<p><strong>ಗಂಗಾವತಿ:</strong> ತಾಲ್ಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿರುವ ಢಣಾಪುರ, ಹೆಬ್ಬಾಳ, ಹಳೆ ಅಯೋಧ್ಯ ಸೇರಿ ಚಿಕ್ಕಜಂತಕಲ್ ಗ್ರಾಮಗಳಿಗೆ ತಹಶೀಲ್ದಾರ್ ಯು.ನಾಗರಾಜ ಬುಧವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ತುಂಗಾಭದ್ರಾ ಜಲಾಶಯದಿಂದ ಕಳೆದ ಒಂದು ವಾರದಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿಸಲಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿದ್ದು ಪ್ರತಿ 3 ಗಂಟೆಗೆ ಜಲಾಶಯ ಮಂಡಳಿ ಹೆಚ್ಚು ನೀರು ಬಿಡುವ ಮತ್ತು ಕಡಿಮೆ ಮಾಡುವ ಬಗ್ಗೆ ಸಂದೇಶ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ನದಿಪಾತ್ರಗಳ ಗ್ರಾಮಸ್ಥರು ಯಾವುದೇ ಕಾರಣಕ್ಕೂ ನದಿ ಸಮೀಪ ಮಕ್ಕಳನ್ನು, ಜಾನುವಾರುಗಳನ್ನು ಬಿಡಬಾರದು. ಯಾವುದೇ ಕೃಷಿ ಚಟುವಟಿಕೆ ಇದ್ದರೂ ಕೈಗೊಳ್ಳಬಾರದು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುವ ಸಾಧ್ಯತೆಯಿದ್ದು ಎಚ್ಚರಿಕೆಯಿಂದ ಇರಬೇಕು’ ಎಂದರು.</p>.<p>ಬಳಿಕ ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆಗೆ ಭೇಟಿ ನೀಡಿ ನೀರು ಹೆಚ್ಚಳವಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.</p>.<p>ಮರಳಿ ಹೋಬಳಿ ಉಪತಹಶೀಲ್ದಾರ್ ಮೆಹಬೂಬ್ ಅಲಿ, ಕಂದಾಯ ನಿರೀಕ್ಷಕ ಹಾಲೇಶ ಸೇರಿ ಇತರೆ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿರುವ ಢಣಾಪುರ, ಹೆಬ್ಬಾಳ, ಹಳೆ ಅಯೋಧ್ಯ ಸೇರಿ ಚಿಕ್ಕಜಂತಕಲ್ ಗ್ರಾಮಗಳಿಗೆ ತಹಶೀಲ್ದಾರ್ ಯು.ನಾಗರಾಜ ಬುಧವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ತುಂಗಾಭದ್ರಾ ಜಲಾಶಯದಿಂದ ಕಳೆದ ಒಂದು ವಾರದಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿಸಲಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿದ್ದು ಪ್ರತಿ 3 ಗಂಟೆಗೆ ಜಲಾಶಯ ಮಂಡಳಿ ಹೆಚ್ಚು ನೀರು ಬಿಡುವ ಮತ್ತು ಕಡಿಮೆ ಮಾಡುವ ಬಗ್ಗೆ ಸಂದೇಶ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ನದಿಪಾತ್ರಗಳ ಗ್ರಾಮಸ್ಥರು ಯಾವುದೇ ಕಾರಣಕ್ಕೂ ನದಿ ಸಮೀಪ ಮಕ್ಕಳನ್ನು, ಜಾನುವಾರುಗಳನ್ನು ಬಿಡಬಾರದು. ಯಾವುದೇ ಕೃಷಿ ಚಟುವಟಿಕೆ ಇದ್ದರೂ ಕೈಗೊಳ್ಳಬಾರದು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುವ ಸಾಧ್ಯತೆಯಿದ್ದು ಎಚ್ಚರಿಕೆಯಿಂದ ಇರಬೇಕು’ ಎಂದರು.</p>.<p>ಬಳಿಕ ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆಗೆ ಭೇಟಿ ನೀಡಿ ನೀರು ಹೆಚ್ಚಳವಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.</p>.<p>ಮರಳಿ ಹೋಬಳಿ ಉಪತಹಶೀಲ್ದಾರ್ ಮೆಹಬೂಬ್ ಅಲಿ, ಕಂದಾಯ ನಿರೀಕ್ಷಕ ಹಾಲೇಶ ಸೇರಿ ಇತರೆ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>