವೃತ್ತಿ ಮುಂದುವರಿಸಿದ್ದಾರೆ. ಅಲ್ಲದೆ ಶಾಲೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಶಿಶುಪಾಲನಾ ರಜೆ ಪಡೆದಿರುವುದರಿಂದ ಈ ವಿಷಯಗಳಲ್ಲಿ ಮಕ್ಕಳಿಗೆ ಪಾಠ ಮಾಡುವವರೇ ಇಲ್ಲದಂತಾಗಿದೆ. 14 ವರ್ಷಗಳಿಂದ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಈ ಶಿಕ್ಷಕಿಯನ್ನು ವರ್ಗ ಮಾಡಿ ಬೇರೆ ಶಿಕ್ಷಕರನ್ನು ನಿಯೋಜಿಸಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಕೇವಲ ಎರಡು ಕಿ.ಮೀ ಸನಿಹದಲ್ಲಿದ್ದರೂ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಲ್ಲ. ಈಗಲಾದರೂ ಶಾಲೆಗೆ ಖುದ್ದಾಗಿ ಭೇಟಿ ನೀಡಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಕುರಿತು ಮಾಹಿತಿಗಾಗಿ ಹಲವು ಬಾರಿ ಸಂಪರ್ಕಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ದೂರವಾಣಿ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>